AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 05, 2023 | 3:36 PM

Share

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್​ಸೈಟ್​ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್​ಸೈಟ್ ಮುಚ್ಚಲಾಗಿತ್ತು.

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.

ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್​ ಕಾರ್ಡ್​ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್​ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್​​ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 5 June 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು