AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು
ಹೆಬ್ಬಾಳ ಕೆರೆಯಲ್ಲಿ ಸಾವನ್ನಪ್ಪಿರುವ ಮೀನುಗಳು
sandhya thejappa
|

Updated on: Mar 13, 2021 | 10:41 AM

Share

ಮೈಸೂರು: ಈ ಬಾರಿ ರಾಜ್ಯದ ಹಲವು ಕಡೆಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಕೆರೆಯ ಮೀನುಗಳು ಸಾವನ್ನಪ್ಪುತ್ತಿವೆ. ಕೆಲವು ಕಡೆ ಕಾರ್ಖಾನೆಯ ಕಲುಷಿತ ನೀರಿನಿಂದ ಸಾವನ್ನಪ್ಪಿದ್ದರೆ ಇನ್ನು ಕೆಲವು ಕಡೆ ಉದ್ದೇಶ ಪೂರ್ವಕವಾಗಿ ಕೆರೆಗೆ ವಿಷವನ್ನು ಹಾಕಿ ಮೀನುಗಳನ್ನು ಸಾಯಿಸಿರುವ ಘಟನೆಗಳು ಕೂಡಾ ನಡೆದಿವೆ. ಅದರಂತೆ ಇತ್ತೀಚೆಗಷ್ಟೇ ಅಭಿವೃದ್ಧಿ ಹೊಂದಿದ್ದ ಕೆರೆಯ ಮೀನುಗಳು ಇದೀಗ ಸಾವನ್ನಪ್ಪಿರುವ ಘಟನೆ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು. ಅಲ್ಲದೇ ಬಿಟ್ಟಿದ್ದ ಮೀನುಗಳನ್ನು ಸಚಿವರು ನಿನ್ನೆ ವೀಕ್ಷಣೆಯನ್ನೂ ಮಾಡಿದ್ದರು. ಆದರೆ ಇದೀಗ ಹೆಬ್ಬಾಳ ಕೆರೆಯ ಮೀನುಗಳು ಸಾವನ್ನಪ್ಪಿವೆ. ಮೀನುಗಳ ಸಾವಿಗೆ ಇನ್ನು ಕಾರಣ ತಿಳಿದುಬಂದಿಲ್ಲ. ಸತ್ತಿರುವ ಮೀನುಗಳಿಂದ ವಿಪರೀತ ವಾಸನೆ ಹುಟ್ಟಿದ್ದು, ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ.

ಸತ್ತಿರುವ ಮೀನುಗಳಿಂದ ವಾಸನೆ ಹೆಚ್ಚಾಗಿ ಓಡಾಡುವವರಿಗೆ ತೊಂದರೆ ಎದುರಾಗಿದೆ

ಸಾವನ್ನಪ್ಪಿರುವ ಮೀನುಗಳು ಕೆರೆಯ ದಡದ ಮೇಲೆ ಬಂದಿವೆ

ಚಿಕ್ಕ ಮಗಳೂರಿನಲ್ಲಿ ಮೀನುಗಳ ಮಾರಣಹೋಮ ಕೆರೆಗೆ ವಿಷ ಹಾಕಿದ್ದರಿಂದ ರಾಶಿ- ರಾಶಿ ಮೀನುಗಳು ಸಾವನ್ನಪ್ಪಿರುವ ಘಟನೆ ಎರಡು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೈಮಲ್ಲಾಪುರದಲ್ಲೂ ನಡೆದಿತ್ತು. ತಮ್ಮಯ್ಯ ಎಂಬುವವರ ಕೆರೆಯಲ್ಲಿ ಮೀನುಗಳನ್ನು ಸಾಕಿದ್ದರು. ಆದರೆ ಕಿಡಿಗೇಡಿಗಳು ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದವು.

ಹೆಬ್ಬಾಳ ಕೆರೆಯಲ್ಲಿ ತೇಲುತ್ತಿರುವ ಮೀನುಗಳು

ಇದನ್ನೂ ಓದಿ

ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ಭಾರತದಲ್ಲಿ ಕೊರೊನಾದಿಂದ ಸಾವು ಸಂಭವಿಸಿ ಭರ್ತಿ ಒಂದು ವರ್ಷ, ಸಾವಿಗೆ ನಾಂದಿ ಹಾಡಿದ್ದೇ ಕರ್ನಾಟಕ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!