AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವತಿಯಿಂದ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ; ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವೇನು?

ಬಸವ ಜನ್ಮಭೂಮಿಯಲ್ಲಿ ಬಸವ ಜಯಂತಿಯನ್ನು ಆಚರಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಸಿತ್ತು.

ಸರ್ಕಾರದ ವತಿಯಿಂದ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ ಆಚರಣೆ; ಜನಸಾಮಾನ್ಯರ ಅಸಮಾಧಾನಕ್ಕೆ ಕಾರಣವೇನು?
ಬಸವಣ್ಣ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:May 03, 2022 | 1:10 PM

Share

ವಿಜಯಪುರ: ಸರ್ಕಾರದ (Government) ವತಿಯಿಂದ ಇದೇ ಮೊದಲ ಬಾರಿಗೆ ಇಂದು ಬಸವ ಜನ್ಮ ಭೂಮಿಯಲ್ಲಿ ಬಸವ ಜಯಂತಿ (Basava Yayanti) ಆಚರಣೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತಿ ಹಾಗೂ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ ಜಂಟಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಗಿದೆ. ಆದರೆ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಗೈರಾಗಿದ್ದರು. ಜಿಲ್ಲೆಯ ಬಹುತೇಕ ಶಾಸಕರು ಹಾಗೂ ಸಂಸದರು ಕೂಡಾ ಹಾಜರಿಲಿಲ್ಲ. ಹೀಗಾಗಿ ಹೆಸರಿಗೆ ಮಾತ್ರ ಸರ್ಕಾರ ಬಸವ ಜಯಂತಿ ಆಚರಣೆಗೆ ಮುಂದಾಯಿತಾ ಎಂದು ಬಸವಾದಿ ಶರಣ ಭಕ್ತರು ಅಸಮಾಧಾನಗೊಂಡಿದ್ದಾರೆ.

ಬಸವ ಜನ್ಮಭೂಮಿಯಲ್ಲಿ ಬಸವ ಜಯಂತಿಯನ್ನು ಆಚರಿಸಬೇಕು ಎಂಬ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ. ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಸರ್ಕಾರ ಆದೇಶ ಹೊರಡಿಸಸಿತ್ತು. ಆದೇಶಕ್ಕೆ ಮಾತ್ರ ಬಸವ ಜಯಂತಿ ಸೀಮಿತವಾಯಿತಾ ಎಂದು ಜನಸಾಮಾನ್ಯರು ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಒಂದೂವರೆ ದಶಕದಿಂದ ಜಿಲ್ಲೆಯ ಜನಪ್ರತಿನಿಧಿಗಳು, ಮಠಾಧೀಶರು ಬಸವಾದಿ ಶರಣ ಭಕ್ತರು ಒತ್ತಾಯಿಸಿ ಹೋರಾಟ‌ ಮಾಡಿದ್ದರು. ಇಂದು ಇದೇ ಮೊದಲ ಬಾರಿಗೆ ಬಸವನಬಾಗೇವಾಡಿಯಲ್ಲಿ ಸರ್ಕಾರದಿಂದ ಬಸವ ಜಯಂತಿ ಆಚರಣೆ ಮಾಡಲಾಗಿದೆ. ಬಸವೇಶ್ವರ ದೇವಾಲಯದ ಅಂತರರಾಷ್ಟ್ರೀಯ ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಬಸವ ಜಯಂತಿ ಸಂಭ್ರಮ ಜೋರು: ಬಾಗಲಕೋಟೆ: ಬನಹಟ್ಟಿಯಲ್ಲಿ ಬಸವ ಜಯಂತಿ ಸಂಭ್ರಮ ಜೋರಾಗಿತ್ತು. ವಚನ ಗ್ರಂಥ ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದ್ದರು. ಬಸವ ಸಮಿತಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಬನಹಟ್ಟಿ ನಗರದ ಈಶ್ವರಲಿಂಗ ಮೈದಾನದಿಂದ ಚಾಲನೆ ಸಿಕ್ಕು ಮೆರವಣಿಗೆ ಆರಂಭವಾಗಿ, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿತು.

ಇದನ್ನೂ ಓದಿ

ಬೆಂಗಳೂರಿನಲ್ಲಿ ಅಮಿತ್ ಶಾ: ಸ್ಮಾರ್ಟ್​ ಪೊಲೀಸ್ E BEATಗೆ ಚಾಲನೆ, ನೃಪತುಂಗ ವಿವಿ ಉದ್ಘಾಟನೆ

ಬರ್ಲಿನ್​​ನಲ್ಲಿ ಭಾಷಣ ಮಾಡಿ, ಕಾಂಗ್ರೆಸ್​​ನ್ನು ಟೀಕಿಸಿದ ಪ್ರಧಾನಿ ಮೋದಿ; 1 ರೂಪಾಯಿ, 15 ಪೈಸೆ ಹೇಳಿಕೆ ಬಗ್ಗೆ ಟೀಕೆ

Published On - 12:55 pm, Tue, 3 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ