AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವತಿಯಿಂದ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ; ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವೇನು?

ಬಸವ ಜನ್ಮಭೂಮಿಯಲ್ಲಿ ಬಸವ ಜಯಂತಿಯನ್ನು ಆಚರಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಸಿತ್ತು.

ಸರ್ಕಾರದ ವತಿಯಿಂದ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ; ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವೇನು?
ಬಸವಣ್ಣ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:May 03, 2022 | 1:10 PM

Share

ವಿಜಯಪುರ: ಸರ್ಕಾರದ (Government) ವತಿಯಿಂದ ಇದೇ ಮೊದಲ ಬಾರಿಗೆ ಇಂದು ಬಸವ ಜನ್ಮ ಭೂಮಿಯಲ್ಲಿ ಬಸವ ಜಯಂತಿ (Basava Yayanti) ಆಚರಣೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ ಹಾಗೂ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಜಂಟಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಗಿದೆ. ಆದರೆ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಗೈರಾಗಿದ್ದರು. ಜಿಲ್ಲೆಯ ಬಹುತೇಕ ಶಾಸಕರು ಹಾಗೂ ಸಂಸದರು ಕೂಡಾ ಹಾಜರಿಲಿಲ್ಲ. ಹೀಗಾಗಿ ಹೆಸರಿಗೆ ಮಾತ್ರ ಸರ್ಕಾರ ಬಸವ ಜಯಂತಿ ಆಚರಣೆಗೆ ಮುಂದಾಯಿತಾ ಎಂದು ಬಸವಾದಿ ಶರಣ ಭಕ್ತರು ಅಸಮಾಧಾನಗೊಂಡಿದ್ದಾರೆ.

ಬಸವ ಜನ್ಮಭೂಮಿಯಲ್ಲಿ ಬಸವ ಜಯಂತಿಯನ್ನು ಆಚರಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಸಿತ್ತು. ಆದೇಶಕ್ಕೆ ಮಾತ್ರ ಬಸವ ಜಯಂತಿ ಸೀಮಿತವಾಯಿತಾ ಎಂದು ಜನಸಾಮಾನ್ಯರು ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಒಂದೂವರೆ ದಶಕದಿಂದ ಜಿಲ್ಲೆಯ ಜನಪ್ರತಿನಿಧಿಗಳು, ಮಠಾಧೀಶರು ಬಸವಾದಿ ಶರಣ ಭಕ್ತರು ಒತ್ತಾಯಿಸಿ ಹೋರಾಟ‌ ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬಸವನಬಾಗೇವಾಡಿಯಲ್ಲಿ ಸರ್ಕಾರದಿಂದ ಬಸವ ಜಯಂತಿ ಆಚರಣೆ ಮಾಡಲಾಗಿದೆ. ಬಸವೇಶ್ವರ ದೇವಾಲಯದ ಅಂತರರಾಷ್ಟ್ರೀಯ ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಬಸವ ಜಯಂತಿ ಸಂಭ್ರಮ ಜೋರು: ಬಾಗಲಕೋಟೆ: ಬನಹಟ್ಟಿಯಲ್ಲಿ ಬಸವ ಜಯಂತಿ ಸಂಭ್ರಮ ಜೋರಾಗಿತ್ತು. ವಚನ ಗ್ರಂಥ ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ್ದರು. ಬಸವ ಸಮಿತಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಬನಹಟ್ಟಿ ನಗರದ ಈಶ್ವರಲಿಂಗ ಮೈದಾನದಿಂದ ಚಾಲನೆ ಸಿಕ್ಕು ಮೆರವಣಿಗೆ ಆರಂಭವಾಗಿ, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಅಮಿತ್ ಶಾ: ಸ್ಮಾರ್ಟ್​ ಪೊಲೀಸ್ E BEATಗೆ ಚಾಲನೆ, ನೃಪತುಂಗ ವಿವಿ ಉದ್ಘಾಟನೆ

ಬರ್ಲಿನ್​​ನಲ್ಲಿ ಭಾಷಣ ಮಾಡಿ, ಕಾಂಗ್ರೆಸ್​​ನ್ನು ಟೀಕಿಸಿದ ಪ್ರಧಾನಿ ಮೋದಿ; 1 ರೂಪಾಯಿ, 15 ಪೈಸೆ ಹೇಳಿಕೆ ಬಗ್ಗೆ ಟೀಕೆ

Published On - 12:55 pm, Tue, 3 May 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!