AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ

ಕರ್ನಾಟಕದಲ್ಲಿರುವ ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ
ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Jan 12, 2024 | 6:50 AM

Share

ಬೆಂಗಳೂರು, ಜ.12: ಕರ್ನಾಟಕದಲ್ಲಿರುವ ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ (IPS) ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಕೆಲವು ಐಪಿಎಸ್ ಅಧಿಕಾರಿಗಳು ಅಸಮಧಾನಗೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದೆ. ಈ ಪೈಕಿ 26 ಐಪಿಎಸ್ ಅಧಿಕಾರಿಗಳು ಕರ್ನಾಟಕದವರೇ ಆಗಿದ್ದಾರೆ.

ಇದನ್ನೂ ಓದಿ:  37 ಐಪಿಎಸ್​ಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ಸರ್ಕಾರ ಆದೇಶ

ತಮ್ಮ ಅಭಿಪ್ರಾಯ ಕೇಳದೇ ಡಿಪಿಎಆರ್ ಹೆಸರು ಕಳುಹಿಸಿದೆ ಎಂದು ಅತೃಪ್ತಿ ತೋರಿಸಿರುವ ಕೆಲವರು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ. 2012 ರಲ್ಲಿ‌ ಮುಂಬಡ್ತಿ ಪಡೆದಿದ್ದರು. ಆದರೆ ಎರವಲು ಸೇವೆಗೆ ಬಲವಂತವಾಗಿ ಕಳುಹಿಸಲು ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರದ ಸೇವೆಗೆ ಶಿಫಾರಸುಗೊಂಡವರ ವಿವರ:

ಬೆಂಗಳೂರಿನ ಡಿಸಿಪಿಗಳಾದ ಸಿ.ಕೆ.ಬಾಬಾ, ಎಸ್‌.ಗಿರೀಶ್‌, ಡಿ.ದೇವರಾಜ್‌, ಡಿ.ಆರ್.ಸಿರಿಗೌರಿ, ಅಬ್ದುಲ್ ಅಹದ್‌, ಅಮೃತ್‌ ಪ್ರಕಾಶ್ ನಿಖಂ, ಎಸ್​ಪಿಗಳಾದ ಇಲಕಿಯಾ ಕರುಣಾಕರನ್‌, ಡಾ.ಭೀಮಾಶಂಕರ್‌ ಗುಳೇದ್‌, ಧರ್ಮೇಂದ್ರ ಕುಮಾರ್ ಮೀನಾ, ಶ್ರೀನಾಥ್ ಮಹದೇವ ಜೋಶಿ ಸೇರಿದಂತೆ ಇತರರನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!