AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದ್ದು, ಈ ವರದಿಯಲ್ಲೂ ಸಹ ಸಿಎಂ ಸಿದ್ದರಾಮಯ್ಯನವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗಾದ್ರೆ, ವರದಿಯಲ್ಲೇನಿದೆ ಎನ್ನುವುದನ್ನು ತಿಳಿಯಿರಿ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್,ವರದಿಯಲ್ಲೇನಿದೆ?
Muda Scam
ಹರೀಶ್ ಜಿ.ಆರ್​.
| Edited By: |

Updated on: Jul 31, 2025 | 7:06 PM

Share

ಬೆಂಗಳೂರು.ಮೈಸೂರು, (ಜುಲೈ 31): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದಲ್ಲಿ (MUDA Scam Case) ಸಿಎಂ ಸಿದ್ದರಾಮಯ್ಯ (Siddaramaiah) ಕುಟುಂಬಕ್ಕೆ ಮಹತ್ವದ ರಿಲೀಫ್ ಸಿಕ್ಕಿದೆ. ನಿವೃತ್ತ ನ್ಯಾಯಾಧೀಶ ದೇಸಾಯಿ (judge P. N. Desai) ಕಮಿಟಿ ನೀಡಿದ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಲಾಗಿದ್ದು, ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ ಬೆನ್ನಲ್ಲೇ ಈಗ ನ್ಯಾ. ದೇಸಾಯಿ ಕಮಿಟಿ ಕೂಡ ಕ್ಲೀನ್ ಚಿಟ್ ನೀಡಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಇಂದು (ಜುಲೈ 31) ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ನೀಡಿದ್ದಾರೆ. ಇನ್ನು ಸಲ್ಲಿಸಿರುವ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ, ‘ಇಂತಹದ್ದೇ ಜಾಗದಲ್ಲಿ ಪರ್ಯಾಯ ನಿವೇಶನ ಕೊಡಿ’ ಎಂಬ ಅರ್ಜಿ ಪ್ರಸ್ತಾಪ ಮಾಡಿಲ್ಲ. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ನಿವೃತ್ತ ನ್ಯಾ. ದೇಸಾಯಿ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಕ್ಕಿರುವುದು ಮಹತ್ವದ ಬೆಳವಣಿಗೆಯಾಗಿದೆ.

ಇದನ್ನೂ ಓದಿ
Image
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
Image
ಮುಡಾ ಹರಗಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಕೋರ್ಟ್ ಮಹತ್ವದ ಸೂಚನೆ
Image
ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ಸಿಎಂಗೆ ಟೆನ್ಷನ್​ ಟೆನ್ಷನ್​
Image
ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ

ಅಕ್ರಮವಾಗಿ ನಿವೇಶನ ಪಡೆದಿದ್ದಾರೆಂದು ಮೊದಲು ಎಚ್. ವಿಶ್ವನಾಥ್ ಸಿಎಂ ವಿರುದ್ಧ ಆರೋಪ ಮಾಡಿದ್ದರು. ಬಳಿಕ ಸ್ನೇಹಮಯಿ ಕೃಷ್ಣ ಕಾನೂನು ಹೋರಾಟ ನಡೆಸಿದ್ದು, ನ್ಯಾಯಾಲಯದ ಮೊರೆ ಹೋಗಿದ್ದರು. ಇದನ್ನು ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ಅಸ್ತ್ರ ಮಾಡಿಕೊಂಡಿದ್ದವು. ವಿಪಕ್ಷಗಳ ಎಂಟ್ರಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೇಸಾಯಿ ಕಮಿಟಿ ರಚಿಸಿದ್ದರು. ಅಲ್ಲದೇ 14 ನಿವೇಶನ ವಾಪಸು ಮಾಡಿ, ಕ್ಲೀನ್ ಚಿಟ್ ಸಿಕ್ಕರೆ ವಾಪಸು ಕೊಡಲಿ ಎಂದಿದ್ದರು.

ಕಳೆದ ವಾರ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಈಗ ದೇಸಾಯಿ ಕಮಿಟಿಯಿಂದಲೂ ಕ್ಲೀನ್ ಚಿಟ್ ಸಿಕ್ಕಂತಾಗಿದೆ ಇದರಿಂದ ಸಿಎಂ ಮತ್ತಷ್ಟು ಬಲ ಬಂದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ