Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಹತ್ಯೆ; ಐವರು ಆರೋಪಿಗಳು ಅರೆಸ್ಟ್

ಎಂ.ಕೆ.ಹುಬ್ಬಳ್ಳಿ ನಿವಾಸಿಗಳಾದ ಅಬ್ದುಲ್ ಅಜೀಜ್ ಬಡೇಗರ, ಮೊಹಮ್ಮದ್ ಶಫಿ ಬಡೇಗರ, ಶಕೀಲ್ ಅಹ್ಮದ್ ಬಡೇಗರ, ಇರ್ಫಾನ್ ಬಡೇಗರ, ಸಾಜಿದ್ ಬಡೇಗರ ಬಂಧಿತರು. ಇನ್ನು ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.

ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಹತ್ಯೆ; ಐವರು ಆರೋಪಿಗಳು ಅರೆಸ್ಟ್
ಆರೋಪಿಗಳು
Follow us
TV9 Web
| Updated By: ಆಯೇಷಾ ಬಾನು

Updated on:Jul 13, 2021 | 1:02 PM

ಬೆಳಗಾವಿ: ಜಗಳ ಬಿಡಿಸಲು ಹೋದ ಡಾಬಾ ಮಾಲೀಕನನ್ನು ಕೊಂದಿದ್ದ ಐವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ಪಂಚವಟಿ ಡಾಬಾದಲ್ಲಿ ಕೊಲೆಯಾಗಿತ್ತು. ಈ ಸಂಬಂಧ ಕಿತ್ತೂರು ಠಾಣೆ ಪೊಲೀಸರು ಐವರನ್ನು ಸೆರೆ ಹಿಡಿದಿದ್ದಾರೆ.

ಎಂ.ಕೆ.ಹುಬ್ಬಳ್ಳಿ ನಿವಾಸಿಗಳಾದ ಅಬ್ದುಲ್ ಅಜೀಜ್ ಬಡೇಗರ, ಮೊಹಮ್ಮದ್ ಶಫಿ ಬಡೇಗರ, ಶಕೀಲ್ ಅಹ್ಮದ್ ಬಡೇಗರ, ಇರ್ಫಾನ್ ಬಡೇಗರ, ಸಾಜಿದ್ ಬಡೇಗರ ಬಂಧಿತರು. ಇನ್ನು ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.

ಜು.11ರಂದು ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಪಂಚವಟಿ ಡಾಬಾದಲ್ಲಿ ಜಗಳ ಬಿಡಿಸಲು ಹೋದ ಡಾಬಾ ಮಾಲೀಕ ಪ್ರಕಾಶ್ ನಾಗನೂರ(38) ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಪ್ರಕಾಶ್ ನಾಗನೂರ ಸ್ನೇಹಿತ ಮಂಜು ಶಿಂತ್ರಿ, ಮತ್ತು ಹೂವಿನ ವ್ಯಾಪಾರಿ ಅಜೀಜ್ ಎಂಬಿಬ್ಬರ ಮಧ್ಯೆ 1,500 ರೂಪಾಯಿಗೆ ಪ್ರಕಾಶ್ ಡಾಬಾದಲ್ಲಿ ಜಗಳ ನಡೆದಿತ್ತು. ತನ್ನ ಡಾಬಾದಲ್ಲಿ ಗೆಳೆಯರಿಬ್ಬರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಪ್ರಕಾಶ್ ಮುಂದಾಗಿದ್ದಾರೆ. ಆ ವೇಳೆ ಡಾಬಾ ಮಾಲೀಕ ಪ್ರಕಾಶ್ ಅವರ ಮೇಲೆಯೇ ಹಲ್ಲೆ ನಡೆದಿದೆ. ಅಜೀಜ್, 7 ಹುಡುಗರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಆರೋಪಿಗಳೆಲ್ಲ ಪ್ರಕಾಶ್ ನಾಗನೂರ ಅವರನ್ನು ಹಿಗ್ಗಾಮುಗ್ಗಾ ಹೊಡೆದು ಪರಾರಿಯಾಗಿದ್ದರು. ತೀವ್ರ ಅಸ್ವಸ್ಥಗೊಂಡಿದ್ದ ಪ್ರಕಾಶ್ ನಾಗನೂರ ಅವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದರು. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸದ್ಯ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದರು.

ಇದನ್ನೂ ಓದಿ: ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ

Published On - 12:31 pm, Tue, 13 July 21

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ