AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ಅಂದುಕೊಂಡಿದ್ದೀರಾ? ಮಾಜಿ ಸಚಿವ ಎ.ಮಂಜು ಪ್ರಶ್ನೆ

Rohini Sindhuri: ಭೂ ಮಾಫಿಯಾ ನಡೆಸುವ ಅಕ್ರಮ ರಾಜಕಾರಣಿಗಳಿಗೆ ಅಧಿಕಾರಿಗಳೇ ಸಹಾಯ ಮಾಡುತ್ತಾರೆ. ಅಧಿಕಾರಿಗಳು ಸಹಾ ರಿಯಲ್ ಎಸ್ಟೇಟ್ ಮಾಡ್ತಾ ಇದ್ದಾರೆ. ನಾನು ತಪ್ಪು ಮಾಡಿದ್ದರೆ ನಾನು ಜೈಲಿನ ಹಿಂದೆ ಇರುತ್ತಿದ್ದೆ ಎಂದು ಅವರು ಟೀಕೆ ನಡೆಸಿದರು.

ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ಅಂದುಕೊಂಡಿದ್ದೀರಾ? ಮಾಜಿ ಸಚಿವ ಎ.ಮಂಜು ಪ್ರಶ್ನೆ
ರೋಹಿಣಿ ಸಿಂಧೂರಿ ಮತ್ತು ಎ.ಮಂಜು
TV9 Web
| Edited By: |

Updated on:Jun 12, 2021 | 2:50 PM

Share

ಮೈಸೂರು: ಹಾಸನದಲ್ಲಿ ಒಂದೂವರೆ ವರ್ಷ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದರು. ಆಗ 1 ಗುಂಟೆಯಷ್ಟೂ ಸರ್ಕಾರಿ. ಇಲ್ಲಿಯೂ ಭೂಮಿ ಒತ್ತುವರಿ ತೆರವು ಆಗಿರಲಿಲ್ಲ. ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ನೀವು ಅಂದುಕೊಂಡಿದ್ದೀರಾ? ಮಾತನಾಡುವ ರೀತಿ ಅವರು ಇಲ್ಲ ನಾನು ಯಾರ ಪರವಾಗಿ ಮೈಸೂರಿಗೆ ಬಂದಿಲ್ಲ. ಬದಲಿಗೆ ನಿರ್ಗಮಿತ ಡಿಸಿಯ ಕಾರ್ಯ ವೈಖರಿ‌ ತಿಳಿಸಲು ಬಂದಿದ್ದೇನೆ ಎಂದು ಮಾಜಿ ಸಚಿವ ಎ.ಮಂಜು ರೋಹಿಣಿ ಸಿಂಧೂರಿ ಅವರ ವಿರುದ್ಧ ಹರಿಹಾಯ್ದರು.

ಭೂ ಮಾಫಿಯ ಅಕ್ರಮ ರಾಜಕಾರಣಿಗಳಿಗೆ ಅಧಿಕಾರಿಗಳೇ ಸಹಾಯ ಮಾಡುತ್ತಾರೆ. ಅಧಿಕಾರಿಗಳು ಸಹಾ ರಿಯಲ್ ಎಸ್ಟೇಟ್ ಮಾಡ್ತಾ ಇದ್ದಾರೆ. ನಾನು ತಪ್ಪು ಮಾಡಿದ್ದರೆ ನಾನು ಜೈಲಿನ ಹಿಂದೆ ಇರುತ್ತಿದ್ದೆ. ಭೂ ಮಾಫಿಯಾ ಮಾಡುವ ಅಕ್ರಮ ರಾಜಕಾರಣಿಗಳಿಗೆ ಅಧಿಕಾರಿಗಳೇ ಸಹಾಯ ಮಾಡುತ್ತಾರೆ ಎಂದು ಅವರು ಟೀಕೆ ನಡೆಸಿದರು.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್​ ಕ್ಯಾಂಪೇನ್ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರ ಆನ್​ಲೈನ್ ಕ್ಯಾಂಪೇನ್ ನಡೆಯುತ್ತಿದೆ. ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸುವಂತೆ ಒತ್ತಾಯಿಸಿ, ಚೇಂಜ್ ಆರ್ಗ್ ಸಂಸ್ಥೆಯಿಂದ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಅಭಿಯಾನ ಆರಂಭವಾಗಿದೆ. ಈಗಾಗಲೇ ಸುಮಾರು 26ಸಾವಿರ ಜನರಿಂದ ಸಹಿ ಸಂಗ್ರಹವಾಗಿದ್ದು, ರೋಹಿಣಿ ಸಿಂಧೂರಿ ಅವರನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಮನವಿ ಮಾಡಿದೆ. ಚೇಂಜ್ ಆರ್ಗ್ ಸಂಸ್ಥೆ, ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ಮನವಿ ಮಾಡಿದೆ ಎಂಬ ಮಾಹಿತಿ ದೊರೆತಿದೆ.

ಮತ್ತೊಂದು ಆಡಿಯೋ ವೈರಲ್ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಆಡಿಯೋದಲ್ಲಿ ಸಾ.ರಾ.ಮಹೇಶ್ ಮತ್ತು ರಾಜೀವ್ ವಿರುದ್ಧ ಆರೋಪ ಕೇಳಿಬಂದಿದೆ. ತನ್ನ ವರ್ಗಾವಣೆಗೆ ಇವರಿಬ್ಬರ ಷಡ್ಯಂತ್ರವಿದೆ ಎಂದು ದೂರಿದ್ದಾರೆ. ಅಲ್ಲದೇ ಸಾ.ರಾ.ಮಹೇಶ್ ಮತ್ತು ರಾಜೀವ್ ಭೂ ಹಗರಣದಲ್ಲಿ ಭಾಗಿದ್ದಾರೆ ಎನ್ನುವ ಮಾತುಗಳು ವೈರಲ್ ಆದ ಆಡಿಯೋದಲ್ಲಿ ಕೇಳಿಬಂದಿವೆ.

ಇದನ್ನೂ ಓದಿ: ವರ್ಗಾವಣೆಗೂ ಮುನ್ನ ಭೂ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿದ ರೋಹಿಣಿ ಸಿಂಧೂರಿ; ಆದೇಶ ಪ್ರತಿ ವೈರಲ್

ಭಾರತ ಸಿಂಧೂರಿ’ ಟೈಟಲ್ನಲ್ಲಿ ಸಿನಿಮಾ ಆಗಲಿದೆ ರೋಹಿಣಿ ಸಿಂಧೂರಿ ಜೀವನ ಚರಿತ್ರೆ

(Former Minister A Manju questions is IAS Rohini Sindhuri is a good administrator?)

Published On - 2:49 pm, Sat, 12 June 21

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ