AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು

ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಮಹಿಳಾ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್​ಐಆರ್ ದಾಖಲು
ಸೌಮ್ಯಾ ರೆಡ್ಡಿ
ರಾಜೇಶ್ ದುಗ್ಗುಮನೆ
|

Updated on:Jan 22, 2021 | 8:03 PM

Share

ಬೆಂಗಳೂರು: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನವೆಂಬರ್ 20ರಂದು ಫ್ರೀಡಂ ಪಾರ್ಕ್​ನಿಂದ ರಾಜಭವನದವರೆಗೆ ಕಾಂಗ್ರೆಸ್​ ನಾಯಕರು ಪ್ರತಿಭಟನೆ ಹೊರಟಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆಯಲು ಬಂದ ಪೊಲೀಸರಿಗೆ ಶಾಸಕಿ ಸೌಮ್ಯಾ ರೆಡ್ಡಿ ಅವಾಜ್​ ಹಾಕಿದ್ದರು. ಲೇಡಿ ಕಾನ್​ಸ್ಟೇಬಲ್​ ಹಾಗೂ ಸೌಮ್ಯಾ ರೆಡ್ಡಿ ನಡುವೆ ವಾಗ್ವಾದ ಕೂಡ ಏರ್ಪಟ್ಟಿತ್ತು. ಈ ವೇಳೆ ಸೌಮ್ಯಾ ರೆಡ್ಡಿ ಕಾನ್​ಸ್ಟೇಬಲ್​ ಮೇಲೆ ಹಲ್ಲೆ ಮಾಡಿದ್ದಾರೆ.

ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್​ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸೌಮ್ಯರೆಡ್ಡಿ ವಿರುದ್ಧ ಈಗ ಎಫ್ ಐಆರ್ ದಾಖಲು ಮಾಡಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಭಾರತೀಯ ನೀತಿ ಸಂಹಿತೆ ಕಲಂ 353 ಅಡಿ ಎಫ್​ಐಆರ್ ದಾಖಲಾಗಿದೆ.

ಲೇಡಿ ಕಾನ್​ಸ್ಟೇಬಲ್​ ಮೇಲೆ ಶಾಸಕಿ ಸೌಮ್ಯಾ ರೆಡ್ಡಿ ಹಲ್ಲೆ: ವಿಡಿಯೋ ವೈರಲ್​

Published On - 8:00 pm, Fri, 22 January 21

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್