Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು
ಹೆಬ್ಬಾಳ ಕೆರೆಯಲ್ಲಿ ಸಾವನ್ನಪ್ಪಿರುವ ಮೀನುಗಳು
Follow us
sandhya thejappa
|

Updated on: Mar 13, 2021 | 10:41 AM

ಮೈಸೂರು: ಈ ಬಾರಿ ರಾಜ್ಯದ ಹಲವು ಕಡೆಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಕೆರೆಯ ಮೀನುಗಳು ಸಾವನ್ನಪ್ಪುತ್ತಿವೆ. ಕೆಲವು ಕಡೆ ಕಾರ್ಖಾನೆಯ ಕಲುಷಿತ ನೀರಿನಿಂದ ಸಾವನ್ನಪ್ಪಿದ್ದರೆ ಇನ್ನು ಕೆಲವು ಕಡೆ ಉದ್ದೇಶ ಪೂರ್ವಕವಾಗಿ ಕೆರೆಗೆ ವಿಷವನ್ನು ಹಾಕಿ ಮೀನುಗಳನ್ನು ಸಾಯಿಸಿರುವ ಘಟನೆಗಳು ಕೂಡಾ ನಡೆದಿವೆ. ಅದರಂತೆ ಇತ್ತೀಚೆಗಷ್ಟೇ ಅಭಿವೃದ್ಧಿ ಹೊಂದಿದ್ದ ಕೆರೆಯ ಮೀನುಗಳು ಇದೀಗ ಸಾವನ್ನಪ್ಪಿರುವ ಘಟನೆ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು. ಅಲ್ಲದೇ ಬಿಟ್ಟಿದ್ದ ಮೀನುಗಳನ್ನು ಸಚಿವರು ನಿನ್ನೆ ವೀಕ್ಷಣೆಯನ್ನೂ ಮಾಡಿದ್ದರು. ಆದರೆ ಇದೀಗ ಹೆಬ್ಬಾಳ ಕೆರೆಯ ಮೀನುಗಳು ಸಾವನ್ನಪ್ಪಿವೆ. ಮೀನುಗಳ ಸಾವಿಗೆ ಇನ್ನು ಕಾರಣ ತಿಳಿದುಬಂದಿಲ್ಲ. ಸತ್ತಿರುವ ಮೀನುಗಳಿಂದ ವಿಪರೀತ ವಾಸನೆ ಹುಟ್ಟಿದ್ದು, ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ.

ಸತ್ತಿರುವ ಮೀನುಗಳಿಂದ ವಾಸನೆ ಹೆಚ್ಚಾಗಿ ಓಡಾಡುವವರಿಗೆ ತೊಂದರೆ ಎದುರಾಗಿದೆ

ಸಾವನ್ನಪ್ಪಿರುವ ಮೀನುಗಳು ಕೆರೆಯ ದಡದ ಮೇಲೆ ಬಂದಿವೆ

ಚಿಕ್ಕ ಮಗಳೂರಿನಲ್ಲಿ ಮೀನುಗಳ ಮಾರಣಹೋಮ ಕೆರೆಗೆ ವಿಷ ಹಾಕಿದ್ದರಿಂದ ರಾಶಿ- ರಾಶಿ ಮೀನುಗಳು ಸಾವನ್ನಪ್ಪಿರುವ ಘಟನೆ ಎರಡು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೈಮಲ್ಲಾಪುರದಲ್ಲೂ ನಡೆದಿತ್ತು. ತಮ್ಮಯ್ಯ ಎಂಬುವವರ ಕೆರೆಯಲ್ಲಿ ಮೀನುಗಳನ್ನು ಸಾಕಿದ್ದರು. ಆದರೆ ಕಿಡಿಗೇಡಿಗಳು ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದವು.

ಹೆಬ್ಬಾಳ ಕೆರೆಯಲ್ಲಿ ತೇಲುತ್ತಿರುವ ಮೀನುಗಳು

ಇದನ್ನೂ ಓದಿ

ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ಭಾರತದಲ್ಲಿ ಕೊರೊನಾದಿಂದ ಸಾವು ಸಂಭವಿಸಿ ಭರ್ತಿ ಒಂದು ವರ್ಷ, ಸಾವಿಗೆ ನಾಂದಿ ಹಾಡಿದ್ದೇ ಕರ್ನಾಟಕ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ