AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal activist: ಭಜರಂಗದಳ ಕಾರ್ಯಕರ್ತ ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್​ವೈ ಭೇಟಿ; 25 ಲಕ್ಷ ರೂ. ಪರಿಹಾರ

ಜಿಲ್ಲೆಯ ಬಿಜೆಪಿ ಕಚೇರಿಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ ನೀಡಿದ್ದು, ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆ ತಾಲೀಮು ಆರಂಭಿಸಿದ ಬಿಎಸ್ ವೈ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದಿದ್ದಾರೆ.

Bajrang Dal activist: ಭಜರಂಗದಳ ಕಾರ್ಯಕರ್ತ ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್​ವೈ ಭೇಟಿ; 25 ಲಕ್ಷ ರೂ. ಪರಿಹಾರ
ಮಾಜಿ ಸಿಎಂ ಬಿಎಸ್​ವೈ ಹರ್ಷಾಗೆ ಶ್ರದ್ಧಾಂಜಲಿ ಸಲ್ಲಿಸಿದರು.
TV9 Web
| Edited By: |

Updated on:Mar 06, 2022 | 12:58 PM

Share

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷಾ ( Bajrang Dal activist Harsha) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್ ವೈ, ಸಚಿವ ಕೆ. ಎಸ್. ಈಶ್ವರಪ್ಪ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ 25 ಲಕ್ಷ ರೂಪಾಯಿ ಚೆಕ್ ಪರಿಹಾರವನ್ನು ಕುಟುಂಬಕ್ಕೆ ನೀಡಿದ್ದಾರೆ. ಭೇಟೆ ಬಳಿಕ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದು, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮಾಡಿದ್ದಾರೆ. ಹರ್ಷ ಹುಲಿಯಂತೆ ಬಾಳಿ ಬದುಕಬೇಕಾಗಿತ್ತು. ಹರ್ಷ ಕೊಲೆ ಆರೋಪಿಗಳಿಗೆ ಮರಣದಂಡನೆ ಆಗಬೇಕಿದೆ. ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಹಿಂದೂ ಯುವ ಮುಖಂಡರನಾಗಿ ಬೆಳೆಯುತ್ತಿದ್ದು, ಇದನ್ನು ಸಹಿಸದೇ ಆತನ ಕೊಲೆ ಮಾಡಿದ್ದಾರೆ. ನಮ್ಮ ಮತ್ತು ಮೋದಿ ಅಪೇಕ್ಷೆ ಎಲ್ಲರೂ ಒಟ್ಟಾಗಿ ಬಾಳಬೇಕು. ಎಲ್ಲರೂ ಶಾಂತಿ ನೆಲೆಸಲು ಗಮನ ಹರಿಸಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಸೇರಿ ಒಟ್ಟಾಗಿ ಬಾಳಬೇಕು. ಇಂತಹ ದುರ್ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದ್ದು, ಎಲ್ಲರೂ ಒಂದೇ ತಾಯಿ ಮಕ್ಕಳ ಅಂತೆ ಬಾಳಬೇಕಾಗಿದೆ ಎಂದು ಹೇಳಿದರು.

ಜಿಲ್ಲೆಯ ಬಿಜೆಪಿ ಕಚೇರಿಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ ನೀಡಿದ್ದು, ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆ ತಾಲೀಮು ಆರಂಭಿಸಿದ ಬಿಎಸ್ ವೈ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಅಕ್ಕಪಕ್ಕ ಜೆಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯಿದೆ. ಭದ್ರಾವತಿ ಸೇರಿ ಎಲ್ಲ ಕ್ಷೇತ್ರ ಶಿವಮೊಗ್ಗ ಜಿಲ್ಲೆಯಲ್ಲಿ ಗೆಲ್ಲುವ ಟಾರ್ಗೇಟ್​ನ್ನು ಬಿಎಸ್​ವೈ ನೀಡಿದ್ದಾರೆ. ಬಿಜೆಪಿಗೆ ಭದ್ರಾವತಿ ಕ್ಷೇತ್ರ ಗೆಲ್ಲಲು ಸಾಧ್ಯ ಆಗಿಲ್ಲ. ಈ ಚುನಾವಣೆಯಲ್ಲಿ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಗೆಲ್ಲಬೇಕು. ಕಾಂಗ್ರೆಸ್ ಪಕ್ಷ ಈಗಾಗಲೇ ಚುನಾವಣೆ ಗೆದ್ದು ಅಧಿಕಾರಕ್ಕೆ ಬಂದಂತೆ ವರ್ತನೆ ಮಾಡುತ್ತಿದ್ದು, ಹಗಲು ಗನಸು ಕಾಣುತ್ತಿದೆ ಎಂದು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಎಂಎಲ್ ಸಿ ಭಾರತಿ ಶೆಟ್ಟಿ, ಜಿಲ್ಲಾ ಅಧ್ಯಕ್ಷ ಮೇಘರಾಜ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:

ಭಾರತದ ಈ ವಿಚಿತ್ರ ಮಾರುಕಟ್ಟೆಗಳ ಬಗ್ಗೆ ನಿಮಗೆ ಗೊತ್ತಾ..! ಇಲ್ಲಿದೆ ಮಾಹಿತಿ

‘ಹೆಂಗೆ ನಾವು..’ ಅಂತ ಫೇಮಸ್​ ಆದ ರಚನಾ ಇಂದರ್​ಗೆ ಜನ್ಮದಿನ; ಇಲ್ಲಿವೆ ಸುಂದರ ಫೋಟೋಗಳು

Published On - 12:38 pm, Sun, 6 March 22

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ