AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆತ್ಮನಿರ್ಭರ’ ಜಾರಿಗೆ ಬರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು: ಎಚ್​ಡಿ ಕುಮಾರಸ್ವಾಮಿ

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕು ಎಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

‘ಆತ್ಮನಿರ್ಭರ' ಜಾರಿಗೆ ಬರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು: ಎಚ್​ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
Lakshmi Hegde
| Edited By: |

Updated on: Jan 09, 2021 | 7:20 PM

Share

ಬೆಂಗಳೂರು: ಇಂದು ಕೊಪ್ಪಳದಲ್ಲಿ ದೇಶದ ಮೊದಲ ಆಟಿಕೆ ಕ್ಲಸ್ಟರ್​ ನಿರ್ಮಾಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಿದ್ದಾರೆ. ಈ ಬೆನ್ನಲ್ಲೇ ಸರಣಿ ಟ್ವೀಟ್​ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಆಟಿಕೆ ಕ್ಲಸ್ಟರ್​ಗೆ ನನ್ನ ಸರ್ಕಾರದ ಅವಧಿಯಲ್ಲಿ 500 ಕೋಟಿ ರೂ. ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕು ಎಂಬ ಉದ್ದೇಶದಿಂದ ನಾನು ಮುಖ್ಯಮಂತ್ರಿಯಾಗಿದ್ದಾಗ ‘Compete With China’ ರೂಪಿಸಿದ್ದೆ. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!. ನನ್ನ ಸರ್ಕಾರದ ಅವಧಿಯಲ್ಲಿ ಇಂಥ ಹಲವು ಕಾರ್ಯಕ್ರಮಗಳನ್ನು ಕೊಡಲಾಗಿದೆ. ಅವುಗಳಲ್ಲಿ ಈ ನೆಲದ ಸ್ವಾಭಿಮಾನ ಸಾರುವ ಯೋಜನೆಗಳೂ ಇವೆ ಎಂಬುದು ಗಮನಾರ್ಹ. ಅವುಗಳನ್ನು ಮರಳಿ ಜಾರಿಗೆ ತರುವುದರ ಕಡೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿಂತನೆ ನಡೆಸುವುದು ಅತ್ಯಗತ್ಯ. ನನ್ನ ಯೋಜನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ, ಆದಾಯ ಸಿಗುವ ಅಂಶಗಳೇ ಪ್ರಧಾನವಾಗಿವೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆ ಅಡಿಯಲ್ಲಿ ಆಟಿಕೆ ಉತ್ಪಾದನಾ ಘಟಕ ಆರಂಭಿಸುತ್ತಿರುವುದಾಗಿ ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ, ಕೇಂದ್ರ ಸರ್ಕಾರ ‘ಆತ್ಮನಿರ್ಭರ’ ಕಲ್ಪನೆ ಜಾರಿಗೆ ತರುವುದಕ್ಕೂ ಮೊದಲೇ ನನ್ನ ಸರ್ಕಾರ ಸ್ವಾವಲಂಬಿ ಕಲ್ಪನೆಯನ್ನು ಹೊಂದಿತ್ತು. ಅದರ ಭಾಗವಾಗಿಯೇ ಚೀನಾಕ್ಕೆ ಸೆಡ್ಡು ಹೊಡೆಯುವ ಯೋಜನೆಗಳನ್ನು ರೂಪಿಸಿತ್ತು. 7 ಲಕ್ಷ ಕೋಟಿ ಮೊತ್ತದ ಜಾಗತಿಕ ಆಟಿಕೆ ಮಾರುಕಟ್ಟೆಯಲ್ಲಿ ಚೀನಾ ಪ್ರಬಲ ಹಿಡಿತ ಹೊಂದಿದೆ. ಇದರಲ್ಲಿ ಅಲ್ಪ ಪಾಲು ಕಸಿದರೂ ನಮ್ಮವರಿಗೆ ಉದ್ಯೋಗ ನೀಡಬಹುದು. ಆದಾಯ ಕೊಡಿಸಬಹುದು ಎಂಬುದು ನನ್ನ ಸರ್ಕಾರದ ದೂರದೃಷ್ಟಿಯಾಗಿತ್ತು. ಅದಕ್ಕೆ ಮರು ಚಾಲನೆ ನೀಡುತ್ತಿರುವ, ನನ್ನ ಯೋಜನೆಯನ್ನು ಅನುಸರಿಸುತ್ತಿರುವ ಯಡಿಯೂರಪ್ಪ ಅವರಿಗೆ ಆಭಿನಂದನೆಗಳು ಎಂದಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?