AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ

Ugliest Language in India: ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡವನ್ನು ಕೀಳಾಗಿ ಪ್ರತಿಬಿಂಬಿಸಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು, ಕನ್ನಡಿಗರಿಗಾದ ನೋವಿಗೇನು ಪರಿಹಾರ?: ಮಾಜಿ ಸಿಎಂ ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
TV9 Web
| Edited By: |

Updated on:Jun 03, 2021 | 5:51 PM

Share

ಬೆಂಗಳೂರು: ಗೂಗಲ್​ನ ವೆಬ್​ಸೈಟ್ ಒಂದರಲ್ಲಿ ಕನ್ನಡವನ್ನು ಕೀಳಾಗಿ ಬಿಂಬಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ @Google ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ( Ugliest Language in India) ವೆಬ್‌ಪುಟ ಡಿಲೀಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಅವರು ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.

ಭಾಷೆ ವಿಚಾರದಲ್ಲಿ @GoogleIndia @Google ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕನ್ನಡವನ್ನು ಕೀಳಾಗಿ ಪ್ರತಿಬಿಂಬಿಸಿದ ಕ್ರಮವನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಕನ್ನಡವನ್ನು ಕೀಳಾಗಿ ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ

Queen of all Languages ಎಂದು ಗೂಗಲ್​ ಸರ್ಚ್​ ಮಾಡಿದರೆ ಉತ್ತರವೇನು ಗೊತ್ತಾ?

(Former CM Kumaraswamy reacts on Ugliest Language in India is Kannada used by Google)

Published On - 5:51 pm, Thu, 3 June 21

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!