AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು: ಬಾಡದಿರಲಿ ಧಾರವಾಡ ರೈತರ ಬದುಕು

ಧಾರವಾಡ ತಾಲೂಕಿನ ವಿವಿಧ ಗ್ರಾಮಗಳ ರೈತರ ಪ್ರಮುಖ ಬೆಳೆ ಬಗೆ ಬಗೆಯ ಹೂವುಗಳು. ಈ ಹೂವಿನಿಂದಲೇ ಇಲ್ಲಿನ ರೈತರು ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಇದೀಗ ದಸರಾ ಹಬ್ಬ ಬಂದಿದೆ. ಆದರೆ ಈ ಬಾರಿ ಹೂವಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಹೂವುಗಳು ಹೊಲದಲ್ಲಿಯೇ ಕೊಳೆಯೋ ಸ್ಥಿತಿ ನಿರ್ಮಾಣವಾಗುತ್ತಿದೆ.

ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು: ಬಾಡದಿರಲಿ ಧಾರವಾಡ ರೈತರ ಬದುಕು
ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು: ಬಾಡದಿರಲಿ ಧಾರವಾಡ ರೈತರ ಬದುಕು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 02, 2024 | 8:08 PM

Share

ಧಾರವಾಡ, ಅಕ್ಟೋಬರ್​ 02: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆಯೇ ಹಬ್ಬಗಳ ಸಾಲು ಕೂಡ ಶುರುವಾಗುತ್ತೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ವ್ಯಾಪಾರದ ಭರಾಟೆಯೂ ಹೆಚ್ಚಾಗುತ್ತೆ. ಅದರಲ್ಲೂ ಹಬ್ಬ-ಹರಿದಿನಗಳಲ್ಲಿ ನಡೆಯುವ ಪೂಜೆಗೆ ಬೇಕಾಗುವ ವಸ್ತುಗಳ ವ್ಯಾಪಾರವೂ ಹೆಚ್ಚಾಗುತ್ತೆ. ಇದರಲ್ಲಿ ಹೆಚ್ಚಿನ ಪಾಲು ಹೂವಿಗೆ (Flowers) ಸೇರುತ್ತೆ. ಆದರೆ ಈ ಬಾರಿ ಧಾರವಾಡದಲ್ಲಿ ಹೂವು ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಕಾರಣ ಮಳೆಯ ಆರ್ಭಟ.

ಮಳೆಯಿಂದಾಗಿ ಹೊಲದಲ್ಲಿಯೇ ಕೊಳೆಯುತ್ತಿರುವ ಹೂವುಗಳು

ಧಾರವಾಡ ತಾಲೂಕಿನ ವಿವಿಧ ಗ್ರಾಮಗಳ ರೈತರ ಪ್ರಮುಖ ಬೆಳೆ ಬಗೆ ಬಗೆಯ ಹೂವುಗಳು. ಈ ಹೂವಿನಿಂದಲೇ ಇಲ್ಲಿನ ರೈತರು ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಅಲ್ಲದೇ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಂತೂ ಈ ಹೂವುಗಳಿಗೆ ಎಲ್ಲಿಲ್ಲದ ಬೇಡಿಕೆ. ಇದೇ ಕಾರಣಕ್ಕೆ ಈ ಹಬ್ಬಗಳ ಹೊತ್ತಿಗೆ ಹೂವು ಬರುವಂತೆ ರೈತರು ಲೆಕ್ಕಚಾರ ಹಾಕಿ, ಕೃಷಿ ಮಾಡಿರುತ್ತಾರೆ. ಇದೀಗ ದಸರಾ ಹಬ್ಬ ಬಂದಿದೆ. ಆದರೆ ಈ ಬಾರಿ ಹೂವಿಗೆ ಸಾಕಷ್ಟು ಸಮಸ್ಯೆ ಉಂಟಾಗಿದೆ. ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಹೂವುಗಳು ಹೊಲದಲ್ಲಿಯೇ ಕೊಳೆಯೋ ಸ್ಥಿತಿ ನಿರ್ಮಾಣವಾಗುತ್ತಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ

ಸೇವಂತಿ, ಸುಗಂಧ ರಾಜ, ಮಲ್ಲಿಗೆ, ಚೆಂಡು ಹೂವು ಸೇರಿದಂತೆ ಬಗೆ ಬಗೆಯ ಹೂವುಗಳನ್ನು ರೈತರು ಬೆಳೆಯುತ್ತಾರೆ. ನಿತ್ಯವೂ ಬೆಳಿಗ್ಗೆ ಹೂವನ್ನು ಕಿತ್ತುಕೊಂಡು ಮಾರುಕಟ್ಟೆಗೆ ಬಂದು ಮಾರಾಟ ಮಾಡುತ್ತಾರೆ. ಇದರಿಂದಾಗಿಯೇ ಅವರ ಜೀವನ ನಿರ್ವಹಣೆ ಆಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಗುಣಮಟ್ಟದ ಹೂವು ಇದ್ದರಷ್ಟೇ ವ್ಯಾಪಾರಿಗಳು ಖರೀದಿ ಮಾಡುತ್ತಾರೆ. ಆದರೆ ಇದೀಗ ಬೀಳುತ್ತಿರುವ ಮಳೆಯಿಂದಾಗಿ ಹೂವಿನ ಗುಣಮಟ್ಟ ಕುಸಿಯುತ್ತಿದೆ. ಇದು ನೇರವಾಗಿ ದರದ ಮೇಲೆ ಪರಿಣಾಮ ಬೀರುತ್ತಿದೆ. ಕೆಜಿಗೆ ನೂರು ರೂಪಾಯಿಗೆ ಮಾರಾಟವಾಗಬೇಕಿರುವ ಹೂವು 20 ರಿಂದ 30 ರೂಪಾಯಿಗೆ ಮಾರಾಟವಾಗುತ್ತಿದೆ. ಇದರಿಂದಾಗಿ ರೈತರಿಗೆ ಆರ್ಥಿಕವಾಗಿ ಸಾಕಷ್ಟು ನಷ್ಟವಾಗುತ್ತಿದೆ.

ಇದನ್ನೂ ಓದಿ: ಗ್ಯಾರಂಟಿ ಸಮಾವೇಶದಲ್ಲಿ ಗೋಲ್​ಮಾಲ್?; ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು

ಇತ್ತೀಚಿಗಷ್ಟೇ ಧಾರವಾಡದ ಮಾರುಕಟ್ಟೆಗೆ ಬೆಂಗಳೂರಿನ ಹೂವು ಲಗ್ಗೆ ಇಟ್ಟ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಹೂವಿನಿಂದಾಗಿ ಸ್ಥಳೀಯ ರೈತರು ಅತಿ ಕಡಿಮೆ ದರಕ್ಕೆ ತಮ್ಮ ಹೂವುಗಳನ್ನು ಮಾರಾಟ ಮಾಡೋ ಸ್ಥಿತಿ ಬಂದಿದೆ. ಇದರ ಬೆನ್ನಲ್ಲೇ ಇದೀಗ ಮಳೆಯಿಂದಾಗಿ ಹೂವಿನ ಬೆಳೆಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಈ ಬಾರಿಯ ದಸರಾ ಹಬ್ಬದಲ್ಲಿ ಕೊಂಚ ಆದಾಯ ಗಳಿಸಬಹುದು ಅಂದುಕೊಂಡಿರೋ ಹೂವು ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿರೋದು ವಿಪರ್ಯಾಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ