AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ […]

ಅನುಶ್ರೀ ವಿಚಾರದಲ್ಲಿ ಒತ್ತಡ ಹಾಕಿದ ಆ ಮಾಜಿ CM ಯಾರು? ಹೆಸರು ಹೇಳಿ -HDK ಒತ್ತಾಯ
ಮಾಜಿ ಸಿಎಂ H.D.ಕುಮಾರಸ್ವಾಮಿ
KUSHAL V
|

Updated on:Oct 03, 2020 | 3:25 PM

Share

ಬೆಂಗಳೂರು: ಌಂಕರ್​ ಅನುಶ್ರೀ ಪ್ರಕರಣದ ವಿಚಾರವಾಗಿ ಕೇಳಿಬರುತ್ತಿರುವ ಪ್ರಭಾವಿ ನಾಯಕರ ಹೆಸರಲ್ಲಿ ಯಾವ ಮಾಜಿ ಸಿಎಂ ಇದ್ದಾರೆ ಅಂತಾ ಜನರು ತಿಳಿದುಕೊಳ್ಳಬೇಕು ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸರ್ಕಾರಕ್ಕೆ, ಸಿಎಂಗೆ ಮತ್ತು ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳಲ್ಲಿ ಸತ್ಯಾಸತ್ಯತೆ ಏನು ಅನ್ನೋದು ಗೊತ್ತಾಗಬೇಕಿದೆ. ಯಾರು ಮಾಹಿತಿ ಕೊಟ್ಟಿದ್ದಾರೆ? ಯಾರು ಇದ್ದಾರೆ? ಯಾವ ಮಾಜಿ ಸಿಎಂ ಇದ್ದಾರೆ ಅನ್ನೋ ಸತ್ಯ ಗೊತ್ತಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ. CCB ನೋಟಿಸ್ ಬಂದ ದಿನವೇ ಮೂವರಿಗೆ ಅನುಶ್ರೀಯಿಂದ ಕಾಲ್‌: ಯಾರು ಗೊತ್ತಾ ಆ ಪ್ರಭಾವಿಗಳು?

‘ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ’ ಡ್ರಗ್ಸ್ ವಿಚಾರದಲ್ಲಿ ನಾನು ಮೊದಲೇ ಹೇಳಿದ್ದೆ. ಇದು ಹಳ್ಳ ಹಿಡಿಯುತ್ತೆ ಎಂದು ಹೇಳಿದ್ದೆ. ದಿನಕ್ಕೊಂದು ಕಪೋಲಕಲ್ಪಿತ ವರದಿಗಳು ಬರುತ್ತಿವೆ. ಕೆಲವು ಮಾಧ್ಯಮಗಳು ಅದರದ್ದೇ ಆದ ರೀತಿಯ ವರದಿಗಳನ್ನು ಮಾಡುತ್ತಿವೆ.

ಌಂಕರ್ ​ಅನುಶ್ರೀ ವಿಚಾರದಲ್ಲಿ ಕೂಡಾ ಇಂಥದ್ದೇ ವರದಿಗಳು ಬರ್ತಿವೆ. ಕೆಲವು ಪ್ರಭಾವಿ ರಾಜಕಾರಣಿಗಳ ಕೈವಾಡವಿದೆ. ಆಕೆಯ ಕಾಲ್ ಲಿಸ್ಟ್​ನಲ್ಲಿ ಎರಡು ಬಾರಿ ಸಿಎಂ ಆಗಿದ್ದವರು ಎಂದೆಲ್ಲಾ ವರದಿಗಳು ಬರ್ತಿವೆ ಎಂಬುದನ್ನೂ ಕುಮಾರಸ್ವಾಮಿ ಪ್ರಸ್ತಾಪಿಸಿದರು.

ನಾನು SM ಕೃಷ್ಣ, ಜಗದೀಶ್ ಶೆಟ್ಟರ್ ಮತ್ತು ಸಿದ್ದರಾಮಯ್ಯ ಸೇರಿ ಆರು ಜನ ಇದ್ದೇವೆ. ಯಾರು ಆ ಮಾಜಿ ಮುಖ್ಯಮಂತ್ರಿ ಎಂಬ ಹೆಸರನ್ನಾದರೂ ಹೇಳಬೇಕಲ್ಲ? ಯಾರು ಈ ವರದಿ ಕೊಟ್ಟಿದ್ದಾರೋ, ಆ ವರದಿಗಾರರ ಬಳಿ ನಾನು.. ಬೇರೆ ಮೂಲದಿಂದ ತಿಳಿದುಕೊಂಡೆ. ಆತನ ಬಳಿ ಯಾರೋ ಶಿವಪ್ರಕಾಶ್ ಎಂಬ ಅಧಿಕಾರಿ ಮಾತನಾಡಿರುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಸರ್ಕಾರ ಹೊರ ತರಬೇಕು. ಆ ಮಾಜಿ ಮುಖ್ಯಮಂತ್ರಿ ಯಾರು ಎಂಬುದನ್ನು ಮಾಧ್ಯಮಗಳಿಗೆ ಮಾಹಿತಿ ಕೊಟ್ಟವರು ಯಾರು? ಜೊತೆಗೆ, ಮಾಜಿ ಸಿಎಂ ಮಗ ಎಂದೂ ವರದಿಗಳು ಬರ್ತಿವೆ. ಈ ರೀತಿಯ ಕಪೋಲಕಲ್ಪಿತ ವರದಿಗಳನ್ನು ಸುಮ್ಮನೆ ಬಿಡಬಾರದು. ನಾನಂತೂ ಇದನ್ನು ತನಿಖೆಗೆ ಒತ್ತಾಯ ಮಾಡುತ್ತೇನೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Published On - 2:45 pm, Sat, 3 October 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್