ನಿವೃತ್ತ ಡಿಜಿ,ಐಜಿಪಿ ಓಂಪ್ರಕಾಶ್ ಹತ್ಯೆಗೆ ಕಾರಣ ಬಹಿರಂಗ: ತನಿಖೆಯಲ್ಲಿ ಸಿಕ್ಕ 9 ಕಾರಣಗಳು
Former Karnataka DGP Om Prakash murder case: ಕರ್ನಾಟಕದ ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆಗೆ ಸ್ಫೋಟಕ ಕಾರಣ ಬಯಲಾಗಿದೆ.ಪತ್ನಿ ಪಲ್ಲವಿಯೇ ಪತಿ ಓಂಪ್ರಕಾಶ್ ಅವರನ್ನು ಕ್ರೂರವಾಗಿ ಕೊಂದಿರುವುದಕ್ಕೆ ಸಿಸಿಬಿ ತನಿಖೆಯಲ್ಲಿಸ್ಫೋಟಕ ಕಾರಣಗಳು ಬಯಲಾಗಿವೆ. ಕೊಲೆಗೆ ಒಟ್ಟು 9 ಕಾರಣಗಳು ಪತ್ತೆಯಾಗಿವೆ. ಹಾಗಾದ್ರೆ, ಕೊಲೆ ಕಾರಣಗಳೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು, ಮೇ 25): ನಿವೃತ್ತ ಡಿಜಿ, ಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣದ (Former Karnataka DGP Om Prakash murder case) ತನಿಖೆ ಬಹುತೇಕ ಕೊನೆ ಹಂತ ತಲುಪಿದ್ದು, ತನಿಖೆ ವೇಳೆ ಕೊಲೆಗೆ ಪ್ರಮುಖ ಕಾರಣಗಳನ್ನು ಪತ್ತೆ ಹಚ್ಚಿದೆ. ಕುಟುಂಬದ ಬಗ್ಗೆ ತೋರಿದ ನಿರ್ಲಕ್ಷ್ಯ, ತನ್ನ ಸ್ವಂತ ಕುಟುಂಬಕ್ಕಿಂತಲೂ ತಂಗಿ ಕುಟುಂಬಕ್ಕೆ ಓಂಪ್ರಕಾಶ್ ಹೆಚ್ಚು ಒತ್ತು ಕೊಡುತ್ತಿದ್ದರಂತೆ, ಮಗಳಿಗೆ ಮದುವೆ ಮಾಡ್ತಿಲ್ಲ. ಹೀಗೆ ಸಿಸಿಬಿ ಮಾಡಿದ ತನಿಖೆ ವೇಳೆ ಓಂಪ್ರಕಾಶ್ ಕೊಲೆಗೆ ಹಲವು ಕಾರಣಗಳು ಬಹಿರಂಗವಾಗಿದೆ. ಕೌಟುಂಬಿಕ ಕಾರಣಗಳಿಂದ ಪತಿ ಓಂಪ್ರಕಾಶ್ ಅವರನ್ನ ಪತ್ನಿ ಪಲ್ಲವಿ ಕ್ರೂರವಾಗಿ ಕೊಂದಿದ್ದಾರೆ.ಈ ಸಂಬಂಧ ಸಿಸಿಬಿ ತನಿಖೆ ವೇಳೆ ಸಿಕ್ಕ 9 ಕಾರಣಗಳು ಈ ಕೆಳಗಿನಂತಿವೆ.
ಓಂಪ್ರಕಾಶ್ ಕೊಲೆಗೆ ಕಾರಣಗಳೇನು?
ಇನ್ನು ಓಂಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಸಿಸಿಬಿ ತನಿಖೆ ನಡೆಸಿದ್ದು, ಈ ವೇಳೆ ಪತ್ನಿ ಪಲ್ಲವಿ ಪತಿ ಓಂಪ್ರಕಾಶ್ ಅವರನ್ನು ಏಕೆ ಕ್ರೂವರಾಗಿ ಕೊಲೆ ಮಾಡಿದ್ದಾರೆ? ಇದಕ್ಕೆ ಕಾರಣವೇನು ಎನ್ನುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಒಟ್ಟು 9 ಕಾರಣಗಳು ಸಿಕ್ಕಿವೆ.
ಇದನ್ನೂ ಓದಿ: ಓಂ ಪ್ರಕಾಶ್ ಕೊಲೆ ಪ್ರಕರಣದ ದಾಖಲೆ ಸಿಸಿಬಿಗೆ ಹಸ್ತಾಂತರ: ಕೃತಿ ವಿಚಾರಣೆಗೆ ಒಳಪಡಿಸಲು ಫಿಟ್ ಎಂದ ನಿಮ್ಹಾನ್ಸ್ ವೈದ್ಯರು
- ತನ್ನ ಬಗ್ಗೆ ವೈಯುಕ್ತಿಕವಾಗಿ ಗಮನ ಹರಿಸಿಲ್ಲ ಎಂದು ಆರೋಪಿಸಿರುವ ಪಲ್ಲವಿ.
- ಮಗಳಿಗೆ ಮದುವೆ ಮಾಡಿಲ್ಲ ಎಂದು ಕೋಪ.
- ತನ್ನ ಭಾಗದ ಕುಟುಂಬದ ಬಗ್ಗೆ ಹೆಚ್ಚು ಗಮನವಹಿಸ್ತಿದ್ದ ಓಂ ಪ್ರಕಾಶ್
- ಮನೆ ಸಮಸ್ಯೆಗಳಾದಾಗ ನೇರವಾಗಿ ಸಹೋದರಿ ಮನೆಗೆ ತೆರಳ್ತಿದ್ದರು.
- ಐಶಾರಮಿ ಮನೆಯಲ್ಲಿದ್ರು ಮಗಳ ಕೈಗೆ ಖರ್ಚಿಗೆ ಹಣ ಕೊಡುತ್ತಿರಲಿಲ್ಲ.
- ಸಂಪೂರ್ಣ ಹಣದ ವ್ಯವಹಾರವನ್ಮ ಓಂ ಪ್ರಕಾಶ್ ಒಬ್ಬರೇ ನೋಡಿಕೊಳ್ಳುತ್ತಿದ್ರು.
- ಈ ಹಿಂದೆ ಕೆಲ ಬಾರಿ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ ಪಲ್ಲವಿ.
- ಜಗಳದಿಂದ ನೊಂದು ಓಂ ಪ್ರಕಾಶ್ ತನ್ನನ್ನು ಕೊಲೆ ಮಾಡಬಹುದು ಎಂದೆಲ್ಲಾ ಯೋಚಿಸುತಿದ್ದ ಪಲ್ಲವಿ.
- ತಾನು ಕೊಲೆಯಾಗುವ ಬದಲು ತಾನೇ ಅವರನ್ನ ಕೊಲೆ ನಿರ್ಧಾರ ಮಾಡಿದ್ದ ಪಲ್ಲವಿ.
ಈ ಎಲ್ಲಾ ಕಾರಣಗಳಿಂದ ಗಂಡನ ಮೇಲೆ ಪಲ್ಲವಿಗೆ ದ್ವೇಷ ಹುಟ್ಟಿಸಿಕೊಂಡಿತು. ಅಲ್ಲದೇ ಎಲ್ಲಾ ವಿಚಾರಗಳಿಂದ ಮಾನಸಿಕವಾಗಿ ಡಿಸ್ಟರ್ಬ್ ಆಗಿದ್ದರು. ಕೊನೆ ಓಂಪ್ರಕಾಶ್ ಅವರನ್ನು ಪತ್ನಿ ಪಲ್ಲವಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರ ತನಿಖೆ ವೇಳೆ ಈ ಎಲ್ಲಾ ಕಾರಣಗಳು ಸಿಕ್ಕಿವೆ.
ಚಾಕುವಿನಿಂದ 8-10 ಬಾರಿ ಇರಿದು ಕೊಲೆ
ಹೀಗೆ ನಾನಾ ಕಾರಣಗಳಿಂದ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರು 8 ರಿಂದ10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಚಾಕು ಇರಿತದಿಂದ ಓಂ ಪ್ರಕಾಶ್ ಅವರ ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇನ್ನು, ಹೊಟ್ಟೆ ಭಾಗಕ್ಕೆ ಸುಮಾರು 4-5 ಬಾರಿ ಚಾಕುವಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಮನೆಯ ಪಡಸಾಲೆ ತುಂಬ ರಕ್ತ ಹರಿದಿದೆ. ಓಂ ಪ್ರಕಾಶ್ ಅವರು ಸುಮಾರು 15-20 ನಿಮಿಷಗಳ ಕಾಲ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ಪತಿಯ ನರಳಾಟವನ್ನು ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ದರು ಎಂಬ ಮಾಹಿತಿ ದೊರೆತಿದೆ.







