AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಿಂದ ಆಗಮಿಸಿದ ಮೊದಲ ಫ್ಲೈಟ್, ದೇವನಹಳ್ಳಿಗೆ ಬಂದಿಳಿದ 240 ಪ್ರಯಾಣಿಕರು

ಕಳೆದ ಹಲವು ದಿನಗಳಿಂದ ಬ್ರಿಟನ್​ನಿಂದ ಬಂದ ಪ್ರಯಾಣಿಕರಲ್ಲಿ ರೂಪಾಂತರ ಕೊರೊನಾ ವೈರಸ್ ಕಾಣಿಸಿಕೊಂಡ ಹಿನ್ನಲೆ ಇಡೀ ರಾಜ್ಯವೇ ಶಾಕ್ ಹಾಗಿತ್ತು. ರೂಪಾಂತರ ವೈರಸ್ ಭೀತಿಯಿಂದ ಸರ್ಕಾರ ಇಂಗ್ಲೆಂಡ್​ನಿಂದ ಬಂದವರ ಪತ್ತೆಗೆ ತಲೆ ಕೆಡಿಸಿಕೊಂಡಿದೆ. ಇದರ ನಡುವೆ ಮತ್ತೆ ಇಂದು ಇಂಗ್ಲೆಂಡ್​ನಿಂದ ಬೆಂಗಳೂರಿಗೆ ವಿಮಾನಯಾನ ಆರಂಭವಾಗಲಿದ್ದು, ರಾಜ್ಯಕ್ಕೆ ಮತ್ತೊಂದು ಅಗ್ನಿ ಪರೀಕ್ಷೆ ಎದುರಾಗಿದೆ.

ಲಂಡನ್​ನಿಂದ ಆಗಮಿಸಿದ ಮೊದಲ ಫ್ಲೈಟ್, ದೇವನಹಳ್ಳಿಗೆ ಬಂದಿಳಿದ 240 ಪ್ರಯಾಣಿಕರು
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on: Jan 10, 2021 | 6:54 AM

Share

ದೇವನಹಳ್ಳಿ: ಕೊರೊನಾ ನಿಯಂತ್ರಣಕ್ಕೆ ಬಂತು ಅಂತಿದ್ದ ಹಾಗೆ ಬ್ರಿಟನ್​ನಲ್ಲಿ ರೂಪ ಬದಲಿಸಿಕೊಂಡು ವಿಶ್ವದ ಜನರ ಮೇಲೆ ಮತ್ತೊಮ್ಮೆ ಅಟ್ಯಾಕ್ ಮಾಡಲು ಮಹಾಮಾರಿ ಸಿದ್ಧವಾಗಿತ್ತು. ಇದನ್ನ ತಡೆಯಲು ಬ್ರಿಟನ್​ನಿಂದ ಬರುವ ವಿಮಾನಗಳಿಗೆ ನಿಷೇಧ ಹೇರಲಾಗಿತ್ತು. ಈಗ ಮತ್ತೆ ಇಂಗ್ಲೆಂಡ್​ನಿಂದ ವಿಮಾನಯಾನ ಆರಂಭವಾಗಿದ್ದು, ಇಂದು ಬೆಳ್ಳಂ ಬೆಳಗ್ಗೆ 4.30ರ ವೇಳೆಗೆ ಬೆಂಗಳೂರಿಗೆ ಲಂಡನ್ ಫ್ಲೈಟ್ ಬಂದಿಳಿದಿದೆ.

ಮೊದಲ ವಿಮಾನದಲ್ಲಿ 250 ರಿಂದ 300 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದು, ಯುಕೆಯಿಂದ ಬಂದ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. ಈ ಹಿಂದೆ ಬಂದವರ ರೀತಿ ನೇರವಾಗಿ ಮನೆಗೆ ಕಳುಹಿಸದೆ, ಏರ್​ಪೋರ್ಟ್​ನಲ್ಲೇ ಕೊವಿಡ್ ಟೆಸ್ಟ್ ಮಾಡಿ ರಿಪೋರ್ಟ್ ಬಂದ ನಂತರ ಕಳಿಸಲು ನಿರ್ಧರಿಸಲಾಗಿದೆ.

ಇನ್ನು KIA-ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ನಲ್ಲಿ ಟೆಸ್ಟಿಂಗ್ ಸ್ಕ್ರೀನಿಂಗ್ ಇಮಿಗ್ರೇಷನ್ ಮತ್ತು ವಿಳಾಸ ನೊಂದಾಣಿಗೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 30 ಕ್ಕೂ ಅಧಿಕ ಸಿಬ್ಬಂದಿ ಟರ್ಮಿನಲ್ ಒಳಭಾಗದಲ್ಲಿ ನಿಯೋಜನೆಗೊಂಡಿದ್ದಾರೆ. ಬಂದ ಪ್ರಯಾಣಿಕರ ಟೆಸ್ಟಿಂಗ್​ಗೆ 12 ಜನ ಆರೋಗ್ಯ ಇಲಾಖೆ ಸಿಬ್ಬಂದಿ, ವಿಳಾಸ ಬರೆದುಕೊಂಡು ಸ್ಟಾಪಿಂಗ್ ಮಾಡಲು 6 ಜನ ಕಂದಾಯ ಇಲಾಖೆ‌ ಸಿಬ್ಬಂದಿ, ರಿಪೋರ್ಟ್ ಬರುವವರೆಗೂ ಟರ್ಮಿನಲ್​ನಲ್ಲಿ ಅಡ್ಡಾಡದಂತೆ ನೋಡಿಕೊಳ್ಳಲು 5 ಜನ ಪೊಲೀಸರು ನಿಯೋಜನೆಗೊಂಡಿದ್ದಾರೆ.

ಬ್ರಿಟನ್​ನಿಂದ ಬಂದವರ ಕೈ ಮೇಲೆ ಸ್ಟಾಂಪಿಂಗ್ ಕಳೆದ ಹಲವು ದಿನಗಳಿಂದ ಇಂಗ್ಲೆಂಡ್​ನಿಂದ ಬೆಂಗಳೂರಿಗೆ ಬರದೇ ಇದ್ದ ವಿಮಾನಗಳು, ಇಂದಿನಿಂದ ಆಗಮಿಸುತ್ತಿವೆ. ಹೀಗಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ನಿನ್ನೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲಿಸಿದ್ರು. ಸಂಜೆ ಐದು ಗಂಟೆಗೆ ಆರೋಗ್ಯಾಧಿಕಾರಿಗಳ ಜತೆ ಏರ್​ಪೋರ್ಟ್​ಗೆ ಆಗಮಿಸಿದ ಸಚಿವ ಸುಧಾಕರ್ ವಿಮಾನ ನಿಲ್ದಾಣದಲ್ಲಿ ಕೈಗೊಂಡಿರೋ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ಪಡೆದ್ರು.

ಇಂಗ್ಲೆಂಡ್​ನಲ್ಲಿ ಕೊರೊನಾ ಟೆಸ್ಟ್ ಮಾಡಿಸಿ ರಿಪೋರ್ಟ್ ತಂದಿದ್ದರೂ, ಇಲ್ಲಿ ಟೆಸ್ಟ್ ಮಾಡಿಸೋದು ಕಡ್ಡಾಯ ಅಂತಾ ಸುಧಾಕರ್ ಹೇಳಿದ್ರು. ಪಾಸಿಟಿವ್ ಬಂದ್ರೆ ಆರೋಗ್ಯ ಇಲಾಖೆ ಗುರುತಿಸಿರುವ ಕಡೆ ಕ್ವಾರಂಟೈನ್ ಆಗಬೇಕು. ಸರ್ಕಾರದ ಕಠಿಣ ಮಾರ್ಗಸೂಚಿಗಳನ್ನ ಪಾಲನೆ ಮಾಡೋ ಜೊತೆಗೆ, ಬ್ರಿಟನ್​ನಿಂದ ಬಂದವರ ಕೈ ಮೇಲೆ ಸ್ಟಾಂಪಿಂಗ್ ಮಾಡೋದಾಗಿ ತಿಳಿಸಿದ್ರು.

ಈ ಹಿಂದೆ ಯುಕೆಯಿಂದ ಬಂದು ನಾಪತ್ತೆಯಾಗಿರೋ ಪ್ರಯಾಣಿಕರನ್ನ ಹುಡುಕಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡ್ತಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಯುಕೆಯಿಂದ ಪ್ರಯಾಣಿಕರು ಆಗಮಿಸುತ್ತಿದ್ದು, ಈ‌ ಬಾರಿಯಾದ್ರು ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

ಲಂಡನ್​ನಿಂದ ಬೆಂಗಳೂರಿಗೆ ಬಂದ ಮೂವರಿಗೆ ಕೊರೊನಾ ದೃಢ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ