AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ

ಕರ್ನಾಟಕದಲ್ಲಿರುವ ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ
ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು: ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು IPS ಅಧಿಕಾರಿಗಳ ನಕಾರ (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Jan 12, 2024 | 6:50 AM

Share

ಬೆಂಗಳೂರು, ಜ.12: ಕರ್ನಾಟಕದಲ್ಲಿರುವ ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದೆ. ತಮ್ಮ ಅಭಿಪ್ರಾಯಗಳನ್ನು ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ (IPS) ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದು, ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ.

ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಕೆಲವು ಐಪಿಎಸ್ ಅಧಿಕಾರಿಗಳು ಅಸಮಧಾನಗೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್​ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದೆ. ಈ ಪೈಕಿ 26 ಐಪಿಎಸ್ ಅಧಿಕಾರಿಗಳು ಕರ್ನಾಟಕದವರೇ ಆಗಿದ್ದಾರೆ.

ಇದನ್ನೂ ಓದಿ:  37 ಐಪಿಎಸ್​ಗಳ ವರ್ಗಾವಣೆ, 46 IAS ಅಧಿಕಾರಿಗಳಿಗೆ ಬಡ್ತಿ: ಸರ್ಕಾರ ಆದೇಶ

ತಮ್ಮ ಅಭಿಪ್ರಾಯ ಕೇಳದೇ ಡಿಪಿಎಆರ್ ಹೆಸರು ಕಳುಹಿಸಿದೆ ಎಂದು ಅತೃಪ್ತಿ ತೋರಿಸಿರುವ ಕೆಲವರು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ. 2012 ರಲ್ಲಿ‌ ಮುಂಬಡ್ತಿ ಪಡೆದಿದ್ದರು. ಆದರೆ ಎರವಲು ಸೇವೆಗೆ ಬಲವಂತವಾಗಿ ಕಳುಹಿಸಲು ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರದ ಸೇವೆಗೆ ಶಿಫಾರಸುಗೊಂಡವರ ವಿವರ:

ಬೆಂಗಳೂರಿನ ಡಿಸಿಪಿಗಳಾದ ಸಿ.ಕೆ.ಬಾಬಾ, ಎಸ್‌.ಗಿರೀಶ್‌, ಡಿ.ದೇವರಾಜ್‌, ಡಿ.ಆರ್.ಸಿರಿಗೌರಿ, ಅಬ್ದುಲ್ ಅಹದ್‌, ಅಮೃತ್‌ ಪ್ರಕಾಶ್ ನಿಖಂ, ಎಸ್​ಪಿಗಳಾದ ಇಲಕಿಯಾ ಕರುಣಾಕರನ್‌, ಡಾ.ಭೀಮಾಶಂಕರ್‌ ಗುಳೇದ್‌, ಧರ್ಮೇಂದ್ರ ಕುಮಾರ್ ಮೀನಾ, ಶ್ರೀನಾಥ್ ಮಹದೇವ ಜೋಶಿ ಸೇರಿದಂತೆ ಇತರರನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ