AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ವಿದುರಾಶ್ವತ್ಥದಲ್ಲಿ ಕೋತಿಗಳ ಉಪಟಳ: ಓಡಿಸುವುದಕ್ಕೆ ಮಾರುವೇಷ ಧರಿಸಿದ ಅರಣ್ಯ ಸಿಬ್ಬಂದಿ

ಪ್ರವಾಸಿ ತಾಣದಲ್ಲಿ ಕೋತಿಗಳ ಉಪಟಳ ನಿಯಂತ್ರಿಸುವಂತೆ ಪ್ರವಾಸಿಗರು ಹಾಗೂ ಸ್ಥಳಿಯರು ಅರಣ್ಯ ಇಲಾಖೆಗೆ ದೂರು ನೀಡಿದ ಕಾರಣ ಸ್ವತಃ ಅರಣ್ಯ ಇಲಾಖೆ ಸಿಬ್ಬಂದಿ ಕೋತಿಗಳನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಪಟಾಕಿ ಹೊಡೆದು, ಬೆದರಿಸಿದರು ಕೋತಿಗಳು ಹೋಗುತ್ತಿಲ್ಲ.

ಚಿಕ್ಕಬಳ್ಳಾಪುರದ ವಿದುರಾಶ್ವತ್ಥದಲ್ಲಿ ಕೋತಿಗಳ ಉಪಟಳ: ಓಡಿಸುವುದಕ್ಕೆ ಮಾರುವೇಷ ಧರಿಸಿದ ಅರಣ್ಯ ಸಿಬ್ಬಂದಿ
ಕಪ್ಪು ಕೋತಿಯ ಮಾರುವೇಷ ಧರಿಸಿದ ಅರಣ್ಯ ಸಿಬ್ಬಂದಿ
sandhya thejappa
|

Updated on: Mar 14, 2021 | 12:59 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ವಿದುರಾಶ್ವತ್ಥ ಪ್ರಸಿದ್ಧ ಪ್ರವಾಸಿ ತಾಣ. ದೇಶದ ವಿವಿಧ ಭಾಗಗಳಿಂದ ವಿದುರಾಶ್ವತ್ಥಕ್ಕೆ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಪ್ರವಾಸಿಗರು ವಿಧುರಾಶ್ವತ್ಥಕ್ಕೆ ಬಂದು ಪ್ರವಾಸಿ ತಾಣ ವಿಕ್ಷಣೆ ಮಾಡುವುದಕ್ಕೂ ಮುನ್ನ ಅಲ್ಲಿರುವ ಕೋತಿಗಳ ಕಾಟವನ್ನು ಸಹಿಸಿಕೊಳ್ಳುವ ಪರಿಸ್ಥಿತಿ ಇದೀಗ ಎದುರಾಗಿದೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಎಂದರೆ ಒಂದೆಡೆ ಅಶ್ವತ್ಥನಾರಾಯಣಸ್ವಾಮಿಯ ಪುರಾಣ ಪ್ರಸಿದ್ಧ ಧಾರ್ಮಿಕ ತಾಣ. ಮತ್ತೊಂದೆಡೆ ಸ್ವಾತಂತ್ರ್ಯ ಸೇನಾನಿಗಳು ಹುತಾತ್ಮರಾದ ತಾಣ. ಇದರಿಂದ ವಿದುರಾಶ್ವತ್ಥ ನೋಡಲು ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಆದರೆ ಇಲ್ಲಿರುವ ಕೋತಿಗಳ ಉಪಟಳ ಒಂದಲ್ಲ ಎರಡಲ್ಲ. ಸ್ವತಃ ಅರಣ್ಯ ಇಲಾಖೆ ಸಿಬ್ಬಂದಿ ಮುಖಕ್ಕೆ ಕಪ್ಪು ಕೋತಿಯ ಮಾರುವೇಷ ಧರಿಸಿ ಕೋತಿಗಳನ್ನು ಹೆದುರಿಸುವ ಪರಿಸ್ಥಿತಿ ಉದ್ಭವವಾಗಿದೆ.

ಪ್ರವಾಸಿ ತಾಣದಲ್ಲಿ ಕೋತಿಗಳ ಉಪಟಳ ನಿಯಂತ್ರಿಸುವಂತೆ ಪ್ರವಾಸಿಗರು ಹಾಗೂ ಸ್ಥಳಿಯರು ಅರಣ್ಯ ಇಲಾಖೆಗೆ ದೂರು ನೀಡಿದ ಕಾರಣ ಸ್ವತಃ ಅರಣ್ಯ ಇಲಾಖೆ ಸಿಬ್ಬಂದಿ ಕೋತಿಗಳನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ. ಪಟಾಕಿ ಹೊಡೆದು, ಬೆದರಿಸಿದರು ಕೋತಿಗಳು ಹೋಗುತ್ತಿಲ್ಲ. ಆದರೆ ನಾಡಿನ ಕೋತಿಗಳಿಗೆ ಕಾಡಿನ ಕಪ್ಪು ಕೋತಿ ಹಾಗೂ ಲಂಗೂರು ಕೋತಿ ಕಂಡರೆ ಪ್ರಾಣ ಭಯ. ಇದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಕಪ್ಪು ಕೋತಿಯ ವೇಷ ಧರಿಸಿ ಕೋತಿಗಳು ಇರುವ ಕಡೆ ಹೋಗಿ ಕೋತಿಗಳನ್ನು ಓಡಿಸುತ್ತಾರೆ.

ವಿದುರಾಶ್ವತ್ಥ ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಿರುವ ಭಕ್ತರು

ಕೋತಿಗಳನ್ನು ಓಡಿಸುವುದಕ್ಕೆ ಅರಣ್ಯ ಸಿಬ್ಬಂದಿಯ ಮಾರುವೇಷ

ವಿದುರಾಶ್ವತ್ಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆ ಮಾಡಲು ಹೋಗೋಣ ಎಂದರೆ ಕೋತಿಗಳು ಕೈಯಲ್ಲಿರುವ ಪೂಜಾ ಸಾಮಾಮಗ್ರಿಗಳು ಕಿತ್ತು ಬಿಸಾಡುತ್ತವೆ. ದೇವರಿಗೆ ನೈವೇದ್ಯ ಮಾಡೋಣ ಅಂತ ಹಾಲು, ಮೊಸರು ತೆಗೆದುಕೊಂಡರೆ ದೇವರ ಗುಡಿ ತಲುಪುವ ಮೊದಲೇ ಕೋತಿಗಳ ಪಾಲಾಗುತ್ತದೆ. ಈಗ ಬೇಸಿಗೆಯಾದ ಕಾರಣ ಕಾಡಿನ ಕೋತಿಗಳು ಸಹಜವಾಗಿ ಜನ ಜಂಗುಳಿಯ ಪ್ರವಾಸಿ ಧಾಮದತ್ತ ಲಗ್ಗೆಯಿಡುತ್ತವೆ. ಆದರೆ ವಿದುರಾಶ್ವತ್ಥಸ್ವಾಮಿ ದೇವಸ್ಥಾನದ ಬಳಿ ಇರುವ ಕೋತಿಗಳು ಭಕ್ತರಿಗೆ ತೀರಾ ತೊಂದರೆಗಳನ್ನು ನಿಡುತ್ತಿವೆ. ಇದಕ್ಕಾಗಿ ಮಂಗಗಳ ಕಾಟದಿಂದ ಪಾರು ಮಾಡುವಂತೆ ಭಕ್ತರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದು, ಕೋತಿಗಳನ್ನು ಓಡಿಸಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ವಿದುರಾಶ್ವತ್ಥ ದೇವಸ್ಥಾನದ ಬಳಿಯಿರುವ ಕೋತಿ

ಇದನ್ನೂ ಓದಿ

ಮಹಾರಾಷ್ಟ್ರ: ಥಾಣೆ ಬಳಿ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ; 28 ವಿದ್ಯುತ್ ಮೀಟರ್​ಗಳು ಭಸ್ಮ

ಜೊಮ್ಯಾಟೊ ಫುಡ್​ ಡೆಲಿವರಿ ಬಾಯ್ ಕಾಮರಾಜು​ ಪರ ನಿಂತ ಬಾಲಿವುಡ್​ನ ಖ್ಯಾತ​ ನಟಿ; ಆರೋಪ ಮಾಡಿದ ಮಹಿಳೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!