ಡಿಕೆಶಿ ಸಿಬಿಐ ತನಿಖೆ ವಾಪಸ್: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದ ಅಶ್ವತ್ಥ್‌ ನಾರಾಯಣ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ಸಿದ್ದರಾಮಯ್ಯ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ, ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕುತ್ತಿದೆ. ಸಂಪುಟದ ನಿರ್ಧಾರವನ್ನು ಟೀಕಿಸಿದ ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ, ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದಿದ್ದಾರೆ.

ಡಿಕೆಶಿ ಸಿಬಿಐ ತನಿಖೆ ವಾಪಸ್: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದ ಅಶ್ವತ್ಥ್‌ ನಾರಾಯಣ
ಬೆಂಗಳೂರು ಕಂಬಳದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ
Edited By: Rakesh Nayak Manchi

Updated on: Nov 25, 2023 | 7:23 PM

ಬೆಂಗಳೂರು, ನ.25: ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ಥ ನಾರಾಯಣ (CN Ashwath Narayan) ಹೇಳಿದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಪ್ರಸ್ತಾವನೆಗೆ ಸಿದ್ದರಾಮಯ್ಯ ಸಂಪುಟ ಅನುಮೋದನೆ ನೀಡಿದ್ದನ್ನು ಅಶ್ವತ್ಥನಾರಾಯಣ ಟೀಕಿಸುತ್ತಾ ಈ ಹೇಳಿಕೆ ನೀಡಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡುವಾಗ ನಿಯಮ ಉಲ್ಲಂಘಿಸಿಲ್ಲ. ಬಿಜೆಪಿ ಸರ್ಕಾರದಿಂದ ಯಾವುದೇ ರೀತಿ ಕಾನೂನು ಉಲ್ಲಂಘನೆ ಆಗಿಲ್ಲ. ಆ ರೀತಿ ಏನಾದರು ಆಗಿದ್ದರೆ ಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಬೇಕಿತ್ತು. ಏಕೆ ನ್ಯಾಯಾಲಯಕ್ಕೆ ಹೋಗಿಲ್ಲ? ಈ ವಿಚಾರದಲ್ಲಿ ಕಾಂಗ್ರೆಸ್ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುವಂತೆ ವರ್ತಿಸುತ್ತಿದೆ ಎಂದರು.

ಇದನ್ನೂ ಓದಿ: ಸಿಬಿಐ ತನಿಖೆಯಿಂದ ಪಾರಾಗಲು ಡಿಕೆ ಶಿವಕುಮಾರ್​ಗಿದೆ ಸವಾಲು, ಸಿಬಿಐ ಮುಂದಿನ ದಾರಿ ಏನು?

ನಾವು ಅಧಿಕಾರದಲ್ಲಿದ್ದಾಗ ಎಲ್ಲವೂ ಕಾನೂನು ಪ್ರಕಾರ ಮಾಡಿದ್ದೇವೆ. ನಿಯಮ ಉಲ್ಲಂಘಿಸಿದ್ದರೆ ಕೋರ್ಟ್‌ ಐದೇ ನಿಮಿಷದಲ್ಲಿ ತಿರಸ್ಕರಿಸುತ್ತಿತ್ತು. ಈ ಹಿಂದೆಯೂ ಬೇರೆಬೇರೆ ಸರ್ಕಾರಗಳು ಹಿಂಪಡೆಯಲು ಯತ್ನಿಸಿ ವಿಫಲವಾಗಿವೆ. ಹಾಗಾಗಿ ಈ ವಿಚಾರದಲ್ಲೂ ಸಿಬಿಐ ತನಿಖೆಯೇ ಮುಂದುವರಿಯುತ್ತದೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದರು.

ಆದಾಯಕ್ಕಿಂತ ಹೆಚ್ಚು ಆಸ್ತಿ ಎಲ್ಲಿಂದ ಗಳಿಕೆಯಾಗಿದೆ? ಎಲ್ಲಿಂದ ಬಂತು? ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಇದಕ್ಕೆ ಉತ್ತರ ಕೊಡಬೇಕು. ಏಕೆ ಹೆದರಿಕೊಳ್ಳುತ್ತಿದ್ದೀರಿ? ಏಕೆ ಓಡಿ ಹೋಗುತ್ತಿದ್ದೀರೆಂದು ಡಿಕೆ ಶಿವಕುಮಾರ್ ಅವರನ್ನು ಕೇಳಿದ ಅಶ್ವತ್ಥ ನಾರಾಯಣ, ಬೀಸೋ ದೊಣ್ಣೆ ತಪ್ಪಿಸಿಕೊಂಡರೆ ನೂರು ವರ್ಷ ಆಯಸ್ಸು ಅನ್ನೋ ರೀತಿಯಲ್ಲಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೀರಿ, ಇದು ಸರಿಯಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರೀ ಭ್ರಷ್ಟಾಚಾರದಲ್ಲೇ ತೊಡಗಿದೆ. ಹಾಗಾಗಿ ಈ ಕೇಸನ್ನೂ ಸಿಬಿಐ ತನಿಖೆಯಿಂದ ಹಿಂಪಡೆಯಲು ಮುಂದಾಗಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Sat, 25 November 23

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us