Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ.

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jun 05, 2023 | 3:36 PM

ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ ಕರೆಯಲು ಕರ್ನಾಟಕ ರಾಜ್ಯ ಆಹಾರ ಇಲಾಖೆ ಮುಂದಾಗಿದೆ. ಮಂಗಳವಾರದಿಂದಲೇ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ. ಕಳೆದ 3 ತಿಂಗಳಿಂದ ಆಹಾರ ಇಲಾಖೆ ವೆಬ್​ಸೈಟ್​ ಕ್ಲೋಸ್ ಮಾಡಲಾಗಿತ್ತು. ರಾಷ್ಟ್ರೀಯ ಆಹಾರ ಹಕ್ಕು ಕಾಯ್ದೆಯ ಪ್ರಕಾರ ಮಿತಿ ಮೀರಿದ್ದರಿಂದ ವೆಬ್​ಸೈಟ್ ಮುಚ್ಚಲಾಗಿತ್ತು.

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಮಾನದಂಡ ನಿಗದಿಪಡಿಸಲಿದೆ.

ಈ ಮಧ್ಯೆ, ಜುಲೈ ತಿಂಗಳಿಂದ ‘ಅನ್ನಭಾಗ್ಯ’ ಯೋಜನೆಯಡಿ ಪಡಿತರ ಧಾನ್ಯ ವಿತರಣೆ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಸ್ತುತ 1.26 ಕೋಟಿ ಬಿಪಿಎಲ್​ ಕಾರ್ಡ್​ದಾರರಿದ್ದು, 2 ಲಕ್ಷದ 30 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Yadgir News: ಶಹಾಪುರ ನಗರದಲ್ಲಿ ಅನ್ನಭಾಗ್ಯ ಅಕ್ಕಿ ತುಂಬಿದ ಲಾರಿಯೇ ಕಳವು!

‘ಅನ್ನಭಾಗ್ಯ’ ಯೋಜನೆ ಜಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದೆಲ್ಲದರ ನಡುವೆ ಈ ಹಿಂದೆ ಅರ್ಜಿ ಸಲ್ಲಿಸಿದವರಿಗೆ ಇನ್ನಷ್ಟೇ ಬಿಪಿಎಲ್ ಕಾರ್ಡ್ ನೀಡಬೇಕಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಕೂಡ ಒಂದಾಗಿದ್ದು, ಇದರ ಅನುಷ್ಠಾನಕ್ಕೆ ಬಿಪಿಎಲ್​ ಕಾರ್ಡ್ ಬಹುಮುಖ್ಯವಾಗಿದೆ. ಬಿಪಿಎಲ್ ಕಾರ್ಡ್​​ದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 5 June 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ