AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​

ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ' ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 1:54 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ’ ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಹೌದು ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಕೂಡ ಮಾಡಲಾಗಿದೆ. ವಿಜಯ ಸೇತುಪತಿ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರವನ್ನ ಸತ್ಯರತ್ನ ಅವರು ನಿರ್ದೇಶಿಸಲಿದ್ದಾರೆ. ಜೊತೆಗೆ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

20 ಕೋಟಿ ಬಜೆಟ್​ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಸಿದ್ದರಾಮಯ್ಯ ಹುಂಡಿಯಲ್ಲಿ ಜನಿಸಿದ ಸಿದ್ದರಾಮಯ್ಯನವರ ಜೀವನ ತುಂಬಾ ಸ್ವಾರಸ್ಯಕರವಾಗಿದೆ. ಹೌದು ಸಿದ್ದರಾಮಯ್ಯನವರು ಮೊದಲು ಜೆಡಿಎಸ್​ ಪಕ್ಷದಿಂದ ಮೇಲೆದ್ದು, ಬಳಿಕ ಹಣಕಾಸು ಮಂತ್ರಿಯಾಗಿ, ಅತೀ ಹೆಚ್ಚು ಬಜೆಟ್​ ಮಂಡನೆ ಮಾಡಿದ ಮುಖ್ಯಮಂತ್ರಿಯಾಗಿ ಇನ್ನು ಅನೇಕ ವಿಶೇಷತೆಗಳನ್ನ ಸಿದ್ದರಾಮಯ್ಯನವರು ಬದುಕಿನಲ್ಲಿ ನಡೆದಿದೆ. ಇದೀಗ ಇದನ್ನೇ ಇಟ್ಟುಕೊಂಡು ಬರೊಬ್ಬರಿ 20 ಕೋಟಿ ವೆಚ್ಚದಲ್ಲಿ ಸಿನಿಮಾ ಮಾಡಲು ಹೊರಟ್ಟಿದ್ದಾರೆ.

ಇದನ್ನೂ ಓದಿ:Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

ಸಿನಿಮಾ ಕುರಿತು ಸಿದ್ದರಾಮಯ್ಯ ಮಾತು

ಸಿನಿಮಾ ಕುರಿತು ಸಿದ್ದರಾಮಯ್ಯನವರ ನಿವಾಸದಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ಸಿದ್ದರಾಮಯ್ಯನವರು ಚುನಾವಣಾ ಸಮಯದಲ್ಲಿ ಇವೆಲ್ಲಾ ಬೇಕಾ ಎಂದು ಪ್ರಶ್ನೇ ಮಾಡಿದ್ದರು. ಸುಮ್ಮನೆ 20 ಕೋಟಿಯನ್ನ ಯಾಕೆ ಹಾಳು ಮಾಡುತ್ತೀರಿ? ಸಿನಿಮಾ ಬೇಡವೆಂದು ಹೇಳಿದ್ದರಂತೆ. ಆದರೆ ಸಿದ್ದರಾಮಯ್ಯ ಬೆಂಬಲಿಗರು ನಿಮ್ಮ ಜೀವನವನ್ನ ತೆರೆಯ ಮೇಲೆ ತೋರಿಸುವುದರಿಂದ ಪಕ್ಷಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ, ಒಪ್ಪಿಕೊಳ್ಳಿ ಎಂದು ಮನವಿ ಮಾಡಿದ್ದರಂತೆ. ಬಳಿಕ ಈ ಕುರಿತು ಯೋಚನೆ ಮಾಡುತ್ತೇನೆ ಎಂದಿದ್ದು, ಇದೀಗ ಸ್ಕ್ರೀಪ್ಟ್​ ರೆಡಿ ಮಾಡಿಕೊಂಡು ಸಿದ್ದರಾಮಯ್ಯನವರಿಗೆ ತೋರಿಸಲು ರೆಡಿಯಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ