AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ

ಕೇರಳದ ಕಾಸರಗೋಡು ಜಿಲ್ಲೆಯ ಕಲ್ಲಪ್ಪಳ್ಳಿ ಬಳಿ ಈ ಅವಘಡ ಸಂಭವಿಸಿದ್ದು, ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ಬಸ್ ತೆರಳುತ್ತಿತ್ತು. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೆ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್; ಐವರ ಸಾವು.. ಹಲವರ ಸ್ಥಿತಿ ಗಂಭೀರ
ಮನೆಯ ಮೇಲೆ ಉರುಳಿಬಿದ್ದ ಬಸ್​
ಪೃಥ್ವಿಶಂಕರ
|

Updated on:Jan 03, 2021 | 4:33 PM

Share

ಮಂಗಳೂರು: ಮನೆ ಮೇಲೆ ದಿಬ್ಬಣದ ಬಸ್ ಉರುಳಿ ಬಿದ್ದು ಐವರ ಸಾವನ್ನಪ್ಪಿರುವ ಘಟನೆ ಕರ್ನಾಟಕ-ಕೇರಳ ಗಡಿಭಾಗದ ಕಲ್ಲಪ್ಪಳ್ಳಿ ಬಳಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಕಲ್ಲಪ್ಪಳ್ಳಿ ಬಳಿ ಈ ಅವಘಡ ಸಂಭವಿಸಿದ್ದು, ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ ಬಸ್ ತೆರಳುತ್ತಿತ್ತು. ಮದುವೆ ದಿಬ್ಬಣದ ಬಸ್‌ನಲ್ಲಿ 63 ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಫಘಾತದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿಕೆ. ಅಫಘಾತದಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿಕೆಯಾಗಿದ್ದು, ಹತ್ತಕ್ಕೂ ಹೆಚ್ಚು ಜನರ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲದೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಈ ದುರಂತದಲ್ಲಿ ರಾಜೇಶ್, ರವಿಚಂದ್ರ, ಆದರ್ಶ್, ಶ್ರೇಯಸ್, ಸುಮತಿ, ಶಶಿ, ಜಯಲಕ್ಷ್ಮಿ ಮೃತ ದುರ್ದೈವಿಗಳಾಗಿದ್ದಾರೆ. ಕೊಡಗಿನ ವರನ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ, ಪುತ್ತೂರಿನ ಈಶ್ವರ ಮಂಗಲದ ವಧುವಿನ ಮನೆಯಿಂದ ದಿಬ್ಬಣದ ಬಸ್ ಹೊರಟ್ಟಿತ್ತು. ಸುಳ್ಯದ ಅಲೆಟ್ಟಿ ಮೂಲಕ ಕಲ್ಲಪಲ್ಲಿ ಪಾಣತ್ತೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್, ಪೆರಿಯಾರಂ ಘಾಟ್ ರಸ್ತೆಯಲ್ಲಿ ಚಾಲನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಮನೆಯ ಮೇಲೆ ಬಿದ್ದಿದೆ.

ಘಟನೆ ಬಗ್ಗೆ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

Published On - 3:23 pm, Sun, 3 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!