AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron: ಕರ್ನಾಟಕದ ಮತ್ತೆ ಐವರಲ್ಲಿ ಒಮಿಕ್ರಾನ್ ಸೋಂಕು: ಸೋಂಕಿತರ ಒಟ್ಟು ಸಂಖ್ಯೆ 8ಕ್ಕೆ ಏರಿಕೆ

Coronavirus: ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕಾರಿಗಳಿಗೆ ಸೂಚಿಸಿದೆ

Omicron: ಕರ್ನಾಟಕದ ಮತ್ತೆ ಐವರಲ್ಲಿ ಒಮಿಕ್ರಾನ್ ಸೋಂಕು: ಸೋಂಕಿತರ ಒಟ್ಟು ಸಂಖ್ಯೆ 8ಕ್ಕೆ ಏರಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 16, 2021 | 10:39 PM

Share

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ (ಡಿ 16) ಮತ್ತೆ ಐವರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಎಂಟು ಮಂದಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಂತೆ ಆಗಿದೆ. ಈ ಪೈಕಿ ನಾಲ್ಕು ಪ್ರಕರಣಗಳು ಹೈರಿಸ್ಕ್ ದೇಶದ ಸಂಪರ್ಕದಿಂದ ಬಂದಿವೆ. ಒಂದು ಪ್ರಕರಣದಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದೆ ಸೋಂಕು ದೃಢಪಟ್ಟಿದೆ. ವಿದೇಶಿಯರ ಸಂಪರ್ಕದಿಂದ ಸೋಂಕು ಬಂದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕಾರಿಗಳಿಗೆ ಸೂಚಿಸಿದೆ.

ಬೆಳಗಾವಿಯಲ್ಲಿಯೂ ವ್ಯಕ್ತಿಯೊಬ್ಬರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. 52 ವರ್ಷದ ಈ ವ್ಯಕ್ತಿಗೆ ನೈಜಿರಿಯಾದಿಂದ ಬೆಂಗಳೂರಿಗೆ ಬಂದಿದ್ದರು. ಬಳಿಕ ಬೆಳಗಾವಿಗೆ ಪ್ರಯಾಣ ಮಾಡಿದ್ದರು. ಪ್ರಸ್ತುತ ಸೋಂಕಿತ ವ್ಯಕ್ತಿಯು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 13ನೇ ತಾರೀಖು ಇವರಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಇವರೊಂದಿಗೆ ಸಂಪರ್ಕದಲ್ಲಿದ್ದ ಇಬ್ಬರು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ.

ಮದುವೆಗೆ ಹೋಗಿ ಬಂದಿದ್ದವರಿಗೆ ಒಮಿಕ್ರಾನ್ ದೆಹಲಿಯಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹೋಗಿಬಂದಿದ್ದ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ದೆಹಲಿಯಲ್ಲಿ ಒಮಿಕ್ರಾನ್ ದೃಢಪಟ್ಟ ಸೋಂಕಿತನ ಪ್ರಾಥಮಿಕ ಸಂಪರ್ಕಿತರು ಬೆಂಗಳೂರಿನ ಮಹದೇವಪುರ ನಿವಾಸಿಗಳು. 70 ವರ್ಷದ ಮಹಿಳೆ, 36 ವರ್ಷದ ಪುರುಷ ಸೋಂಕಿತರಿಗೆ ಒಮಿಕ್ರಾನ್ ದೃಢಪಟ್ಟಿತ್ತು. ಡಿಸೆಂಬರ್ 3ರಂದು ಇವರು ದೆಹಲಿಯಿಂದ ವಾಪಸ್ ಬಂದಿದ್ದರು. ಈ ಇಬ್ಬರಿಂದ ಮತ್ತೆ ನಾಲ್ವರಲ್ಲಿ ಸೋಂಕು ದೃಢಪಟ್ಟಿದೆ. ಮಹದೇವಪುರ ವಲಯದ ಒಮಿಕ್ರಾನ್ ಪ್ರಕರಣವು ಆತಂಕವನ್ನು ಹೆಚ್ಚಿಸಿದೆ.

ಇಂಗ್ಲೆಂಡ್​ನಿಂದ ಹಿಂದಿರುಗಿದ್ದ ಯುವತಿಗೆ ಒಮಿಕ್ರಾನ್ ಇಂಗ್ಲೆಂಡ್​ನಿಂದ ವಾಪಸಾಗಿದ್ದ ಯುವತಿಯಲ್ಲಿ ಒಮಿಕ್ರಾನ್​ ದೃಢಪಟ್ಟಿದೆ. ಯುವತಿಯು ಡಿ.13ರಂದು ಇಂಗ್ಲೆಂಡ್​ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಮೊದಲಿಗೆ ಟೆಸ್ಟ್​ ಮಾಡಿದಾಗ ಕೊವಿಡ್​ ಪಾಸಿಟಿವ್​ ಬಂದಿತ್ತು. ಡಿ.13ರಂದೇ ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ಆಕೆಯನ್ನು ದಾಖಲಿಸಲಾಗಿತ್ತು. ನಂತರ ಡಿ.14ರಂದು ಯುವತಿಯ ಮನವಿ ಮೇರೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸದ್ಯಕ್ಕೆ ಸೋಂಕಿತ ಯುವತಿಯ ಆರೋಗ್ಯ ಸ್ಥಿರವಾಗಿದೆ. ಒಮಿಕ್ರಾನ್​ ಸೋಂಕಿತೆ ಯಾರ ಜತೆಗೂ ಸಂಪರ್ಕದಲ್ಲಿರಲಿಲ್ಲ ಎಂದು ತಿಳಿದುಬಂದಿದೆ. ಈ ಯುವತಿಯು ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದಿದ್ದರು ಎಂದು ಮೂಲಗಳು ಹೇಳಿವೆ.

ರಾಜ್ಯದಲ್ಲಿ 303 ಮಂದಿಗೆ ಸೋಂಕು ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಗುರುವಾರ (ಡಿ.16) ಒಟ್ಟು 303 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರಿನಲ್ಲಿ 197 ಜನರು ಸೇರಿದ್ದಾರೆ. ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7158ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ರೇಪ್ ಆಗುವಾಗ ತಡೆಯಲು ಆಗದಿದ್ದರೆ ಎಂಜಾಯ್ ಮಾಡಬೇಕು: ರಮೇಶ್​ ಕುಮಾರ್ ಹೇಳಿಕೆಗೆ ನಕ್ಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇದನ್ನೂ ಓದಿ: Gender Sensitivity: ಬೇಕಾಬಿಟ್ಟಿಯಾಗಿ ರೇಪ್ ಪದ ಬಳಕೆಗೆ ವಿಧಾನಸಭಾ ಸದಸ್ಯೆಯರ ಆಕ್ಷೇಪ

Published On - 10:36 pm, Thu, 16 December 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ