AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 05, 2023 | 3:36 PM

Share

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್​ಸೈಟ್​ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್​ಸೈಟ್ ಮುಚ್ಚಲಾಗಿತ್ತು.

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.

ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್​ ಕಾರ್ಡ್​ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್​ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್​​ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 5 June 23

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!