Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನನ್ನೇ ಕೊಂದ ಸ್ನೇಹಿತರು, ಐವರು ಆರೋಪಿಗಳು ಅರೆಸ್ಟ್

ಸ್ನೇಹಿತ ಸಾಲ ಪಡೆಯಲು ಆತ ಶ್ಯೂರಿಟಿ ನೀಡಿದ್ದ. ಸ್ನೇಹಿತ ಸಾಲ ತೀರಿಸಲು ಆಗದೇ ಇದ್ದಾಗ, ತನ್ನ ತಾಯಿಯ ಹೆಸರಲ್ಲಿದ್ದ ಜಮೀನು ಪತ್ರಗಳನ್ನ ಅಡ ಇಟ್ಟಿದ್ದ. ಇಂತಾ ಜಮೀನು ಲಪಟಾಯಿಸಲು ಪ್ಲ್ಯಾನ್ ಮಾಡಿದ್ದ ಫಟಿಂಗರು ಎಸಗಿದ್ದು ಮಾತ್ರ ಯಾರೂ ಕ್ಷಮಿಸಲಾಗದ ಕೃತ್ಯವನ್ನ.

ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನನ್ನೇ ಕೊಂದ ಸ್ನೇಹಿತರು, ಐವರು ಆರೋಪಿಗಳು ಅರೆಸ್ಟ್
ಮನೆಯವರ ಆಕ್ರಂದನ
Follow us
TV9 Web
| Updated By: ಆಯೇಷಾ ಬಾನು

Updated on: Jul 14, 2021 | 7:26 AM

ಹುಬ್ಬಳ್ಳಿ: ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನ ಮೇಲೆಯೇ ಅಟ್ಯಾಕ್ ಮಾಡಿ ಕಿರಾತಕರು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಮುನ್ನ ಬೇಫಾರಿ, ಧಲಬಂಜನ್ ಎಂಬ ಗ್ಯಾಂಗ್ಈ ಕೃತ್ಯ ಎಸಗಿದೆ. ಜುಲೈ 8 ರಂದು ಹುಬ್ಬಳ್ಳಿಯ ಬೆಂಗೇರಿ ಬಳಿ ಸಪೋಟಾ ತೋಟದಲ್ಲಿ ವೀರೇಶ್ ಹೆಗಡಾಳ ಅನ್ನೋರ ಮೇಲೆ ಈ ಗ್ಯಾಂಗ್ ಅಟ್ಯಾಕ್ ಮಾಡಿತ್ತು. ತಲ್ವಾರ್ ಹಾಗೂ ರಾಡ್ಗಳಿಂದ ವೀರೇಶ್ ಮೇಲೆ ಮನಬಂದಂತೆ ದಾಳಿ ಮಾಡಿದ್ರು. ಗಾಯಗೊಂಡಿದ್ದ ವೀರೇಶ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ.

ವೀರೇಶ್, ತನ್ನ ಸ್ನೇಹಿತ ಜಾವಿದ್ ಅನ್ನೋರ ಸಾಲಕ್ಕೆ ಶ್ಯೂರಿಟಿ ನೀಡಿದ್ರಂತೆ. ಮುನ್ನಾ ಬೇಫಾರಿ, ಧಲಬಂಜನ್ ಬಳಿ ಸಾಲ ಪಡೆದಿದ್ರಂತೆ. ಸಾಲ ವಾಪಸ್ ಕೊಡಲು ಮುನ್ನಾ ಬೇಫಾರಿ, ರೌಡಿ ಶೀಟರ್ ಅಲ್ತಾಫ್ ಬೇಫಾರಿ ಜೀವ ಬೆದರಿಕೆ ಹಾಕಿದ್ರಂತೆ. ಸಾಲ ತೀರಿಸಲು ಮುಂದಾಗಿದ್ದ ವೀರೇಶ್, ತನ್ನ ತಾಯಿ ಹೆಸರಲ್ಲಿದ್ದ ಒಂದೂವರೆ ಎಕರೆ ಜಮೀನು ಅಡ ಇಟ್ಟಿದ್ರಂತೆ. ಈ ಜಮೀನಿನ ಮೇಲೆ ಕಣ್ಣು ಹಾಕಿದ್ದ ಈ ಗ್ಯಾಂಗ್, ವೀರೇಶ್ ಮೇಲೆ ದಾಳಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ಐವರನ್ನ ಬಂಧಿಸಿದ್ದಾರೆ.

ಪ್ರಕರಣದ ಮಾಸ್ಟರ್ ಮೈಂಡ್ ಆಗಿರೋ ಹುಬ್ಬಳ್ಳಿಯ ರೌಡಿಶೀಟರ್ ಅಲ್ತಾಫ್ ಬೇಫಾರಿ ಸದ್ಯಕ್ಕೆ ಎಸ್ಕೇಪ್ ಆಗಿದ್ದಾನೆ. ಅಲ್ತಾಫ್ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಂಗೈ ಅಗಲ ಜಾಗಕ್ಕಾಗಿ ಸ್ನೇಹಿತನನ್ನೇ ಕೊಂದ ಗ್ಯಾಂಗ್ ಅಂದರ್ ಆಗಿದೆ. ಕಂಡವರ ಜಮೀನಿಗೆ ಬೇಲಿ ಹಾಕೋ ಅಲ್ತಾಫ್ ಮತ್ತೆ ಆ್ಯಕ್ಟಿವ್ ಆಗಿದ್ದು, ಹುಬ್ಬಳ್ಳಿ ಜನರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಪೊಲೀಸರು ಅಲ್ತಾಫ್ ಆಟಾಟೋಪಕ್ಕೆ ಬ್ರೇಕ್ ಹಾಕಿದ್ರೆ ಜನ ನೆಮ್ಮದಿಯ ನಿಟ್ಟುಸಿರು ಬಿಡಲಿದ್ದಾರೆ.

ಇದನ್ನೂ ಓದಿ: ಜ್ಞಾನಜ್ಯೋತಿ ನಗರದಲ್ಲಿ ಚಿನ್ನದ ಸರಕ್ಕಾಗಿ ನಡೆದ ಕೊಲೆ ಕೇಸ್; ಇಬ್ಬರು ಬಂಧನ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ