AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​

ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ' ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 30, 2023 | 1:54 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ’ ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಹೌದು ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಕೂಡ ಮಾಡಲಾಗಿದೆ. ವಿಜಯ ಸೇತುಪತಿ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರವನ್ನ ಸತ್ಯರತ್ನ ಅವರು ನಿರ್ದೇಶಿಸಲಿದ್ದಾರೆ. ಜೊತೆಗೆ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

20 ಕೋಟಿ ಬಜೆಟ್​ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಸಿದ್ದರಾಮಯ್ಯ ಹುಂಡಿಯಲ್ಲಿ ಜನಿಸಿದ ಸಿದ್ದರಾಮಯ್ಯನವರ ಜೀವನ ತುಂಬಾ ಸ್ವಾರಸ್ಯಕರವಾಗಿದೆ. ಹೌದು ಸಿದ್ದರಾಮಯ್ಯನವರು ಮೊದಲು ಜೆಡಿಎಸ್​ ಪಕ್ಷದಿಂದ ಮೇಲೆದ್ದು, ಬಳಿಕ ಹಣಕಾಸು ಮಂತ್ರಿಯಾಗಿ, ಅತೀ ಹೆಚ್ಚು ಬಜೆಟ್​ ಮಂಡನೆ ಮಾಡಿದ ಮುಖ್ಯಮಂತ್ರಿಯಾಗಿ ಇನ್ನು ಅನೇಕ ವಿಶೇಷತೆಗಳನ್ನ ಸಿದ್ದರಾಮಯ್ಯನವರು ಬದುಕಿನಲ್ಲಿ ನಡೆದಿದೆ. ಇದೀಗ ಇದನ್ನೇ ಇಟ್ಟುಕೊಂಡು ಬರೊಬ್ಬರಿ 20 ಕೋಟಿ ವೆಚ್ಚದಲ್ಲಿ ಸಿನಿಮಾ ಮಾಡಲು ಹೊರಟ್ಟಿದ್ದಾರೆ.

ಇದನ್ನೂ ಓದಿ:Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

ಸಿನಿಮಾ ಕುರಿತು ಸಿದ್ದರಾಮಯ್ಯ ಮಾತು

ಸಿನಿಮಾ ಕುರಿತು ಸಿದ್ದರಾಮಯ್ಯನವರ ನಿವಾಸದಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ಸಿದ್ದರಾಮಯ್ಯನವರು ಚುನಾವಣಾ ಸಮಯದಲ್ಲಿ ಇವೆಲ್ಲಾ ಬೇಕಾ ಎಂದು ಪ್ರಶ್ನೇ ಮಾಡಿದ್ದರು. ಸುಮ್ಮನೆ 20 ಕೋಟಿಯನ್ನ ಯಾಕೆ ಹಾಳು ಮಾಡುತ್ತೀರಿ? ಸಿನಿಮಾ ಬೇಡವೆಂದು ಹೇಳಿದ್ದರಂತೆ. ಆದರೆ ಸಿದ್ದರಾಮಯ್ಯ ಬೆಂಬಲಿಗರು ನಿಮ್ಮ ಜೀವನವನ್ನ ತೆರೆಯ ಮೇಲೆ ತೋರಿಸುವುದರಿಂದ ಪಕ್ಷಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ, ಒಪ್ಪಿಕೊಳ್ಳಿ ಎಂದು ಮನವಿ ಮಾಡಿದ್ದರಂತೆ. ಬಳಿಕ ಈ ಕುರಿತು ಯೋಚನೆ ಮಾಡುತ್ತೇನೆ ಎಂದಿದ್ದು, ಇದೀಗ ಸ್ಕ್ರೀಪ್ಟ್​ ರೆಡಿ ಮಾಡಿಕೊಂಡು ಸಿದ್ದರಾಮಯ್ಯನವರಿಗೆ ತೋರಿಸಲು ರೆಡಿಯಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್