AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 53 ವಿಮಾನಗಳ ಹಾರಾಟ ರದ್ದು

ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಬೆಂಗಳೂರಿಗೆ ಬರಬೇಕಿದ್ದ ಮತ್ತು ಬೆಂಗಳೂರಿನಿಂದ ಹೊರಡಬೇಕಿದ್ದ ಸುಮಾರು ಒಟ್ಟು 53 ವಿಮಾನಗಳ ಹಾರಾಟವನ್ನು ವಿಮಾನ ಸಂಸ್ಥೆಗಳು ರದ್ದುಗೊಳಿಸಿದೆ. ಕೊರೊನಾ ಲಾಕ್​ಡೌನ್​ ಭಯದಿಂದ ಜನರು ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುತ್ತಿಲ್ಲ.

Karnataka Lockdown: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 53 ವಿಮಾನಗಳ ಹಾರಾಟ ರದ್ದು
ಸಾಂದರ್ಭಿಕ ಚಿತ್ರ
sandhya thejappa
|

Updated on:May 10, 2021 | 10:23 AM

Share

ದೇವನಹಳ್ಳಿ: ರಾಜ್ಯ ಸರ್ಕಾರ ಇಂದಿನಿಂದ (ಮೇ 10) ರಾಜ್ಯದಲ್ಲಿ ಲಾಕ್​ಡೌನ್​ ಜಾರಿಗೊಳಿಸಿದೆ. ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮವನ್ನು ಪಾಲಿಸಬೇಕೆಂದು ತಿಳಿಸಿದೆ. ವಿಧಿಸಿದ ಕಠಿಣ ನಿಯಮಗಳ ಬಿಸಿ ಕೆಂಪೇಗೌಡ ಏರ್​ಪೋರ್ಟ್​ಗೂ ತಟ್ಟಿದೆ. ಕೊರೊನಾ ತಡೆಗಟ್ಟಲು ಲಾಕ್​ಡೌನ್​ ಕಠಿಣ ನಿಯಮಗಳು ಜಾರಿಯಾದ ಹಿನ್ನೆಲೆ ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಮತ್ತು ಬೆಂಗಳೂರಿನಿಂದ ನಿರ್ಗಮಿಸುವ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.

ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. ಬೆಂಗಳೂರಿಗೆ ಬರಬೇಕಿದ್ದ ಮತ್ತು ಬೆಂಗಳೂರಿನಿಂದ ಹೊರಡಬೇಕಿದ್ದ ಸುಮಾರು ಒಟ್ಟು 53 ವಿಮಾನಗಳ ಹಾರಾಟವನ್ನು ವಿಮಾನ ಸಂಸ್ಥೆಗಳು ರದ್ದುಗೊಳಿಸಿದೆ. ಕೊರೊನಾ ಲಾಕ್​ಡೌನ್​ ಭಯದಿಂದ ಜನರು ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುತ್ತಿಲ್ಲ. ಹೀಗಾಗಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಸದ್ಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ.

ಲಾಕ್​ಡೌನ್​ನಿಂದಾಗಿ‌ ನಗರ ಬಿಟ್ಟು ತಮ್ಮ ರಾಜ್ಯಗಳತ್ತ ಜನ ಮುಖ ಮಾಡುತ್ತಿರುವ ಸಂಖ್ಯೆ ಇಂದು ಮುಂದುವರೆದಿದೆ. ಜೊತೆಗೆ ನಗರದಲ್ಲಿ ಟ್ಯಾಕ್ಸಿ ಕ್ಯಾಬ್​ಗಳು ಸಿಗುತ್ತೋ ಇಲ್ಲವೂ ಅಂತಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರು ಕಾಲಹರಣ ಮಾಡುತ್ತಿದ್ದು, ಮಧ್ಯಾಹ್ನದ ವಿಮಾನಗಳಿಗೂ ಬೆಳಗ್ಗೆಯೇ ಆಗಮಿಸಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ವಿಮಾನಗಳ ಮೂಲಕ ತಮ್ಮ ರಾಜ್ಯಗಳತ್ತ ಜನ ಗುಳೆ ಹೊರಟಿದ್ದಾರೆ.

ಕೊರೊನಾ ಕರ್ಫ್ಯೂ ವೇಳೆಯೂ ರದ್ದಾಗಿದ್ದ ವಿಮಾನಗಳ ಹಾರಾಟ ಕೊರೊನಾ ಸೋಂಕನ್ನು ತಡೆಗಟ್ಟುವ ಹಿನ್ನೆಲೆ ರಾಜ್ಯ ಸರ್ಕಾರ ಏಪ್ರಿಲ್ 24 ರಿಂದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಈ ಕಾರಣ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 15ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು.

ಇದನ್ನೂ ಓದಿ

Karnataka Lockdown: ನೆಪ ಹೇಳಿದ ತಪ್ಪಿಗೆ ಒಂದು ಗೊನೆ ಬಾಳೆಹಣ್ಣು ತೆಗೆದುಕೊಂಡು ಹೋದ ಚಿಕ್ಕಮಗಳೂರು ವ್ಯಕ್ತಿ

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

(Flights to Kempegowda International Airport have been cancelled)

Published On - 9:13 am, Mon, 10 May 21

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು