AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ರೆಡಿಮೆಡ್ ಹೋಳಿಗೆ ತಿನ್ನುವ ಮುನ್ನ ಎಚ್ಚರ…ಎಚ್ಚರ..!

ಆಹಾರ ಇಲಾಖೆಯಿಂದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಸಮರ ಸಾರಿದೆ.‌ ಇಡ್ಲಿ, ಗೋಬಿ, ಕಲ್ಲಂಗಡಿ ಸೇರಿದಂತೆ ಅನೇಕ‌ ಆಹಾರಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿದ್ದು, ಕೆಲವೊಂದು ಆಹಾರ ಪದಾರ್ಥಗಳಲ್ಲಿ ಹಾನಿಕಾರ ಅಂಶ ಪತ್ತೆಯಾಗಿದೆ. ಹೀಗಾಗಿ ಇದನ್ನು ತಡೆಗಟ್ಟಲು ಕೆಲವೊಂದು ರೂಲ್ಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ರೆಡಿಮೆಡ್ ಹೋಳಿಗೆ ಮೇಲೂ ಸಹ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಯುಗಾದಿ ಹಬ್ಬಕ್ಕೆ ರೆಡಿಮೆಡ್ ಹೋಳಿಗೆ ತಿನ್ನುವ ಮುನ್ನ ಎಚ್ಚರ...ಎಚ್ಚರ..!
Holige
TV9 Web
| Edited By: |

Updated on:Mar 03, 2025 | 10:38 PM

Share

ಬೆಂಗಳೂರು, (ಮಾರ್ಚ್​ 03): ಹೋಟೆಲ್‌ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಈ ಪ್ಲಾಸ್ಟಿಕ್ ಹಾಳೆಯಿಂದ ಹಾನಿಕಾರಕ ರಾಸಾಯನಿಕ ಅಂಶ ಆಹಾರಕ್ಕೆ ಸೇರುತ್ತದೆ. ಹೀಗಾಗಿ, ಪ್ಲಾಸ್ಟಿಕ್ ಹಾಳೆ ಬಳಸುವುದನ್ನು ನಿಷೇಧಿಸಲಾಗಿದೆ. ಅದರಂತೆ ಇದೀಗ ಹೋಟೆಲ್​ಗಳಲ್ಲಿ ರೆಡಿಮೆಡ್ ಹೋಳಿಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಈ ಸಂಬಂಧ ಇಂದು (ಮಾರ್ಚ್​ 03) ಬೆಂಗಳೂರಿನ ಕೆಲ ಅಂಗಡಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ನೋಟಿಸ್ ನೀಡಿದ್ದಾರೆ.

ಬೆಂಗಳೂರು ಹಾಗೂ ಮೈಸೂರಲ್ಲಿ ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದೆ. ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಲ್ಲಿ ತಪಾಷಣೆ ನಡೆಸಿದ್ದು, ಮೈಸೂರಿನ ಎರಡು ಅಂಗಡಿಗಳಲ್ಲಿ ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಿದೆ. ಹೀಗಾಗಿ ಅಧಿಕಾರಿಗಳು ಮೈಸೂರಿನ ಎರಡು ಹೋಳಿಗೆ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್: ಬೆಂಗಳೂರಿನ ಹಲವೆಡೆ ಇನ್ನೂ ನಿಂತಿಲ್ಲ ಇಡ್ಲಿ ತಯಾರಿಗೆ ಪ್ಲಾಸ್ಟಿಕ್ ಬಳಕೆ

ಹೋಳಿಗೆಯನ್ನ ತಯಾರಿಸಲು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮಾಡುತ್ತಾರೆ. ಈ ಹಿನ್ನೆಲೆ ಹೋಳಿಗೆ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ ಮಾಡಿದ್ದು, ಪ್ಲಾಸ್ಟಿಕ್ ಬಳಕೆ ಮಾಡಿರುವ ಅಂಗಡಿಗಳಿಗೆ ನೋಟಿಸ್ ನೀಡಿದೆ. ಹೋಳಿಗೆಗೆ ಪ್ಲಾಸ್ಟಿಕ್ ಕವರ್ ಬಳಸಿದ್ರೆ ವಿಷಕಾರಿ ಅಂಶ ಹೋಳಿಗೆ ಸೇರಯವ ಸಾಧ್ಯತೆ ಇದೆ. ಇದರಿಂದ ಹೋಳಿಗೆಗೆ ಪ್ಲಾಸ್ಟಿಕ್​ ಬಳಸಬಾರದು ಎಂದು ಸೂಚಿಸಲಾಗಿದೆ. ಈಗಾಗಲೇ ಆಹಾರ ಪದಾರ್ಥಗಳ ತಯಾರಿಗೆ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚನೆ ನೀಡಲಾಗಿದೆ.

ಇನ್ನೇನು ಯುಗಾದಿ ಹಬ್ಬ ಬರುತ್ತಿರುವುದರಿಂದ  ಅಂಗಡಿಗಳಲ್ಲಿ ರೆಡಿಮೆಡ್​ ಹೋಳಿಗಳ ಘಮ ಜೋರಾಗುತ್ತೆ. ಬಿಸಿ ಬಿಸಿ ಹೋಳಿಗೆ ಮಾಡಿ ಅದನ್ನು ಒಂದು ಪ್ಲಾಸ್ಟಿಕ್​​​ ನಿಂದ ಕವರ್ ಮಾಡಿ ಇಡುತ್ತಾರೆ. ಆದ್ರೆ, ಅದನ್ನು ತಿನ್ನುವ ಮುನ್ನ ಸಾರ್ವಜನರು ಈ ಪ್ಲಾಸ್ಟಿಕ್​ ಬಗ್ಗೆ ಎಚ್ಚರ ವಹಿಸುವುದು ಒಳಿತು. ಯುಗಾದಿ ಹಬ್ಬಕ್ಕಾಗಿ ಪೂರಣ್ ಪೋಳಿ  ಎಂದೂ ಕರೆಯಲ್ಪಡುವ ಬೇಳೆ ಹೋಳಿಗೆಯು ಹಬ್ಬಕ್ಕಾಗಿಯೇ ತಯಾರಿಸಲಾದ ಆಕರ್ಷಕವಾದ ಸಿಹಿ ತಿಂಡಿಯಾಗಿದೆ. ಇದನ್ನು ಯುಗಾದಿಯಂದು ವಿಶೇಷವಾಗಿ ತಯಾರಿಸಲಾಗುತ್ತದೆ ಮತ್ತು ಇದು ದಕ್ಷಿಣ ಭಾರತದ ಜನಪ್ರಿಯವಾಗಿದೆ.

ಬಿಸಿ ಬಿಸಿ ಹೋಳಿಗೆ ಮೇಲೆ ಪ್ಲಾಸ್ಟಿಕ್​ ಇಟ್ಟಿರುವುದರಿಂದ ಆ ಪ್ಲಾಸ್ಟಿಕ್​ ಹಾಳೆಯ ವಿಷಕಾರಿ ಅಂಶ ಹೋಳಿಗೆಗೆ ಸೇರಿಕೊಳ್ಳುತ್ತೆ. ಒಂದು ವೇಳೆ ಅದನ್ನು ಸೇವಿಸಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುವುದು ಗ್ಯಾರಂಟಿ. ಹೀಗಾಗಿ ಈ ಬಗ್ಗೆ ಎಚ್ಚರದಿಂದ ಇರಬೇಕು. ಕೇವಲ ಹೋಳಿಗೆ ಮಾತ್ರವಲ್ಲ ಪ್ಲಾಸ್ಟಿಕ್​ ಸಹಾಯದಿಂದ ಯಾವೆಲ್ಲಾ ಬಿಸಿ ಬಿಸಿ ಆಹಾರ ತಯಾರು ಮಾಡುತ್ತಾರೋ ಅದನ್ನು ಸೇವಿಸುವ ಮುನ್ನ ಯೋಚಿಸಬೇಕು. ಯಾಕಂದ್ರೆ ಪ್ಲಾಸ್ಟಿಕ್​ ಬಹಳ ಡೇಂಜರ್.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Mon, 3 March 25

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ