AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’

ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on: Dec 24, 2020 | 6:11 PM

Share

ಹಾಸನ: ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

ಖಾಸಗಿ ಶಾಲೆಗಳ ಗೊಡ್ಡು ಬೆದರಿಕೆಗೆ ಹೆದರ ಬೇಡಿ ಎಂದು ಜಿಲ್ಲೆಯಲ್ಲಿ ಭಾರಿ ಶುಲ್ಕ ವಸೂಲಿಗೆ ಇಳಿದ ಶಾಲೆಗಳ ವಿರುದ್ಧ ರೇವಣ್ಣ ಕಿಡಿಕಾರಿದ್ದಾರೆ. ಶಾಲಾ‌, ಕಾಲೇಜು ಮತ್ತು ಅರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಈ ಮೂಲಕ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿಯದೆ ಸರ್ಕಾರಿ ಶಾಲೆ ಸ್ಥಾಪಿಸಿ ಎಂದು ರೇವಣ್ಣ ಸಲಹೆ ಕೊಟ್ಟಿದ್ದಾರೆ.

‘ಬ್ರಿಟಿಷರ ಕಾಲದ ಕಾಮಗಾರಿಗೂ ತಡೆ ನೀಡಲಾಗಿದೆ’ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಮೈತ್ರಿ ಸರ್ಕಾರ ಮಂಜೂರು ಮಾಡಿದ್ದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಜಿಲ್ಲೆಯಲ್ಲಿ 6 ಜನ JDS ಶಾಸಕರಿರೋ ಕಾರಣಕ್ಕೆ ಎಲ್ಲಾ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ರೇವಣ್ಣ ವಾಗ್ದಾಳಿ ನಡೆಸಿದರು.

ಬ್ರಿಟಿಷರ ಕಾಲದಲ್ಲಿ ಭೂಸ್ವಾಧೀನ ಆದ ವಿಮಾನ ನಿಲ್ದಾಣದ ಕಾಮಗಾರಿಗೂ ತಡೆ ನೀಡಲಾಗಿದೆ. ಇದಲ್ಲದೆ, ಹಾಸನದ ಆಲೂರು, ಚಿಕ್ಕಮಗಳೂರಿನ ಬೇಲೂರು ಹಾಸನ ರೈಲ್ವೇ ಮಾರ್ಗದ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಕಾಲದಲ್ಲಿ 462 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು ಎಂದು ಮಾಜಿ ಸಚಿವ ರೇವಣ್ಣ ತೀವ್ರ ಆಕ್ರೋಶ ವ್ಯಕಪಡಿಸಿದರು.

ಹಾಸನದ ಚನ್ನಪಟ್ಟಣದಲ್ಲಿ ಕೆರೆ ಅಭಿವೃದ್ಧಿಗೆ ಸ್ಥಳೀಯ ಶಾಸಕ ಪತ್ರಕೊಟ್ಟು ತಡೆ ನೀಡಿದ್ದಾರೆ. ತೋಟಗಾರಿಕೆ ಕಾಲೇಜು ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ, ಹಾಸನ ಬಂಧಿಖಾನೆ ಯೋಜನೆ ಸ್ಥಗಿತಗೊಂಡಿದೆ. ಹಾಗಾಗಿ, ನಾವು ಸಿಎಂ ಮನೆ ಮುಂದೆ ಧರಣಿಮಾಡಲು ತೀರ್ಮಾನ ಮಾಡಿದ್ದೇವೆ. ಜಿಲ್ಲೆಯ 6 ಜನ ಶಾಸಕರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ರೇವಣ್ಣ ಹೇಳಿದರು.

‘1 ರೂಪಾಯಿ ತಗೊಂಡಿಲ್ಲ, ಆದ್ರೂ ಟ್ರಾನ್ಸ್​ಫರ್​ ಮಾಡಿಕೊಟ್ಟೆ.. ಈಗ ಕೋಟಿ‌ ಲೆಕ್ಕದಲ್ಲಿ ಕೊಟ್ಟು ಬರ್ತಿದಾರೆ’

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್