AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ

ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುವ ಕಲಾಪವನ್ನು ಯುಟ್ಯೂಬ್​ನಲ್ಲಿ ಇಂದು ನೇರ ಪ್ರಸಾರ ಮಾಡಲಾಯಿತು. ಹೈಕೋರ್ಟ್​ ಹಾಲ್-1ರ ಕಲಾಪವನ್ನು ನೇರಪ್ರಸಾರ ಮಾಡಲಾಯಿತು. ನ್ಯಾಯದಾನ ಪ್ರಕ್ರಿಯೆಯ ಇತಿಹಾಸದಲ್ಲಿ ಇದು ಐತಿಹಾಸಿಕ ಕ್ರಮ ಎನಿಸಿಕೊಂಡಿದೆ.

ಯುಟ್ಯೂಬ್​ನಲ್ಲಿ ಕರ್ನಾಟಕ ಹೈಕೋರ್ಟ್​ ಕಲಾಪ ಮೊದಲ ಬಾರಿಗೆ ನೇರಪ್ರಸಾರ
ಕರ್ನಾಟಕ ಹೈಕೋರ್ಟ್​
Ghanashyam D M | ಡಿ.ಎಂ.ಘನಶ್ಯಾಮ
|

Updated on:May 31, 2021 | 4:52 PM

Share

ಬೆಂಗಳೂರು: ಹೈಕೋರ್ಟ್​ನಲ್ಲಿ ನಡೆಯುವ ಕಲಾಪವನ್ನು ಯುಟ್ಯೂಬ್​ನಲ್ಲಿ ಇಂದು ನೇರ ಪ್ರಸಾರ ಮಾಡಲಾಯಿತು. ನ್ಯಾಯದಾನ ಪ್ರಕ್ರಿಯೆಯ ಇತಿಹಾಸದಲ್ಲಿ ಇದು ಐತಿಹಾಸಿಕ ಕ್ರಮ ಎನಿಸಿಕೊಂಡಿದೆ. ಸುಪ್ರೀಂಕೋರ್ಟ್​ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯ ನೇರ ಪ್ರಸಾರದ ಚಿಂತನೆ ನಡೆಯುತ್ತಿದೆ. ಮಧ್ಯಪ್ರದೇಶ ಹೈಕೋರ್ಟ್​ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಗುಜರಾತ್ ಹೈಕೋರ್ಟ್​ ಈ ಹಿಂದೆ ಯುಟ್ಯೂಬ್​ನಲ್ಲಿ ನೇರ ಪ್ರಸಾರ ಮಾಡಿತ್ತು.

ಜನಸಾಮಾನ್ಯರಿಗೆ ಹೈಕೋರ್ಟ್‌ ಕಲಾಪ ವೀಕ್ಷಿಸಲು ಅವಕಾಶ ಸಿಗಬೇಕು ಎನ್ನುವ ಆಶಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಈ ಮಹತ್ವದ ಕ್ರಮ ತೆಗೆದುಕೊಂಡರು.

ಮೇ 31ರ ಮಧ್ಯಾಹ್ನ 2.40ರಿಂದ ಹೈಕೋರ್ಟ್​ ಕಲಾಪದ ಯುಟ್ಯೂಬ್ ನೇರ ಪ್ರಸಾರ ಆರಂಭವಾಯಿತು. ಕೋರ್ಟ್​ ಹಾಲ್​ 1ರಲ್ಲಿ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನ್ಯಾಯಪೀಠದಲ್ಲಿದ್ದರು. ಪ್ರಾಯೋಗಿಕವಾಗಿ ಕಲಾಪವನ್ನು ಯುಟ್ಯೂಬ್​ನಲ್ಲಿ ಲೈವ್ ಪ್ರಸಾರ ಮಾಡಲು ನಿರ್ಧರಿಸಲಾಯಿತು.

ಬೈತಕೋಲ್ ಬಂದರು ನಿರಾಶ್ರಿತರ ಯಾಂತ್ರೀಕೃತ ದೋಣಿ ಮೀನುಗಾರರ ಸಹಕಾರರ ಸಂಘ ನಿಯಮಿತ ಮತ್ತು ಉತ್ತರ ಕನ್ನಡ ಜಿಲ್ಲಾ ಮೀನುಗಾರರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ನ್ಯಾಯಪೀಠವು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಕಾರವಾರ ಬಂದರನ್ನು 2ನೇ ಹಂತದಲ್ಲಿ ಬೈತಕೋಲ್ ಗ್ರಾಮದ ಸಮೀಪ ಅಭಿವೃದ್ಧಿಪಡಿಸಲು ಆರಂಭಿಸಿರುವ ಕಾಮಗಾರಿಯ ಪಾರಿಸರಿಕ ಪರಿಣಾಮಗಳ ಬಗ್ಗೆ ಹಾಗೂ ಪರಿಸರ ಕಾಯ್ದೆಗಳ ಉಲ್ಲಂಘನೆಗಳ ಬಗ್ಗೆ ಈ ಸಂಘಗಳು ಅರ್ಜಿ ಸಲ್ಲಿಸಿವೆ.

ಸುಪ್ರೀಂಕೋರ್ಟ್​ ಸಹ ಈಚಿನ ದಿನಗಳಲ್ಲಿ ಪ್ರಕರಣಗಳ ವಿಚಾರಣೆಗಳನ್ನು ಲೈವ್​ ಸ್ಟ್ರೀಮಿಂಗ್ ಮಾಡುವ ಬಗ್ಗೆ ಪರಿಶೀಲಿಸುತ್ತಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್​ನಲ್ಲಿ ಅರ್ಜಿಯೊಂದು ವಿಚಾರಣೆಗೆ ಬಾಕಿಯಿದೆ. ಸುಪ್ರೀಂಕೋರ್ಟ್​ನ ‘ಇ-ಸಮಿತಿ’ ಅಧ್ಯಕ್ಷ ಡಿ.ವೈ.ಚಂದ್ರಚೂಡ್​ ಸಹ ನ್ಯಾಯದಾನ ಪ್ರಕ್ರಿಯೆಯ ಮುಖ್ಯ ಹಂತ ಎನಿಸಿರುವ ವಿಚಾರಣೆಯ ಲೈವ್​ ಸ್ಟ್ರೀಮಿಂಗ್ ಬಗ್ಗೆ ಒಲವು ತೋರಿರುವುದನ್ನು ಇಲ್ಲಿ ಸ್ಮರಿಸಬಹುದು.

(For The First Time Karnataka High Court Live Stream Its Proceedings on Trail Basis)

ಇದನ್ನೂ ಓದಿ: ನ್ಯಾಯಸಮ್ಮತ ತನಿಖೆ ನಿಮಗೆ ಇಷ್ಟವಿಲ್ಲವೇ? ರಮೇಶ್ ಜಾರಕಿಹೊಳಿ ಪರ ವಕೀಲರಿಗೆ ಹೈಕೋರ್ಟ್​ ಪ್ರಶ್ನೆ

ಇದನ್ನೂ ಓದಿ: Central Vista ಸೆಂಟ್ರಲ್ ವಿಸ್ಟಾ ಯೋಜನೆ ಕಾಮಗಾರಿಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

Published On - 4:44 pm, Mon, 31 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?