AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್ ಶಸ್ತ್ರ ಚಿಕಿತ್ಸೆ; ಲಕ್ಷಾಂತರ ಮಂದಿ ವೀಕ್ಷಣೆ
ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ
preethi shettigar
| Edited By: |

Updated on:Mar 21, 2021 | 6:04 PM

Share

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಬೆಂಗಳೂರಿನ ಹೆಸರಾಂತ ಸ್ತ್ರೀ ತಜ್ಞ ಡಾ. ಚಂದ್ರಶೇಖರ್ ನೇತೃತ್ವದಲ್ಲಿ ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡಿದ್ದು, 10ಕ್ಕೂ ಹೆಚ್ಚು ಜನರ ವೈದ್ಯರ ತಂಡ ಶಸ್ತ್ರ ಚಿಕಿತ್ಸೆಯಲ್ಲಿ ಭಾಗಿ ಆಗಿದ್ದರು.

ರಾಜ್ಯ ಮತ್ತು ರಾಷ್ಟ್ರದಾದ್ಯಂತ ಸುಮಾರು 150ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಾಗಿನ್ ಆಗಿ ಈ ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರವನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು ಸೇರಿದಂತೆ ಲಕ್ಷಾಂತರ ಮಂದಿ ಈ ಲೈವ್ ವೀಕ್ಷಿಸಿದ್ದು, ಲೈವ್ ವೇಳೆ ಆಸಕ್ತರಿಗೆ ಪ್ರಶ್ನೆ ಕೇಳಲು ಕೂಡ ಅವಕಾಶ ಕಲ್ಪಿಸಲಾಗಿತ್ತು.

ಹೆಸರಾಂತ ವೈದ್ಯಕೀಯ ಸಂಸ್ಥೆಗಳಿಗೆ ಮೀಸಲಾಗಿದ್ದ ಆಧುನಿಕ ಮಾದರಿಯ ಶಸ್ತ್ರ ಚಿಕಿತ್ಸೆಯನ್ನ ತಾಲೂಕಿನ ಸಂತೇಮರಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಆದರಲ್ಲೂ ಹೋಬಳಿ ಮಟ್ಟದ ಆಸ್ಪತ್ರೆಯಲ್ಲಿ ಮಾಡುವ ಮೂಲಕ ರಾಜ್ಯದ ಜನತೆ ಹುಬ್ಬೆರಿಸುವ ಕಾರ್ಯ ಮಾಡಿದ್ದಾರೆ.

live surgery

ಮಹಿಳೆಗೆ ಲೈವ್​ ಶಸ್ತ್ರ ಚಿಕಿತ್ಸೆ ಮಾಡುತ್ತಿರುವ ದೃಶ್ಯ

ಇದನ್ನೂ ಓದಿ:

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

ಏಳೂವರೆ ತಿಂಗಳ ಮಗುವಿನ ಎರಡೂ ಕಿಡ್ನಿಗಳಲ್ಲಿದ್ದ ಕಲ್ಲುಗಳನ್ನು ತೆಗೆದ ವೈದ್ಯರು; ಜಗತ್ತಿನಲ್ಲೇ ಅಪರೂಪದ ಶಸ್ತ್ರಚಿಕಿತ್ಸೆ ಇದು

Published On - 3:41 pm, Sun, 21 March 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು