AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ […]

ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ
ಮಾಜಿ ಸಿಎಂ H.D.ಕುಮಾರಸ್ವಾಮಿ
KUSHAL V
|

Updated on:Oct 03, 2020 | 3:25 PM

Share

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ ದಿನವೇ ಮೂವರಿಗೆ ಅನುಶ್ರೀಯಿಂದ ಕಾಲ್‌: ಯಾರು ಗೊತ್ತಾ ಆ ಪ್ರಭಾವಿಗಳು?

‘ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ’ ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ. ಇದು ಹಳ್ಳ ಹಿಡಿಯುತ್ತೆ ಎಂದು ಹೇಳಿದ್ದೆ. ದಿನಕ್ಕೊಂದು ಕಪೋಲಕಲ್ಪಿತ ವರದಿಗಳು ಬರುತ್ತಿವೆ. ಕೆಲವು ಮಾಧ್ಯಮಗಳು ಅದರದ್ದೇ ಆದ ರೀತಿಯ ವರದಿಗಳನ್ನು ಮಾಡುತ್ತಿವೆ.

ಌಂಕರ್ ​ಅನುಶ್ರೀ ವಿಚಾರದಲ್ಲಿ ಕೂಡಾ ಇಂಥದ್ದೇ ವರದಿಗಳು ಬರ್ತಿವೆ. ಕೆಲವು ಪ್ರಭಾವಿ ರಾಜಕಾರಣಿಗಳ ಕೈವಾಡವಿದೆ. ಆಕೆಯ ಕಾಲ್ ಲಿಸ್ಟ್​ನಲ್ಲಿ ಎರಡು ಬಾರಿ ಸಿಎಂ ಆಗಿದ್ದವರು ಎಂದೆಲ್ಲಾ ವರದಿಗಳು ಬರ್ತಿವೆ ಎಂಬುದನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದರು.

ನಾನು SM ಕೃಷ್ಣ, ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ ಸೇರಿ ಆರು ಜನ ಇದ್ದೇವೆ. ಯಾರು ಆ ಮಾಜಿ ಮುಖ್ಯಮಂತ್ರಿ ಎಂಬ ಹೆಸರನ್ನಾದರೂ ಹೇಳಬೇಕಲ್ಲ? ಯಾರು ಈ ವರದಿ ಕೊಟ್ಟಿದ್ದಾರೋ, ಆ ವರದಿಗಾರರ ಬಳಿ ನಾನು.. ಬೇರೆ ಮೂಲದಿಂದ ತಿಳಿದುಕೊಂಡೆ. ಆತನ ಬಳಿ ಯಾರೋ ಶಿವಪ್ರಕಾಶ್ ಎಂಬ ಅಧಿಕಾರಿ ಮಾತನಾಡಿರುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಸರ್ಕಾರ ಹೊರ ತರಬೇಕು. ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಮಾಧ್ಯಮಗಳಿಗೆ ಮಾಹಿತಿ ಕೊಟ್ಟವರು ಯಾರು? ಜೊತೆಗೆ, ಮಾಜಿ ಸಿಎಂ ಮಗ ಎಂದೂ ವರದಿಗಳು ಬರ್ತಿವೆ. ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಸುಮ್ಮನೆ ಬಿಡಬಾರದು. ನಾನಂತೂ ಇದನ್ನು ತನಿಖೆಗೆ ಒತ್ತಾಯ ಮಾಡುತ್ತೇನೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published On - 2:45 pm, Sat, 3 October 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ