AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR

ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಮಾನಹಾನಿ ಆರೋಪ: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ವಿರುದ್ಧ FIR
ಪ್ರಶಾಂತ್ ಸಂಬರಗಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 7:06 PM

Share

ಬೆಂಗಳೂರು: ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಹೆಸರು ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೆಚ್ಚು ಬಡ್ಡಿ ನೀಡದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿದ ಆರೋಪದ ಮೇಲೆ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ವೆಸ್ಟ್​​ ಆಫ್​​ ಕಾರ್ಡ್​​ ರೋಡ್​ ನಿವಾಸಿ ವೈ.ಕೆ. ದೇವನಾಥ್​ ಎಂಬುವವರು ಪ್ರಶಾಂತ್​ ಬಳಿ ಬಡ್ಡಿಗೆ ಸಾಲ ಪಡೆದುಕೊಂಡಿದ್ದರಂತೆ. ಶ್ಯೂರಿಟಿಗಾಗಿ ತಮ್ಮ ಆಸ್ತಿ ಪತ್ರಗಳನ್ನ ದೇವನಾಥ್​​ ಅಡವಿಟ್ಟಿದ್ದರು. ಬಡ್ಡಿ ಸಮೇತ ಹಣ ನೀಡಿದ್ದರೂ ಪ್ರಶಾಂತ್​ ಸಂಬರಗಿ ದಾಖಲೆ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಸಾಲವನ್ನು ಬಡ್ಡಿ ಸಮೇತ ಹಣ ಹಿಂದಿರುಗಿಸಿದ ನಂತರವೂ, ತೆಗೆದುಕೊಂಡ ಸಾಲಕ್ಕೆ ಶೇ 10ರಷ್ಟು ಬಡ್ಡಿ ನೀಡುವಂತೆ ಸಂಬರಗಿ ಬೇಡಿಕೆ ಇಟ್ಟಿದ್ದಾರೆ. ಬಡ್ಡಿ ಕೊಡಲು ಒಪ್ಪದಿದ್ದಾಗ ದೇವನಾಥ್​​ ವಿರುದ್ಧ ಪ್ರಶಾಂತ್​ ಸಂಬರಗಿ ವಾಟ್ಸಾಪ್​​ ಗ್ರೂಪ್​​ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ. ಹೀಗಾಗಿ, ದೇವನಾಥ್​ ದೂರು ಆಧರಿಸಿ ಪ್ರಶಾಂತ್​ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.

ಸ್ಯಾಂಡಲ್​ವುಡ್​ನಲ್ಲಿ ಡ್ರಗ್​ ವಿಚಾರ ಮೊದಲ ಬಾರಿಗೆ ಸುದ್ದಿಯಾದಾಗ ಪ್ರಶಾಂತ್​ ಸಂಬರಗಿ ಮುನ್ನಲೆಗೆ ಬಂದಿದ್ದರು. ಸಾಕಷ್ಟು ನಟ-ನಟಿಯರ ವಿರುದ್ಧ ಡ್ರಗ್​ ಸೇವನೆಯ ಆರೋಪ ಮಾಡಿದ್ದರು. ಸರ್ಜಾ ಕುಟುಂಬಕ್ಕೆ ಸಂಬರಗಿ ಆಪ್ತರಾಗಿದ್ದಾರೆ.

ಸಂಬರಗಿ ಮತ್ತೊಂದು Bomb: ಇಬ್ಬರು ದೊಡ್ಡ ನಟರ ವಿವರ ಬಹಿರಂಗಪಡಿಸುತ್ತೇನೆ!

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ