AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರದಿಂದ ಹೆವಿ ಲಾಸ್.. ಪ್ರತಿಭಟನೆ ಬಿಡಿ ಕೆಲಸ ಆರಂಭಿಸಿ, ಸಂಬಳ ಹೆಚ್ಚಿಸುವ ಬಗ್ಗೆ ಆಮೇಲೆ ಮಾತ್ನಾಡುವೆ -ಲಕ್ಷ್ಮಣ ಸವದಿ

ಇನ್ನು ಈ ಬಗ್ಗೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, ಎಸ್ಮಾ ಬಗ್ಗೆಯೂ ನಾವು ಚಿಂತನೆ ಮಾಡಿಲ್ಲ. ತೆಲಂಗಾಣದ ಮಾದರಿ ಹಠಕ್ಕೆ ಬೀಳಬೇಡಿ. ಸರ್ಕಾರ ಮೃದು ಧೋರಣೆಯಲ್ಲಿದೆ. ಪ್ರತಿಭಟನೆ ಬಿಡಿ ಕೆಲಸ ಆರಂಭಿಸಿ ಸಂಬಳ ಹೆಚ್ಚು ಮಾಡುವ ಬಗ್ಗೆ ನಾವು ಮಾತನಾಡುತ್ತೇವೆ -ಲಕ್ಷ್ಮಣ ಸವದಿ

ಮುಷ್ಕರದಿಂದ ಹೆವಿ ಲಾಸ್.. ಪ್ರತಿಭಟನೆ ಬಿಡಿ ಕೆಲಸ ಆರಂಭಿಸಿ, ಸಂಬಳ ಹೆಚ್ಚಿಸುವ ಬಗ್ಗೆ ಆಮೇಲೆ ಮಾತ್ನಾಡುವೆ -ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
ಆಯೇಷಾ ಬಾನು
|

Updated on:Apr 15, 2021 | 12:00 PM

Share

ಬೀದರ್: ಕಳೆದ 9 ದಿನಗಳಿಂದ 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ದಿನೇದಿನೆ ಈ ಮುಷ್ಕರ ತೀವ್ರ ಗೊಳ್ಳುತ್ತಿದೆ. ಹೀಗಾಗಿ ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ರೂ. ಲಾಸ್ ಆಗಿದೆ ಎಂದು ಹುಮ್ನಾಬಾದ್‌ನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 59 KSRTC ಬಸ್‌ಗಳ ಮೇಲೆ ಕಲ್ಲು ಎಸೆಯಲಾಗಿದೆ. ಈ ರೀತಿ ಕಲ್ಲು ತೂರುವುದು ಸರಿಯಲ್ಲ. ಕಲ್ಲು ತೂರುವವರ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ ಎಂದು ಹೇಳಿದ್ರು. ರಾಜ್ಯದಲ್ಲಿ ಇಂದು 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್‌ಗಳು ಓಡಾಡುವ ವಿಶ್ವಾಸ ಇದೆ. ಆದ್ರೆ ಎಲ್ಲಾ ಕಡೆ ಖಾಸಗಿ ಬಸ್‌ಗಳ ವ್ಯವಸ್ಥೆ ಮಾಡಿದ್ದೇವೆ. ರಾಜ್ಯದಲ್ಲಿ 24 ಸಾವಿರ ಖಾಸಗಿ ಬಸ್‌ಗಳು ರಸ್ತೆಗಿಳಿದಿವೆ. ಇಲ್ಲಿಯವರೆಗೆ ಮುಷ್ಕರದಿಂದ 170 ಕೋಟಿ ರೂ. ಲಾಸ್ ಆಗಿದೆ. ನಮ್ಮಲ್ಲಿ 25 ಸಾವಿರ ಬಸ್ ಇದೆ. 1.30 ಸಾವಿರ ಸಿಬ್ಬಂದಿ ಇದ್ದಾರೆ. ಖಾಸಗಿಯವರಿಗೆ ಕೊಟ್ಟರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಖಾಸಗೀಕರಣ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ.

ಎಸ್ಮಾ ಬಗ್ಗೆಯೂ ನಾವು ಚಿಂತನೆ ಮಾಡಿಲ್ಲ ಇನ್ನು ಈ ಬಗ್ಗೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, ಎಸ್ಮಾ ಬಗ್ಗೆಯೂ ನಾವು ಚಿಂತನೆ ಮಾಡಿಲ್ಲ. ತೆಲಂಗಾಣದ ಮಾದರಿ ಹಠಕ್ಕೆ ಬೀಳಬೇಡಿ. ಸರ್ಕಾರ ಮೃದು ಧೋರಣೆಯಲ್ಲಿದೆ. ಪ್ರತಿಭಟನೆ ಬಿಡಿ ಕೆಲಸ ಆರಂಭಿಸಿ ಸಂಬಳ ಹೆಚ್ಚು ಮಾಡುವ ಬಗ್ಗೆ ನಾವು ಮಾತನಾಡುತ್ತೇವೆ. ಭಿಕ್ಷಾಟನೆ ಮಾಡಿಸಿರುವುದು ಅವಮಾನಕರ. ಇದು ಖಂಡನೀಯ ಹಾಗೂ ಕಾನೂನುಬಾಹಿರ. ಮಹಿಳೆಯರು, ಮಕ್ಕಳನ್ನು ಕಳಿಸಿ ಭಿಕ್ಷಾಟನೆ ಮಾಡಿಸಿದ್ದಾರೆ. ಇಷ್ಟು ಕೀಳುಮಟ್ಟಕ್ಕೆ ಇಳಿಯಬಾರದು, ಇದು ಅವಮಾನಕರ ಎಂದು ಹುಮ್ನಾಬಾದ್‌ನಲ್ಲಿ ಲಕ್ಷ್ಮಣ ಸವದಿ ನೌಕರನ್ನುದ್ದೇಶಿಸಿ ಮಾತನಾಡಿದ್ರು.

ಇದನ್ನೂ ಓದಿ: KSRTC BMTC Strike: ಸಾರಿಗೆ ಸಿಬ್ಬಂದಿಯಿಂದ 60 ಬಸ್​ಗಳ ಮೇಲೆ ದಾಳಿ; ಪೊಲೀಸ್ ಕ್ರಮ ಗ್ಯಾರೆಂಟಿ ಎಂದ ಸಚಿವ ಲಕ್ಷ್ಮಣ ಸವದಿ

Published On - 11:59 am, Thu, 15 April 21

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್