AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ […]

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 16, 2019 | 5:11 PM

Share

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಏನಾದ್ರು ಪಾಪರ್ ಚೀಟಿ ತಗೊಂಡಿದ್ಯಾ? ಅಥವಾ ಸರ್ಕಾರ ದಿವಾಳಿ ಆಗಿದ್ಯಾ ಅಂತ ಘೋಷಣೆ ಮಾಡಲಿ. ಬಿಜೆಪಿ ಸರ್ಕಾರ ನೆರೆ‌ಹಾನಿಗೆ ಪರಿಹಾರ ನೀಡುತ್ತಿಲ್ಲ. ವರ್ಗಾವಣೆ ದಂಧೆಯಾದ್ರೂ ಮಾಡ್ಲಿ, ಏನಾದ್ರು ಮಾಡ್ಲಿ ಮೊದಲು ನೆರೆ ಹಾನಿಗೆ ಪರಿಹಾರ ನೀಡ್ಲಿ.  ಈ ಕುರಿತು ಕೂಡಲೆ ವಿಧಾನಸಭೆ ಅಧಿವೇಶನ ಕರೆದು, ನೆರೆ ಹಾನಿ ಬಗ್ಗೆ ಸಮಗ್ರ ಚರ್ಚೆ ಮಾಡಿ ಎಂದು ಹೆಚ್.​ಡಿ.ರೇವಣ್ಣ ಆಗ್ರಹಿಸಿದ್ದಾರೆ.

ದೋಸ್ತಿ ಸರ್ಕಾರ ಅಧಿಕಾರದಲ್ಲಿದ್ದಾಗ ಹೆಚ್​.ಡಿ.ರೇವಣ್ಣ ವಿರುದ್ಧವೇ ವರ್ಗಾವಣೆ ದಂಧೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದ್ರೆ ಇದೀಗ ಮಾಜಿ ಸಚಿವ ಹೆಚ್.​ಡಿ.ರೇವಣ್ಣ ಅವರೇ ಬಿಜೆಪಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡ್ತಿದ್ದಾರೆ.

Published On - 4:37 pm, Mon, 16 September 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್