AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯಾಧಿಕಾರಿ ಖಡಕ್ ಮಾತು: ಹುಲಿ ಉಗುರು ಲಾಕೆಟ್​ ಧರಿಸಿದವರಿಗೆ ಶುರುವಾಯ್ತು ಸಂಕಷ್ಟ!

ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್​ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇವರ ಬಂಧನ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಈ ಬಗ್ಗೆ ಅರಣಾಧಿಕಾರಿ ಖಡಕ್ ಮಾತುಗಳನ್ನಾಡಿದ್ದು, ಹುಲಿ ಉಗುರಿನ ಲಾಕೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.

ಅರಣ್ಯಾಧಿಕಾರಿ ಖಡಕ್ ಮಾತು: ಹುಲಿ ಉಗುರು ಲಾಕೆಟ್​ ಧರಿಸಿದವರಿಗೆ ಶುರುವಾಯ್ತು ಸಂಕಷ್ಟ!
ಅರಣ್ಯಾಧಿಕಾರಿ ರವೀಂದ್ರ
TV9 Web
| Edited By: |

Updated on:Oct 26, 2023 | 12:40 PM

Share

ಬೆಂಗಳೂರು, (ಅಕ್ಟೋಬರ್ 25): ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿದ(tiger claw pendant) ಪ್ರಕರಣದಲ್ಲಿ ಬಂಧನ ಬಳಿಕ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇನ್ನು ಈ ಹುಲಿ ಉಗುರಿನ ಲಾಕೆಟ್​ ಧರಿಸಿ ಫೋಟೋಗಳು ವೈರಲ್ ಆಗುತ್ತಿರುವ ಬಗ್ಗೆ ಡಿಸಿಎಫ್​ಓ ರವೀಂದ್ರ ಅವರು ಪ್ರತಿಕ್ರಿಯಿಸಿ, ಸದ್ಯಕ್ಕೆ ನಮಗೆ ಯಾವ ದೂರು ಬಂದಿಲ್ಲ. ಬೇರೆಯವರು ಹಾಕಿದ್ದರೂ ಕಾನೂನು ಅಡಿಯಲ್ಲಿ ಅಪರಾಧ ಆಗುತ್ತೆ. ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ. ಇದರಿಂದ ಯಾರೆಲ್ಲ ಹುಲಿ ಉಗುರಿನ ಪೆಂಡೆಟ್ ಧರಿಸಿದವರಿಗೆ ಢವ ಢವ ಶುರುವಾಗಿದೆ.

ಅಂತಹ ಪ್ರಕರಣ ನಮ್ಮಲ್ಲಿ ರಿಜಿಸ್ಟರ್ ಅದ್ರೆ ಅದಕ್ಕೆ ಎನು ಬೇಕೋ ಅದನ್ನ ಕ್ರಮ ತೆಗೆದುಕೊಳ್ಳಲು ಅಧಿಕಾರ ಇದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಬರುವಂತೆ ಹೇಳಲಾಗುತ್ತೆ. ಬಳಿಕ ಹುಲಿ ಉಗುರಿನ ನೈಜತೆ ಬಗ್ಗೆ ಕನ್ಫರ್ಮ್ ಮಾಡಿಕೊಳ್ಳಬೇಕಿದೆ. ಹಸುವಿನ ಕೊಂಬನ್ನ ಹುಲಿ ಉಗುರು ಎಂದು ಮಾರಾಟ ಮಾಡಲಾಗುತ್ತೆ. ಅದಕ್ಕೆ ಅದರ ನೈಜತೆ ಬಗ್ಗೆ ಪರೀಶಿಲನೆ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

ಇನ್ನೂ ಬಿಗ್​ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ಬಂಧಿಸಿರುವ ಬಗ್ಗೆ ಮಾತನಾಡಿರುವ ಅವರು, ಸಂತೋಷ್ ಅವರನ್ನು ಏಕಾಎಕಿ ದಸ್ತಗಿರಿ ಮಾಡಲಿಲ್ಲ. ಲಾಕೆಟ್​ನ ತಪಾಸಣೆ ಮಾಡಿ ಅರ್ಧ ಮುಕ್ಕಾಲು ಗಂಟೆ ಅದರ ನೈಜತೆ ಗೊತ್ತಾದಮೇಲೆಯೇ ಅವರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಇನ್ನು ನಟ ದರ್ಶನ ಹಾಗೂ ಜಗ್ಗೇಶ್​ ಅವರ ಹುಲಿ ಉಗುರಿನ ಲಾಕೆಟ್ ವೈರಲ್ ಆಗುತ್ತುರುವ ಬಗ್ಗೆ ಪ್ರತಿಕ್ರಿಯಿಸಿ,  ನೋಟಿಸ್ ನೀಡಲು ನನಗೆ ಅವಕಾಶ ಇದೆ. ದೂರು ಬಂದ್ರೆ ನೋಟಿಸ್ ಜಾರಿ ಮಾಡಿ ಅವರನ್ನ ವಿಚಾರಣೆಗೊಳಪಡಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು.

ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಏನು ಹೇಳುತ್ತೆ?

ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹಿಸುವುದು ತಪ್ಪಾಗುತ್ತದೆ. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.

ವರ್ತೂರ್ ಸಂತೋಷ್ ಬಂಧನದ ಬಳಿಕ ಹುಲಿ ಉಗುರು ಲಾಕೆಟ್​ ಪ್ರಕರಣಗಳು ಒಂದೇ ಒಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ, ಅದರಲ್ಲೂ ಗಣ್ಯ ವ್ಯಕ್ತಿಗಳು ಹಾಕಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇವರ ಬಂಧನ ಯಾವಾಗ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 25 October 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?