ಪ್ರವಾಹ ಸ್ಥಿತಿಯಿಂದ ಚಿಂತಾಕ್ರಾಂತರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಹಲವಾರು ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಾ ಪ್ರವಾಹದ ಸ್ಥಿತಿಯನ್ನು ಸೃಷ್ಟಿಸಿರುವ ಮಳೆಯು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಮತ್ತಷ್ಟು ಕಂಗೆಡಿಸಿದೆ. ಆಸ್ಪತ್ರೆಯ ಬೆಡ್ ಮೇಲೆ ಕುಳಿತೇ ಕಡತಗಳನ್ನು ಪರಿಶೀಲಿಸುತ್ತಾ ಸಚಿವರಿಗೆ ಹಾಗೂ ಆಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುತ್ತಿರುವ ಮುಖ್ಯಮಂತ್ರಿಗಳು; ನಾಳೆ ಕೊಡಗು ಜಿಲ್ಲೆಗೆ ತೆರಳಿ ಮಳೆಯಿಂದಾಗಿರುವ ಹಾನಿಯನ್ನು ಪರಿಶೀಲಿಸಿ, ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದಿದ್ದ ಕಂದಾಯ ಸಚಿವ ಆರ್ ಅಶೋಕ ಅವರನ್ನು ಕೊಡಗಿಗೆ ಬದಲಾಗಿ ಉತ್ತರ ಕನ್ನಡ ಮತ್ತು‌ ಉಡುಪಿ […]

ಪ್ರವಾಹ ಸ್ಥಿತಿಯಿಂದ ಚಿಂತಾಕ್ರಾಂತರಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ಅರುಣ್​ ಕುಮಾರ್​ ಬೆಳ್ಳಿ

Updated on: Aug 06, 2020 | 7:16 PM

ರಾಜ್ಯದ ಹಲವಾರು ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಾ ಪ್ರವಾಹದ ಸ್ಥಿತಿಯನ್ನು ಸೃಷ್ಟಿಸಿರುವ ಮಳೆಯು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಮತ್ತಷ್ಟು ಕಂಗೆಡಿಸಿದೆ.

ಆಸ್ಪತ್ರೆಯ ಬೆಡ್ ಮೇಲೆ ಕುಳಿತೇ ಕಡತಗಳನ್ನು ಪರಿಶೀಲಿಸುತ್ತಾ ಸಚಿವರಿಗೆ ಹಾಗೂ ಆಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡುತ್ತಿರುವ ಮುಖ್ಯಮಂತ್ರಿಗಳು; ನಾಳೆ ಕೊಡಗು ಜಿಲ್ಲೆಗೆ ತೆರಳಿ ಮಳೆಯಿಂದಾಗಿರುವ ಹಾನಿಯನ್ನು ಪರಿಶೀಲಿಸಿ, ಪರಿಹಾರ ಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದಿದ್ದ ಕಂದಾಯ ಸಚಿವ ಆರ್ ಅಶೋಕ ಅವರನ್ನು ಕೊಡಗಿಗೆ ಬದಲಾಗಿ ಉತ್ತರ ಕನ್ನಡ ಮತ್ತು‌ ಉಡುಪಿ ಜಿಲ್ಲೆಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿನ ಪರಿಹಾರ ಕೆಲಸಗಳನ್ನು ನೋಡಿಕೊಳ್ಳುವಂತೆ ಆ ಜಿಲ್ಲೆಯ ಉಸ್ತುವಾರಿ ಸಚಿವ ವಿ ಸೋಮಣ್ಣಗೆ ತಿಳಿಸಿದ್ದಾರೆ.

ಹಾಗೆಯೇ, ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ದೂರವಾಣಿ ಕರೆಗಳ ಮೂಲಕ ಸೂಚಿಸಬೇಕೆಂದು ಮುಖ್ಯಮಂತ್ರಿಗಳು ಸಚಿವ ಅಶೋಕ ಅವರಿಗೆ ತಿಳಿಸಿದ್ದಾರೆ.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us