AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ಎ1 ಆರೋಪಿ; ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ

HD Revanna: ರಾಜ್ಯದ ಜನರ ತೆರಿಗೆ ಹಣದಿಂದ ವ್ಯಾಕ್ಸಿನ್ ಖರೀದಿ ಮಾಡಿರೋದು ಅಲ್ವಾ? ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮನೆಯಿಂದ ಹಣ ಕೊಡ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಎ1 ಆರೋಪಿ; ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ: ಮಾಜಿ ಸಚಿವ ಹೆಚ್‌.ಡಿ.ರೇವಣ್ಣ
ಮಾಜಿ ಸಚಿವ ಹೆಚ್.ಡಿ.ರೇವಣ್ಣ
TV9 Web
| Edited By: |

Updated on:Jun 05, 2021 | 4:01 PM

Share

ಹಾಸನ: ರಾಜ್ಯದ ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ ನಡೆದಿದೆ. ಇದಕ್ಕೆ ಪೂರಕ ದಾಖಲೆ ನನ್ನ ಬಳಿ ಇದೆ; ಎಲ್ಲವನ್ನೂ ಬಿಡುಗಡೆ ಮಾಡುವೆ ಎಂದು ಹಾಸನದಲ್ಲಿ JDS ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಗುಡುಗಿದ್ದಾರೆ. ಇದೊಂದು ಲೂಟಿ ಸರ್ಕಾರ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನೇ ಮೊದಲ ಆರೋಪಿಯನ್ನಾಗಿ ಮಾಡಿ, ಹೋರಾಟ ಮಾಡುವೆ ಎಂದು ಹೆಚ್‌.ಡಿ. ರೇವಣ್ಣ ಘೋಷಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ 3 ತಿಂಗಳಲ್ಲಿ 60 ಸಾವಿರ ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯ ಬಗ್ಗೆ ಸರ್ಕಾರಕ್ಕೆ ನಿರ್ಲಕ್ಷ್ಯವಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹೆಚ್‌.ಡಿ. ರೇವಣ್ಣ ಜಿಲ್ಲೆಯಲ್ಲಿ 2ನೇ ಅಲೆಯಲ್ಲಿ ಸಾವಿನ ಪ್ರಮಾಣ ಶೇ. 1.97 ರಷ್ಟಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ನೀಡುವುದರಲ್ಲೂ ರಾಜಕೀಯ ಶುರುವಾಗಿದೆ. ಲಸಿಕೆ ವಿಚಾರದಲ್ಲಿ ರಾಜಕೀಯ ಬೇಡವೆಂದು ಮೊದಲೇ ಹೇಳಿದ್ದೆ ಎಂದು ಶಾಸಕ ಪ್ರೀತಮ್‌ಗೌಡ ವಿರುದ್ಧ ರೇವಣ್ಣ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ಆಟೋ ಚಾಲಕರಿಗೆ ಒಂದೇ ದಿನ ಲಸಿಕೆ ನೀಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್‌ ಮಾಜಿ ಸಚಿವ ರೇವಣ್ಣ ಅವರು ಸರ್ಕಾರದ ಲಸಿಕೆ ಹಾಕಿಸಿದ ಮೇಲೆ ಅವರ ಫೋಟೋ ಹಾಕಿಸಿಕೊಳ್ಳೋದೇಕೆ? ರಾಜ್ಯದ ಜನರ ತೆರಿಗೆ ಹಣದಿಂದ ವ್ಯಾಕ್ಸಿನ್ ಖರೀದಿ ಮಾಡಿರೋದು ಅಲ್ವಾ? ಲಸಿಕೆ ಖರೀದಿಸಲು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮನೆಯಿಂದ ಹಣ ಕೊಡ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.

(Former Karnataka minister jds leader HD Revanna says cm bs yediyurappa is a1 looter in karnataka)

ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್​.ಡಿ.ರೇವಣ್ಣ

Published On - 4:00 pm, Sat, 5 June 21

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​