AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವರ್ಷದ ಹಿಂದೆ ನಿತ್ಯಾನಂದ ಆಶ್ರಮಕ್ಕೆ ಬಂದಿದ್ದ ವಿದೇಶಿ ಪ್ರಜೆ ನಾಪತ್ತೆ

ಆಶ್ರಮದಲ್ಲಿ ತಾಯಿಯ ಜೊತೆಗೆ ಇದ್ದ ಕ್ರಿಶಾಂತ್ ಭಾಸ್ಕರನ್ ಜುಲೈ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶೌಚಗೃಹಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ಅಲ್ಲದೇ ಲಾಕರ್​ನಲ್ಲಿದ್ದ ಪಾಸ್ ಪೋರ್ಟ್ ಸಹಾ ಕಾಣೆಯಾಗಿದೆ. ನಾವು ಆಶ್ರಮದಲ್ಲಿ ಹುಡುಕಿದ್ದೇವೆ.

8 ವರ್ಷದ ಹಿಂದೆ ನಿತ್ಯಾನಂದ ಆಶ್ರಮಕ್ಕೆ ಬಂದಿದ್ದ ವಿದೇಶಿ ಪ್ರಜೆ ನಾಪತ್ತೆ
ನಾಪತ್ತೆಯಾಗಿರುವ ಕ್ರಿಶಾಂತ್ ಭಾಸ್ಕರನ್
TV9 Web
| Updated By: sandhya thejappa|

Updated on: Jul 11, 2021 | 9:25 AM

Share

ರಾಮನಗರ: ತಾಲೂಕಿನ ಬಿಡದಿ ಬಳಿ ಇರುವ ನಿತ್ಯಾನಂದ ಆಶ್ರಮದಲ್ಲಿ ಆಶ್ರಯ ಪಡೆಯುತ್ತಿದ್ದ ವಿದೇಶಿ ಪ್ರಜೆಯೊಬ್ಬ ನಾಪತ್ತೆಯಾಗಿದ್ದು, ಆತನನ್ನ ಹುಡುಕಿಕೊಡುವಂತೆ ಆತನ ತಾಯಿ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಲೇಷಿಯಾ ಪ್ರಜೆಯಾದ 23 ವರ್ಷದ ಕ್ರಿಶಾಂತ್ ಭಾಸ್ಕರನ್ ನಾಪತ್ತೆಯಾಗಿರುವ ಯುವಕ. ಕ್ರಿಶಾಂತ್ ಭಾಸ್ಕರನ್ ಮಾನಸಿಕ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಎಂಟು ವರ್ಷಗಳ ಹಿಂದೆ ಮಲೇಷಿಯಾದಿಂದ ಬಿಡದಿಯ ನಿತ್ಯಾನಂದ ಆಶ್ರಮಕ್ಕೆ ತನ್ನ ತಾಯಿಯೊಂದಿಗೆ ಬಂದಿದ್ದ.

ಆಶ್ರಮದಲ್ಲಿ ತಾಯಿಯ ಜೊತೆಗೆ ಇದ್ದ ಕ್ರಿಶಾಂತ್ ಭಾಸ್ಕರನ್ ಜುಲೈ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಶೌಚಗೃಹಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ನಾಪತ್ತೆಯಾಗಿದ್ದಾನೆ. ಅಲ್ಲದೇ ಲಾಕರ್​ನಲ್ಲಿದ್ದ ಪಾಸ್ ಪೋರ್ಟ್ ಸಹಾ ಕಾಣೆಯಾಗಿದೆ. ನಾವು ಆಶ್ರಮದಲ್ಲಿ ಹುಡುಕಿದ್ದೇವೆ. ಆದರೆ ಮಗ ಎಲ್ಲೂ ಕಾಣಲಿಲ್ಲ ಅಂತ ಕ್ರಿಶಾಂತ್ ಭಾಸ್ಕರನ್ ತಾಯಿ ಪುಷ್ಪರಾಣಿ ರಾಮಲಿಂಗಂ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಜೊತೆಗೆ ಕ್ರಿಶಾಂತ್ ಭಾಸ್ಕರನ್ ಮಾನಸಿಕ ಅಸ್ವತ್ಥನಾಗಿದ್ದು, ತಕ್ಷಣವೇ ಕೋಪಗೊಳ್ಳುತ್ತಾನೆ. ಎದುರಿಗಿರುವ ವ್ಯಕ್ತಿಗಳ ಮೇಲೆ ವಿನಾಕಾರಣ ಹಲ್ಲೆ ಮಾಡುವುದು ಮತ್ತು ವಸ್ತುಗಳನ್ನ ಒಡೆದು ಹಾಕುವುದನ್ನ ಮಾಡುತ್ತಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.

ಇದನ್ನೂ ಓದಿ

ನಿಮ್ಮಲ್ಲಿ ಕೊರೊನಾ ಸೋಂಕಿದೆ; ಹಾಗಾಗಿ ನನ್ನ ಕೈಲಾಸಕ್ಕೆ ನೀವ್ಯಾರೂ ಬರಬೇಡಿ ಎಂದು ಭಾರತೀಯರಿಗೆ ಹೇಳಿದ ನಿತ್ಯಾನಂದ!

ಎಲ್ಲಿದ್ದಾನೆ Nithyananda Swamiji? ತಲೆಮರೆಸಿಕೊಂಡಿರುವ ನಿತ್ಯಾನಂದ ಸ್ವಾಮಿ ಹುಡುಕುವಲ್ಲಿ ವಿಫಲವಾದ್ರಾ ಅಧಿಕಾರಿಗಳು

(Foreign Citizen missing in Nityananda Ashram at Ramanagara)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ