AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಲೇಖನ ವ್ರತ ಕೈಗೊಂಡ ಹುಬ್ಬಳ್ಳಿಯ ನೇಮಿಸಾಗರ ಮುನಿಗಳು; ರಾಜ್ಯದಲ್ಲೇ ಮೊದಲು

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ 88 ವರ್ಷದ ಜೈನ ಮುನಿಗಳಿಂದ ಸಲ್ಲೇಖನ ವ್ರತ ಆಚರಣೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಲೋಳಿ ಗ್ರಾಮದ ಶ್ರೀ ನೇಮಿಸಾಗರ ಮಹಾರಾಜರಿಂದ ಕಳೆದ 22 ದಿನಗಳಿಂದ ಈ ಕಠಿಣ ಸಲ್ಲೇಖನ ವ್ರತ ನಡೆಯುತ್ತಿದೆ.

ಸಲ್ಲೇಖನ ವ್ರತ ಕೈಗೊಂಡ ಹುಬ್ಬಳ್ಳಿಯ ನೇಮಿಸಾಗರ ಮುನಿಗಳು; ರಾಜ್ಯದಲ್ಲೇ ಮೊದಲು
ನೇಮಿಸಾಗರ ಮುನಿಗಳು
sandhya thejappa
|

Updated on: Mar 22, 2021 | 12:06 PM

Share

ಹುಬ್ಬಳ್ಳಿ: ಸಾಮಾನ್ಯವಾಗಿ ಸಾಧು ಸಂತರು, ಮಠಾಧೀಶರು ತಮ್ಮ ಜೀವನದುದ್ದಕ್ಕೂ ಮಠಮಾನ್ಯಗಳಲ್ಲಿ ಜೀವನಗೈದು ತಮ್ಮ ಜೀವಿತಾವಧಿಯ ಕೊನೆಯಲ್ಲಿ ಲಿಂಗೈಕ್ಯ ಹೋಂದುವುದು ಸಾಮಾನ್ಯ. ಆದರೆ ಜೈನ ಸಮುದಾಯದ ಜೈನಮುನಿಗಳು ತಮ್ಮದೇ ಒಂದು ಸಂಪ್ರದಾಯ ಆಚಾರ ಬದ್ದವಾಗಿ ಕಠಿಣ ವ್ರತದ ಮೂಲಕ ತಮ್ಮ ಜೀವಿತಾವಧಿಯನ್ನ ಪೂರ್ಣಗೊಳಿಸುತ್ತಾರೆ. ಇಂತಹ ಕಠಿಣ ವ್ರತದ ಮೂಲಕ ಜಿಲ್ಲೆಯ ಜೈನಮುನಿಗಳು ತಮ್ಮ ದೇಹ ತ್ಯಾಗಕ್ಕಾಗಿ ಮುಂದಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ 88 ವರ್ಷದ ಜೈನ ಮುನಿಗಳಿಂದ ಸಲ್ಲೇಖನ ವ್ರತ ಆಚರಣೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಲೋಳಿ ಗ್ರಾಮದ ಶ್ರೀ ನೇಮಿಸಾಗರ ಮಹಾರಾಜರಿಂದ ಕಳೆದ 22 ದಿನಗಳಿಂದ ಈ ಕಠಿಣ ಸಲ್ಲೇಖನ ವ್ರತ ನಡೆಯುತ್ತಿದೆ. ಈ ಮೊದಲು ಗ್ರಹಸ್ತರಾಗಿದ್ದ ನೇಮಿಸಾಗರ ಮುನಿಗಳು ಕಳೆದ 25 ವರ್ಷಗಳ ಹಿಂದೆ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದು, ಇದೀಗ ಕಠಿಣ ಸಲ್ಲೇಖನ ವ್ರತ ಆಚರಿಸುವ ಮೂಲಕ ತಮ್ಮ ದೇಹ ತ್ಯಾಗಕ್ಕೆ ಮುಂದಾಗಿದ್ದಾರೆ.

ಮಲಗಿರುವ ನೇಮಿಸಾಗರ ಮುನಿ

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರ

ಕಠಿಣ ವ್ರತ ಕಳೆದ 22 ದಿನಗಳಿಂದ ಸಲ್ಲೇಖನ ವ್ರತ ಕೈಗೊಂಡಿರುವ ಜೈನ ಮುನಿಗಳು ಕಠಿಣ ರೀತಿಯ ವ್ರತಕ್ಕೆ ಮುಂದಾಗಿದ್ದಾರೆ. ಅಂದರೆ ಪ್ರತಿ ನಿತ್ಯ ಯಾವುದೇ ಆಹಾರ ಸೇವಿಸದೇ, ಹಣ್ಣು ಹಂಪಲು ಸೇವಿಸದೇ ಕೇವಲ 2 ಬೊಗಸೆ ನೀರು ಹಾಗೂ ದ್ರವರೂಪದ ಹಣ್ಣಿನ ರಸ ಸೇವಿಸುವ ಅವರು ಹಂತ ಹಂತವಾಗಿ, ದಿನದಿಂದ ದಿನಕ್ಕೆ ನೀರನ್ನೂ ಸಹ ತ್ಯಜಿಸುತ್ತಾರೆ. ಯಾವುದೇ ಸುಖಭೋಗಗಳನ್ನು ಬಯಸದೇ ಅತ್ಯಂತ ಕಠಿಣ ಪರಿಶ್ರಮ ಹಾಗೂ ಜೈನ ತೀರ್ಥಂಕರನ ಆರಾಧನೆ ಮಾಡುವ ಮೂಲಕ ತಮ್ಮ‌ ಜೀವನದುದ್ದಕ್ಕೂ ಅತ್ಯಂತ ಕಠಿಣ ರೀತಿಯ ಸಂಪ್ರದಾಯಗಳನ್ನು ಪಾಲಿಸುವ ಮೂಲಕ ದೈವಿ ಭಕ್ತರಾಗಿ ಜೈನ‌ ಸಮುದಾಯದವರಲ್ಲಿ ದೈವಿ ಸಂಭೂತರಾಗಿದ್ದಾರೆ. ಇನ್ನು ಕರ್ನಾಟಕದಲ್ಲೇ ಈ ಮುನಿಗಳು ಸತತ 22 ದಿನಗಳ ಕಾಲ ಸಲ್ಲೇಖನ ವ್ರತ ಕೈಗೊಂಡಿರುವ ಏಕೈಕ ಮುನಿಗಳಾಗಿದ್ದು, ಈ ರೀತಿಯ ಕಠಿಣ ವ್ರತದ ಮೂಲಕ ತಮ್ಮ ಜೀವನ ತ್ಯಾಗಕ್ಕೆ ಮುಂದಾಗಿರುವುದು ವಿಶೇಷ.

ಇದನ್ನೂ ಓದಿ

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ದಾವಣಗೆರೆ: ತಮ್ಮ ಸಮಸ್ಯೆಯನ್ನು ತಾವೆ ಬಗೆಹರಿಸಿಕೊಂಡ ದೇವರಳ್ಳಿ ಗ್ರಾಮದ ಜನರು; ಸುತ್ತುವರೆದ ರಾಜಕೀಯ ದ್ವೇಷ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ