AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು.

ಮೈಸೂರಿನ ಹೆಬ್ಬಾಳ ಕೆರೆಯಲ್ಲಿ ಮೀನುಗಳ ಸಾವು: ಮೂಗು ಮುಚ್ಚಿಕೊಂಡು ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು
ಹೆಬ್ಬಾಳ ಕೆರೆಯಲ್ಲಿ ಸಾವನ್ನಪ್ಪಿರುವ ಮೀನುಗಳು
sandhya thejappa
|

Updated on: Mar 13, 2021 | 10:41 AM

Share

ಮೈಸೂರು: ಈ ಬಾರಿ ರಾಜ್ಯದ ಹಲವು ಕಡೆಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ಕೆರೆಯ ಮೀನುಗಳು ಸಾವನ್ನಪ್ಪುತ್ತಿವೆ. ಕೆಲವು ಕಡೆ ಕಾರ್ಖಾನೆಯ ಕಲುಷಿತ ನೀರಿನಿಂದ ಸಾವನ್ನಪ್ಪಿದ್ದರೆ ಇನ್ನು ಕೆಲವು ಕಡೆ ಉದ್ದೇಶ ಪೂರ್ವಕವಾಗಿ ಕೆರೆಗೆ ವಿಷವನ್ನು ಹಾಕಿ ಮೀನುಗಳನ್ನು ಸಾಯಿಸಿರುವ ಘಟನೆಗಳು ಕೂಡಾ ನಡೆದಿವೆ. ಅದರಂತೆ ಇತ್ತೀಚೆಗಷ್ಟೇ ಅಭಿವೃದ್ಧಿ ಹೊಂದಿದ್ದ ಕೆರೆಯ ಮೀನುಗಳು ಇದೀಗ ಸಾವನ್ನಪ್ಪಿರುವ ಘಟನೆ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯಲ್ಲಿ ಸಂಭವಿಸಿದೆ.

ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ಗೆ ಮಾಹಿತಿ ನೀಡಿತ್ತು. ಅಲ್ಲದೇ ಬಿಟ್ಟಿದ್ದ ಮೀನುಗಳನ್ನು ಸಚಿವರು ನಿನ್ನೆ ವೀಕ್ಷಣೆಯನ್ನೂ ಮಾಡಿದ್ದರು. ಆದರೆ ಇದೀಗ ಹೆಬ್ಬಾಳ ಕೆರೆಯ ಮೀನುಗಳು ಸಾವನ್ನಪ್ಪಿವೆ. ಮೀನುಗಳ ಸಾವಿಗೆ ಇನ್ನು ಕಾರಣ ತಿಳಿದುಬಂದಿಲ್ಲ. ಸತ್ತಿರುವ ಮೀನುಗಳಿಂದ ವಿಪರೀತ ವಾಸನೆ ಹುಟ್ಟಿದ್ದು, ವಾಯುವಿಹಾರ ಮಾಡುತ್ತಿರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ.

ಸತ್ತಿರುವ ಮೀನುಗಳಿಂದ ವಾಸನೆ ಹೆಚ್ಚಾಗಿ ಓಡಾಡುವವರಿಗೆ ತೊಂದರೆ ಎದುರಾಗಿದೆ

ಸಾವನ್ನಪ್ಪಿರುವ ಮೀನುಗಳು ಕೆರೆಯ ದಡದ ಮೇಲೆ ಬಂದಿವೆ

ಚಿಕ್ಕ ಮಗಳೂರಿನಲ್ಲಿ ಮೀನುಗಳ ಮಾರಣಹೋಮ ಕೆರೆಗೆ ವಿಷ ಹಾಕಿದ್ದರಿಂದ ರಾಶಿ- ರಾಶಿ ಮೀನುಗಳು ಸಾವನ್ನಪ್ಪಿರುವ ಘಟನೆ ಎರಡು ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೈಮಲ್ಲಾಪುರದಲ್ಲೂ ನಡೆದಿತ್ತು. ತಮ್ಮಯ್ಯ ಎಂಬುವವರ ಕೆರೆಯಲ್ಲಿ ಮೀನುಗಳನ್ನು ಸಾಕಿದ್ದರು. ಆದರೆ ಕಿಡಿಗೇಡಿಗಳು ವಿಷ ಹಾಕಿದ್ದರಿಂದ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದವು.

ಹೆಬ್ಬಾಳ ಕೆರೆಯಲ್ಲಿ ತೇಲುತ್ತಿರುವ ಮೀನುಗಳು

ಇದನ್ನೂ ಓದಿ

ರೂಪದರ್ಶಿಯ ನಿಗೂಢ ಸಾವು: ಮಾಡಲಿಂಗ್ ಆಸೆಯೇ ಆ ವಿದ್ಯಾರ್ಥಿನಿಯ ಬದುಕಿಗೆ ಮುಳುವಾಯಿತಾ?

ಭಾರತದಲ್ಲಿ ಕೊರೊನಾದಿಂದ ಸಾವು ಸಂಭವಿಸಿ ಭರ್ತಿ ಒಂದು ವರ್ಷ, ಸಾವಿಗೆ ನಾಂದಿ ಹಾಡಿದ್ದೇ ಕರ್ನಾಟಕ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ