AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​

ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ' ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಜೀವಾನಾಧಾರಿತ ಚಿತ್ರ: ಸಿನಿಮಾದ ಮೊದಲ ಪೋಸ್ಟರ್ ರಿಲೀಸ್​
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿರಣ್ ಹನುಮಂತ್​ ಮಾದಾರ್
|

Updated on: Mar 30, 2023 | 1:54 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಕಾವೇರಿದ್ದು, ನಿನ್ನೆ(ಮಾ.29) ತಾನೇ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೆ ಇದೀಗ ‘ಲೀಡರ್ ರಾಮಯ್ಯ’ ಹೆಸರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರ ಜೀವಾನಾಧಾರಿತ ಚಿತ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಹೌದು ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್​ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಕೂಡ ಮಾಡಲಾಗಿದೆ. ವಿಜಯ ಸೇತುಪತಿ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರವನ್ನ ಸತ್ಯರತ್ನ ಅವರು ನಿರ್ದೇಶಿಸಲಿದ್ದಾರೆ. ಜೊತೆಗೆ ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನು ಲೀಡರ್ ರಾಮಯ್ಯ ಸಿನಿಮಾವು ಆಗಸ್ಟ್​​ ತಿಂಗಳಲ್ಲಿ ತೆರೆ ಮೇಲೆ ಬರಲಿದೆ.

20 ಕೋಟಿ ಬಜೆಟ್​ ವೆಚ್ಚದಲ್ಲಿ ಸಿನಿಮಾ ನಿರ್ಮಾಣ

ಸಿದ್ದರಾಮಯ್ಯ ಹುಂಡಿಯಲ್ಲಿ ಜನಿಸಿದ ಸಿದ್ದರಾಮಯ್ಯನವರ ಜೀವನ ತುಂಬಾ ಸ್ವಾರಸ್ಯಕರವಾಗಿದೆ. ಹೌದು ಸಿದ್ದರಾಮಯ್ಯನವರು ಮೊದಲು ಜೆಡಿಎಸ್​ ಪಕ್ಷದಿಂದ ಮೇಲೆದ್ದು, ಬಳಿಕ ಹಣಕಾಸು ಮಂತ್ರಿಯಾಗಿ, ಅತೀ ಹೆಚ್ಚು ಬಜೆಟ್​ ಮಂಡನೆ ಮಾಡಿದ ಮುಖ್ಯಮಂತ್ರಿಯಾಗಿ ಇನ್ನು ಅನೇಕ ವಿಶೇಷತೆಗಳನ್ನ ಸಿದ್ದರಾಮಯ್ಯನವರು ಬದುಕಿನಲ್ಲಿ ನಡೆದಿದೆ. ಇದೀಗ ಇದನ್ನೇ ಇಟ್ಟುಕೊಂಡು ಬರೊಬ್ಬರಿ 20 ಕೋಟಿ ವೆಚ್ಚದಲ್ಲಿ ಸಿನಿಮಾ ಮಾಡಲು ಹೊರಟ್ಟಿದ್ದಾರೆ.

ಇದನ್ನೂ ಓದಿ:Siddaramaiah: ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘಿಸಿದರೇ ಸಿದ್ದರಾಮಯ್ಯ?

ಸಿನಿಮಾ ಕುರಿತು ಸಿದ್ದರಾಮಯ್ಯ ಮಾತು

ಸಿನಿಮಾ ಕುರಿತು ಸಿದ್ದರಾಮಯ್ಯನವರ ನಿವಾಸದಲ್ಲಿ ಮಾತುಕತೆ ನಡೆದಿತ್ತು. ಈ ವೇಳೆ ಸಿದ್ದರಾಮಯ್ಯನವರು ಚುನಾವಣಾ ಸಮಯದಲ್ಲಿ ಇವೆಲ್ಲಾ ಬೇಕಾ ಎಂದು ಪ್ರಶ್ನೇ ಮಾಡಿದ್ದರು. ಸುಮ್ಮನೆ 20 ಕೋಟಿಯನ್ನ ಯಾಕೆ ಹಾಳು ಮಾಡುತ್ತೀರಿ? ಸಿನಿಮಾ ಬೇಡವೆಂದು ಹೇಳಿದ್ದರಂತೆ. ಆದರೆ ಸಿದ್ದರಾಮಯ್ಯ ಬೆಂಬಲಿಗರು ನಿಮ್ಮ ಜೀವನವನ್ನ ತೆರೆಯ ಮೇಲೆ ತೋರಿಸುವುದರಿಂದ ಪಕ್ಷಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ, ಒಪ್ಪಿಕೊಳ್ಳಿ ಎಂದು ಮನವಿ ಮಾಡಿದ್ದರಂತೆ. ಬಳಿಕ ಈ ಕುರಿತು ಯೋಚನೆ ಮಾಡುತ್ತೇನೆ ಎಂದಿದ್ದು, ಇದೀಗ ಸ್ಕ್ರೀಪ್ಟ್​ ರೆಡಿ ಮಾಡಿಕೊಂಡು ಸಿದ್ದರಾಮಯ್ಯನವರಿಗೆ ತೋರಿಸಲು ರೆಡಿಯಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ