AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಗುರುತಿಸಿದರೆ ಸಾಲದು, ಅವರಿಗೂ ಪರಿಹಾರ ನೀಡಬೇಕು: ಸಿಎಂಗೆ ಮಾಜಿ ಸಿಎಂ ಪತ್ರ

ಕರ್ನಾಟಕದಲ್ಲಿ ಸೇರಿ ಬಹುತೇಕ ರಾಜ್ಯಗಳಲ್ಲಿ ಹಲವು ಪತ್ರಕರ್ತರು ಕೊವಿಡ್​ 19 ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಪತ್ರಕರ್ತರನ್ನು ಮುಂಚೂಣಿ ವಾರಿಯರ್ಸ್​ ಎಂದು ಘೋಷಿಸಲಾಗಿದೆ.

ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಗುರುತಿಸಿದರೆ ಸಾಲದು, ಅವರಿಗೂ ಪರಿಹಾರ ನೀಡಬೇಕು: ಸಿಎಂಗೆ ಮಾಜಿ ಸಿಎಂ ಪತ್ರ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
Lakshmi Hegde
|

Updated on: May 12, 2021 | 11:27 PM

Share

ಬೆಂಗಳೂರು: ಮಾಧ್ಯಮದವರನ್ನೂ ಮುಂಚೂಣಿಯಲ್ಲಿರುವ ಕೊವಿಡ್​ 19 ವಾರಿಯರ್ಸ್​ ಎಂದು ಗುರುತಿಸಿ, ಅವರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಪತ್ರ ಬರೆದು, ಮಾಧ್ಯಮದವರನ್ನು ಕೇವಲ ಫ್ರಂಟ್​ಲೈನ್​ ವರ್ಕರ್ಸ್​​ ಎಂದು ಗುರುತಿಸಿದರೆ ಸಾಲದು, ಅವರಿಗೆ ಪರಿಹಾರವನ್ನೂ ನೀಡಬೇಕು ಎಂದು ಒತ್ತಾಯಿಸಿದ್ದರು.

ಉಳಿದ ಮುಂಚೂಣಿ ಕೊವಿಡ್ ವಾರಿಯರ್ಸ್​ಗೆ ಸಿಗುವ ಎಲ್ಲ ಸೌಲಭ್ಯಗಳೂ ಮಾಧ್ಯಮದವರಿಗೂ ಸಿಗುವಂತಾಗಬೇಕು ಎಂದು ಸಿದ್ದರಾಮಯ್ಯನವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಮಾಧ್ಯಮದವರು ಮೃತಪಟ್ಟರೆ ಪರಿಹಾರ ಕಲ್ಪಿಸಿ. ಅವರ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವಂತಾಗಲಿ ಎಂಬ ವಿಚಾರವನ್ನೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ಸೇರಿ ಬಹುತೇಕ ರಾಜ್ಯಗಳಲ್ಲಿ ಹಲವು ಪತ್ರಕರ್ತರು ಕೊವಿಡ್​ 19 ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಪತ್ರಕರ್ತರನ್ನು ಮುಂಚೂಣಿ ವಾರಿಯರ್ಸ್​ ಎಂದು ಘೋಷಿಸಿ, ಆರ್ಥಿಕ ನೆರವು ನೀಡುವುದಾಗಿಯೂ ಅಲ್ಲಿನ ಸರ್ಕಾರ ಪ್ರಕಟಿಸಿದೆ.

ಇದನ್ನೂ ಓದಿ: ದೇಶದಲ್ಲಿ ತೀವ್ರವಾಗುತ್ತಿದೆ ಕೊವಿಡ್​ 19; ಇಂದು ಮತ್ತೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ

Follow Us
Lakshmi Hegde
Lakshmi Hegde
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ