AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal activist: ಭಜರಂಗದಳ ಕಾರ್ಯಕರ್ತ ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್​ವೈ ಭೇಟಿ; 25 ಲಕ್ಷ ರೂ. ಪರಿಹಾರ

ಜಿಲ್ಲೆಯ ಬಿಜೆಪಿ ಕಚೇರಿಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ ನೀಡಿದ್ದು, ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆ ತಾಲೀಮು ಆರಂಭಿಸಿದ ಬಿಎಸ್ ವೈ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು ಎಂದಿದ್ದಾರೆ.

Bajrang Dal activist: ಭಜರಂಗದಳ ಕಾರ್ಯಕರ್ತ ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್​ವೈ ಭೇಟಿ; 25 ಲಕ್ಷ ರೂ. ಪರಿಹಾರ
ಮಾಜಿ ಸಿಎಂ ಬಿಎಸ್​ವೈ ಹರ್ಷಾಗೆ ಶ್ರದ್ಧಾಂಜಲಿ ಸಲ್ಲಿಸಿದರು.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 06, 2022 | 12:58 PM

Share

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷಾ ( Bajrang Dal activist Harsha) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರ್ಷಾ ಮನೆಗೆ ಮಾಜಿ ಸಿಎಂ ಬಿಎಸ್ ವೈ, ಸಚಿವ ಕೆ. ಎಸ್. ಈಶ್ವರಪ್ಪ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ 25 ಲಕ್ಷ ರೂಪಾಯಿ ಚೆಕ್ ಪರಿಹಾರವನ್ನು ಕುಟುಂಬಕ್ಕೆ ನೀಡಿದ್ದಾರೆ. ಭೇಟೆ ಬಳಿಕ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದು, ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಮಾಡಿದ್ದಾರೆ. ಹರ್ಷ ಹುಲಿಯಂತೆ ಬಾಳಿ ಬದುಕಬೇಕಾಗಿತ್ತು. ಹರ್ಷ ಕೊಲೆ ಆರೋಪಿಗಳಿಗೆ ಮರಣದಂಡನೆ ಆಗಬೇಕಿದೆ. ಹರ್ಷ ಎಲ್ಲರ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ. ಹಿಂದೂ ಯುವ ಮುಖಂಡರನಾಗಿ ಬೆಳೆಯುತ್ತಿದ್ದು, ಇದನ್ನು ಸಹಿಸದೇ ಆತನ ಕೊಲೆ ಮಾಡಿದ್ದಾರೆ. ನಮ್ಮ ಮತ್ತು ಮೋದಿ ಅಪೇಕ್ಷೆ ಎಲ್ಲರೂ ಒಟ್ಟಾಗಿ ಬಾಳಬೇಕು. ಎಲ್ಲರೂ ಶಾಂತಿ ನೆಲೆಸಲು ಗಮನ ಹರಿಸಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ಸೇರಿ ಒಟ್ಟಾಗಿ ಬಾಳಬೇಕು. ಇಂತಹ ದುರ್ಘಟನೆ ಮತ್ತೆ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದ್ದು, ಎಲ್ಲರೂ ಒಂದೇ ತಾಯಿ ಮಕ್ಕಳ ಅಂತೆ ಬಾಳಬೇಕಾಗಿದೆ ಎಂದು ಹೇಳಿದರು.

ಜಿಲ್ಲೆಯ ಬಿಜೆಪಿ ಕಚೇರಿಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ ನೀಡಿದ್ದು, ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆ ತಾಲೀಮು ಆರಂಭಿಸಿದ ಬಿಎಸ್ ವೈ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ಅಕ್ಕಪಕ್ಕ ಜೆಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಪಡೆಯಿದೆ. ಭದ್ರಾವತಿ ಸೇರಿ ಎಲ್ಲ ಕ್ಷೇತ್ರ ಶಿವಮೊಗ್ಗ ಜಿಲ್ಲೆಯಲ್ಲಿ ಗೆಲ್ಲುವ ಟಾರ್ಗೇಟ್​ನ್ನು ಬಿಎಸ್​ವೈ ನೀಡಿದ್ದಾರೆ. ಬಿಜೆಪಿಗೆ ಭದ್ರಾವತಿ ಕ್ಷೇತ್ರ ಗೆಲ್ಲಲು ಸಾಧ್ಯ ಆಗಿಲ್ಲ. ಈ ಚುನಾವಣೆಯಲ್ಲಿ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಗೆಲ್ಲಬೇಕು. ಕಾಂಗ್ರೆಸ್ ಪಕ್ಷ ಈಗಾಗಲೇ ಚುನಾವಣೆ ಗೆದ್ದು ಅಧಿಕಾರಕ್ಕೆ ಬಂದಂತೆ ವರ್ತನೆ ಮಾಡುತ್ತಿದ್ದು, ಹಗಲು ಗನಸು ಕಾಣುತ್ತಿದೆ ಎಂದು ಹೇಳಿದರು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಎಂಎಲ್ ಸಿ ಭಾರತಿ ಶೆಟ್ಟಿ, ಜಿಲ್ಲಾ ಅಧ್ಯಕ್ಷ ಮೇಘರಾಜ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ:

ಭಾರತದ ಈ ವಿಚಿತ್ರ ಮಾರುಕಟ್ಟೆಗಳ ಬಗ್ಗೆ ನಿಮಗೆ ಗೊತ್ತಾ..! ಇಲ್ಲಿದೆ ಮಾಹಿತಿ

‘ಹೆಂಗೆ ನಾವು..’ ಅಂತ ಫೇಮಸ್​ ಆದ ರಚನಾ ಇಂದರ್​ಗೆ ಜನ್ಮದಿನ; ಇಲ್ಲಿವೆ ಸುಂದರ ಫೋಟೋಗಳು

Published On - 12:38 pm, Sun, 6 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ