Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 27, 2020 | 7:06 PM

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ