AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಲೇಖನ ವ್ರತ ಕೈಗೊಂಡ ಹುಬ್ಬಳ್ಳಿಯ ನೇಮಿಸಾಗರ ಮುನಿಗಳು; ರಾಜ್ಯದಲ್ಲೇ ಮೊದಲು

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ 88 ವರ್ಷದ ಜೈನ ಮುನಿಗಳಿಂದ ಸಲ್ಲೇಖನ ವ್ರತ ಆಚರಣೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಲೋಳಿ ಗ್ರಾಮದ ಶ್ರೀ ನೇಮಿಸಾಗರ ಮಹಾರಾಜರಿಂದ ಕಳೆದ 22 ದಿನಗಳಿಂದ ಈ ಕಠಿಣ ಸಲ್ಲೇಖನ ವ್ರತ ನಡೆಯುತ್ತಿದೆ.

ಸಲ್ಲೇಖನ ವ್ರತ ಕೈಗೊಂಡ ಹುಬ್ಬಳ್ಳಿಯ ನೇಮಿಸಾಗರ ಮುನಿಗಳು; ರಾಜ್ಯದಲ್ಲೇ ಮೊದಲು
ನೇಮಿಸಾಗರ ಮುನಿಗಳು
sandhya thejappa
|

Updated on: Mar 22, 2021 | 12:06 PM

Share

ಹುಬ್ಬಳ್ಳಿ: ಸಾಮಾನ್ಯವಾಗಿ ಸಾಧು ಸಂತರು, ಮಠಾಧೀಶರು ತಮ್ಮ ಜೀವನದುದ್ದಕ್ಕೂ ಮಠಮಾನ್ಯಗಳಲ್ಲಿ ಜೀವನಗೈದು ತಮ್ಮ ಜೀವಿತಾವಧಿಯ ಕೊನೆಯಲ್ಲಿ ಲಿಂಗೈಕ್ಯ ಹೋಂದುವುದು ಸಾಮಾನ್ಯ. ಆದರೆ ಜೈನ ಸಮುದಾಯದ ಜೈನಮುನಿಗಳು ತಮ್ಮದೇ ಒಂದು ಸಂಪ್ರದಾಯ ಆಚಾರ ಬದ್ದವಾಗಿ ಕಠಿಣ ವ್ರತದ ಮೂಲಕ ತಮ್ಮ ಜೀವಿತಾವಧಿಯನ್ನ ಪೂರ್ಣಗೊಳಿಸುತ್ತಾರೆ. ಇಂತಹ ಕಠಿಣ ವ್ರತದ ಮೂಲಕ ಜಿಲ್ಲೆಯ ಜೈನಮುನಿಗಳು ತಮ್ಮ ದೇಹ ತ್ಯಾಗಕ್ಕಾಗಿ ಮುಂದಾಗಿದ್ದಾರೆ.

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ 88 ವರ್ಷದ ಜೈನ ಮುನಿಗಳಿಂದ ಸಲ್ಲೇಖನ ವ್ರತ ಆಚರಣೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಲೋಳಿ ಗ್ರಾಮದ ಶ್ರೀ ನೇಮಿಸಾಗರ ಮಹಾರಾಜರಿಂದ ಕಳೆದ 22 ದಿನಗಳಿಂದ ಈ ಕಠಿಣ ಸಲ್ಲೇಖನ ವ್ರತ ನಡೆಯುತ್ತಿದೆ. ಈ ಮೊದಲು ಗ್ರಹಸ್ತರಾಗಿದ್ದ ನೇಮಿಸಾಗರ ಮುನಿಗಳು ಕಳೆದ 25 ವರ್ಷಗಳ ಹಿಂದೆ ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದು, ಇದೀಗ ಕಠಿಣ ಸಲ್ಲೇಖನ ವ್ರತ ಆಚರಿಸುವ ಮೂಲಕ ತಮ್ಮ ದೇಹ ತ್ಯಾಗಕ್ಕೆ ಮುಂದಾಗಿದ್ದಾರೆ.

ಮಲಗಿರುವ ನೇಮಿಸಾಗರ ಮುನಿ

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರ

ಕಠಿಣ ವ್ರತ ಕಳೆದ 22 ದಿನಗಳಿಂದ ಸಲ್ಲೇಖನ ವ್ರತ ಕೈಗೊಂಡಿರುವ ಜೈನ ಮುನಿಗಳು ಕಠಿಣ ರೀತಿಯ ವ್ರತಕ್ಕೆ ಮುಂದಾಗಿದ್ದಾರೆ. ಅಂದರೆ ಪ್ರತಿ ನಿತ್ಯ ಯಾವುದೇ ಆಹಾರ ಸೇವಿಸದೇ, ಹಣ್ಣು ಹಂಪಲು ಸೇವಿಸದೇ ಕೇವಲ 2 ಬೊಗಸೆ ನೀರು ಹಾಗೂ ದ್ರವರೂಪದ ಹಣ್ಣಿನ ರಸ ಸೇವಿಸುವ ಅವರು ಹಂತ ಹಂತವಾಗಿ, ದಿನದಿಂದ ದಿನಕ್ಕೆ ನೀರನ್ನೂ ಸಹ ತ್ಯಜಿಸುತ್ತಾರೆ. ಯಾವುದೇ ಸುಖಭೋಗಗಳನ್ನು ಬಯಸದೇ ಅತ್ಯಂತ ಕಠಿಣ ಪರಿಶ್ರಮ ಹಾಗೂ ಜೈನ ತೀರ್ಥಂಕರನ ಆರಾಧನೆ ಮಾಡುವ ಮೂಲಕ ತಮ್ಮ‌ ಜೀವನದುದ್ದಕ್ಕೂ ಅತ್ಯಂತ ಕಠಿಣ ರೀತಿಯ ಸಂಪ್ರದಾಯಗಳನ್ನು ಪಾಲಿಸುವ ಮೂಲಕ ದೈವಿ ಭಕ್ತರಾಗಿ ಜೈನ‌ ಸಮುದಾಯದವರಲ್ಲಿ ದೈವಿ ಸಂಭೂತರಾಗಿದ್ದಾರೆ. ಇನ್ನು ಕರ್ನಾಟಕದಲ್ಲೇ ಈ ಮುನಿಗಳು ಸತತ 22 ದಿನಗಳ ಕಾಲ ಸಲ್ಲೇಖನ ವ್ರತ ಕೈಗೊಂಡಿರುವ ಏಕೈಕ ಮುನಿಗಳಾಗಿದ್ದು, ಈ ರೀತಿಯ ಕಠಿಣ ವ್ರತದ ಮೂಲಕ ತಮ್ಮ ಜೀವನ ತ್ಯಾಗಕ್ಕೆ ಮುಂದಾಗಿರುವುದು ವಿಶೇಷ.

ಇದನ್ನೂ ಓದಿ

ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ದಾವಣಗೆರೆ: ತಮ್ಮ ಸಮಸ್ಯೆಯನ್ನು ತಾವೆ ಬಗೆಹರಿಸಿಕೊಂಡ ದೇವರಳ್ಳಿ ಗ್ರಾಮದ ಜನರು; ಸುತ್ತುವರೆದ ರಾಜಕೀಯ ದ್ವೇಷ

Follow Us
sandhya thejappa
sandhya thejappa
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ