AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’

ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

‘ಒಬ್ಬೊಬ್ಬರು 50 ಸಾವಿರದಿಂದ 1 ಲಕ್ಷದವರೆಗೆ ಫೀಸ್ ತಗೊಂಡಿದ್ದಾರೆ.. ಮೊದಲು ಖಾಸಗಿ ಶಾಲೆ, ಕಾಲೇಜುಗಳನ್ನು ಮಟ್ಟ ಹಾಕಿ’
ಮಾಜಿ ಸಚಿವ H.D.ರೇವಣ್ಣ
KUSHAL V
|

Updated on: Dec 24, 2020 | 6:11 PM

Share

ಹಾಸನ: ಶಾಲಾ ಕಾಲೇಜು ಓಪನ್‌ ಮಾಡೋ ಮೊದಲು ಖಾಸಗಿ ಶಾಲೆ ಮತ್ತು ಕಾಲೇಜುಗಳನ್ನು ಮಟ್ಟ ಹಾಕಿ. ಒಂದೊಂದು ಶಾಲೆ ಹಾಗೂ ಕಾಲೇಜು 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ಫೀಸ್ ತಗೊಂಡಿದ್ದಾರೆ ಎಂದು ಮಾಜಿ ಸಚಿವ H.D.ರೇವಣ್ಣ ಹೇಳಿದ್ದಾರೆ.

ಖಾಸಗಿ ಶಾಲೆಗಳ ಗೊಡ್ಡು ಬೆದರಿಕೆಗೆ ಹೆದರ ಬೇಡಿ ಎಂದು ಜಿಲ್ಲೆಯಲ್ಲಿ ಭಾರಿ ಶುಲ್ಕ ವಸೂಲಿಗೆ ಇಳಿದ ಶಾಲೆಗಳ ವಿರುದ್ಧ ರೇವಣ್ಣ ಕಿಡಿಕಾರಿದ್ದಾರೆ. ಶಾಲಾ‌, ಕಾಲೇಜು ಮತ್ತು ಅರೋಗ್ಯ ಕ್ಷೇತ್ರಕ್ಕೆ ಹೆಚ್ಚು ಅನುದಾನ ಕೊಡಿ ಎಂದು ಈ ಮೂಲಕ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿಯದೆ ಸರ್ಕಾರಿ ಶಾಲೆ ಸ್ಥಾಪಿಸಿ ಎಂದು ರೇವಣ್ಣ ಸಲಹೆ ಕೊಟ್ಟಿದ್ದಾರೆ.

‘ಬ್ರಿಟಿಷರ ಕಾಲದ ಕಾಮಗಾರಿಗೂ ತಡೆ ನೀಡಲಾಗಿದೆ’ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಮೈತ್ರಿ ಸರ್ಕಾರ ಮಂಜೂರು ಮಾಡಿದ್ದ ಎಲ್ಲಾ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಜಿಲ್ಲೆಯಲ್ಲಿ 6 ಜನ JDS ಶಾಸಕರಿರೋ ಕಾರಣಕ್ಕೆ ಎಲ್ಲಾ ಕಾಮಗಾರಿ ತಡೆಹಿಡಿಯಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ರೇವಣ್ಣ ವಾಗ್ದಾಳಿ ನಡೆಸಿದರು.

ಬ್ರಿಟಿಷರ ಕಾಲದಲ್ಲಿ ಭೂಸ್ವಾಧೀನ ಆದ ವಿಮಾನ ನಿಲ್ದಾಣದ ಕಾಮಗಾರಿಗೂ ತಡೆ ನೀಡಲಾಗಿದೆ. ಇದಲ್ಲದೆ, ಹಾಸನದ ಆಲೂರು, ಚಿಕ್ಕಮಗಳೂರಿನ ಬೇಲೂರು ಹಾಸನ ರೈಲ್ವೇ ಮಾರ್ಗದ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಕುಮಾರಸ್ವಾಮಿ ಸಿಎಂ ಆಗಿದ್ದ ಕಾಲದಲ್ಲಿ 462 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು ಎಂದು ಮಾಜಿ ಸಚಿವ ರೇವಣ್ಣ ತೀವ್ರ ಆಕ್ರೋಶ ವ್ಯಕಪಡಿಸಿದರು.

ಹಾಸನದ ಚನ್ನಪಟ್ಟಣದಲ್ಲಿ ಕೆರೆ ಅಭಿವೃದ್ಧಿಗೆ ಸ್ಥಳೀಯ ಶಾಸಕ ಪತ್ರಕೊಟ್ಟು ತಡೆ ನೀಡಿದ್ದಾರೆ. ತೋಟಗಾರಿಕೆ ಕಾಲೇಜು ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ, ಹಾಸನ ಬಂಧಿಖಾನೆ ಯೋಜನೆ ಸ್ಥಗಿತಗೊಂಡಿದೆ. ಹಾಗಾಗಿ, ನಾವು ಸಿಎಂ ಮನೆ ಮುಂದೆ ಧರಣಿಮಾಡಲು ತೀರ್ಮಾನ ಮಾಡಿದ್ದೇವೆ. ಜಿಲ್ಲೆಯ 6 ಜನ ಶಾಸಕರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ರೇವಣ್ಣ ಹೇಳಿದರು.

‘1 ರೂಪಾಯಿ ತಗೊಂಡಿಲ್ಲ, ಆದ್ರೂ ಟ್ರಾನ್ಸ್​ಫರ್​ ಮಾಡಿಕೊಟ್ಟೆ.. ಈಗ ಕೋಟಿ‌ ಲೆಕ್ಕದಲ್ಲಿ ಕೊಟ್ಟು ಬರ್ತಿದಾರೆ’

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!