AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ.. ಯೋಗೀಶ್ವರ್​ ಜೇಬಿಗೆ ಕೈಹಾಕೋಕೆ ಆಗತ್ತಾ ಎಂದು ಕೇಳಿದ್ದೇಕೆ ಮಾಜಿ ಸಿಎಂ

ರಾಜಕೀಯ ಬಿಟ್ಟು ಗೌರವಯುತವಾಗಿ ಮನೆಯಲ್ಲಿ ಇರುವುದು ಉತ್ತಮ ಎಂದು ಎಚ್​.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಸಿ.ಪಿ.ಯೋಗೀಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ..  ಯೋಗೀಶ್ವರ್​ ಜೇಬಿಗೆ ಕೈಹಾಕೋಕೆ ಆಗತ್ತಾ ಎಂದು ಕೇಳಿದ್ದೇಕೆ ಮಾಜಿ ಸಿಎಂ
ರಾಮನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಟೀ ಕುಡಿದ ಎಚ್​. ಡಿ.ಕುಮಾರಸ್ವಾಮಿ
Lakshmi Hegde
| Edited By: |

Updated on: Jan 06, 2021 | 5:58 PM

Share

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು, ಸಿ.ಪಿ.ಯೋಗೀಶ್ವರ್​ ವಿರುದ್ಧ, ಅವರ ಹೆಸರನ್ನು ಉಲ್ಲೇಖ ಮಾಡದೆ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆಯಲ್ಲಿ ಏನೋ ಮಾಡಿಬಿಡುತ್ತೇನೆ, ನಾಳೆ ಮಂತ್ರಿಯಾಗುತ್ತೇನೆ, ನಾಡಿದ್ದು ಮಂತ್ರಿಯಾಗುತ್ತೇನೆ ಎಂದು ಹೇಳಿ ಜನರನ್ನು ಸೆಳೆಯುತ್ತಿದ್ದಾರೆ.. ಇನ್ನೊಂದೆಡೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಹಣ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಅದ್ಯಾವುದೋ ಚೆನ್ನಪಟ್ಟಣ ಸಬ್​ಇನ್ಸ್​ಪೆಕ್ಟರ್​ ವರ್ಗಾವಣೆಗೆ 30 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ. ಇಷ್ಟೆಲ್ಲ ಹಣ ಕೊಟ್ಟು ಬಂದ ಅಧಿಕಾರಿ ಇನ್ನೇನು ಮಾಡುತ್ತಾರೆ? ಅವರು ಯೋಗೀಶ್ವರ್ ಜೇಬಿಗೆ ಕೈಹಾಕಲು ಸಾಧ್ಯವಾಗತ್ತಾ? ಇಲ್ಲ.. ಹಾಗಾಗಿ ಜನರ ಜೇಬಿಗೆ ಕೈಹಾಕುತ್ತಾರೆ.

ಇನ್ನೆಷ್ಟು ದಿನ ಹೀಗೆ ಹಣ ಸಂಪಾದನೆ ಮಾಡಬೇಕು. ಜೀವನದಲ್ಲಿ ಮನುಷ್ಯನಿಗೆ ದುಡ್ಡು ಬೇಕು. ಆದರೆ ಹೀಗೆಲ್ಲ ಹಗಲು ದರೋಡೆ ಮಾಡುವುದು ಸರಿಯಲ್ಲ. ಇಂಥ ರಾಜಕೀಯ ಬಿಟ್ಟು ಗೌರವಯುತವಾಗಿ ಮನೆಯಲ್ಲಿ ಇರುವುದು ಉತ್ತಮ ಎಂದು ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಮಡಿಕೆ ಚಹಾ ಕುಡಿದ ಮಾಜಿ ಸಿಎಂ ಇನ್ನು ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ಹೋಗುವ ಮಾರ್ಗ ಮಧ್ಯೆಯಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಮಡಿಕೆಯಲ್ಲಿ ಚಹಾ ಕುಡಿದಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ, ಜೆಡಿಎಸ್ ಕಾರ್ಯಕರ್ತ ಪ್ರತಾಪ್​ ಅವರ ಅಂಗಡಿಯಲ್ಲಿ ಟೀ ಕುಡಿದ ಕುಮಾರಸ್ವಾಮಿಗೆ ಮಾಗಡಿ ಶಾಸಕ ಎ.ಮಂಜುನಾಥ್​ ಸಾಥ್​ ನೀಡಿದರು.

‘ನಾನು ಹೊನ್ನಾಳಿಯ ಅಂಜದ ಗಂಡು..‘ ಎನ್ನುತ್ತ ಯತ್ನಾಳ್​ಗೆ ತಿರುಗೇಟು ನೀಡಿದ ಎಂ.ಪಿ.ರೇಣುಕಾಚಾರ್ಯ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ