AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ […]

ದಿನಬೆಳಗಾದ್ರೆ ವರ್ಗಾವಣೆ ದಂಧೆ; ಬಿಜೆಪಿ ವಿರುದ್ಧ ಹರಿಹಾಯ್ದ ಹೆಚ್​ಡಿ ರೇವಣ್ಣ
ಸಾಧು ಶ್ರೀನಾಥ್​
|

Updated on:Sep 16, 2019 | 5:11 PM

Share

ಹಾಸನ: ಪ್ರಧಾನಿ ಮೋದಿ ಅವ್ರು ನಮ್ಮ ಸರ್ಕಾರವನ್ನು 20 ಪರ್ಸೆಂಟ್ ಸರ್ಕಾರ ಎಂದು ಹೇಳುತ್ತಿದ್ರು. ಆದ್ರೆ ಇದೀಗ ದಿನ ಬೆಳಗಾದ್ರೆ ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬಹುಶಃ ಈ ದಂಧೆಯಿಂದ ಬರುವ ಹಣವನ್ನೇ ನೆರೆ ಪರಿಹಾರಕ್ಕೆ ಕೊಡೋಕೆ ಕಾಯ್ತಿದ್ದಾರೆ ಎಂದು ಹೆಚ್​.ಡಿ.ರೇವಣ್ಣ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಒಂದು ಸಮಾಜದ ಅಧಿಕಾರಿಗಳನ್ನ ಗುರಿಯಾಗಿಸಿ ವರ್ಗಾವಣೆ ದಂಧೆ ನಡೆಯುತ್ತಿದೆ. ಹುದ್ದೆಗೆ ಬಂದ ಆರೇ ತಿಂಗಳಿಗೆ ಮಹಿಳಾ‌ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲೇ ಹೀಗೆ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಏನಾದ್ರು ಪಾಪರ್ ಚೀಟಿ ತಗೊಂಡಿದ್ಯಾ? ಅಥವಾ ಸರ್ಕಾರ ದಿವಾಳಿ ಆಗಿದ್ಯಾ ಅಂತ ಘೋಷಣೆ ಮಾಡಲಿ. ಬಿಜೆಪಿ ಸರ್ಕಾರ ನೆರೆ‌ಹಾನಿಗೆ ಪರಿಹಾರ ನೀಡುತ್ತಿಲ್ಲ. ವರ್ಗಾವಣೆ ದಂಧೆಯಾದ್ರೂ ಮಾಡ್ಲಿ, ಏನಾದ್ರು ಮಾಡ್ಲಿ ಮೊದಲು ನೆರೆ ಹಾನಿಗೆ ಪರಿಹಾರ ನೀಡ್ಲಿ.  ಈ ಕುರಿತು ಕೂಡಲೆ ವಿಧಾನಸಭೆ ಅಧಿವೇಶನ ಕರೆದು, ನೆರೆ ಹಾನಿ ಬಗ್ಗೆ ಸಮಗ್ರ ಚರ್ಚೆ ಮಾಡಿ ಎಂದು ಹೆಚ್.​ಡಿ.ರೇವಣ್ಣ ಆಗ್ರಹಿಸಿದ್ದಾರೆ.

ದೋಸ್ತಿ ಸರ್ಕಾರ ಅಧಿಕಾರದಲ್ಲಿದ್ದಾಗ ಹೆಚ್​.ಡಿ.ರೇವಣ್ಣ ವಿರುದ್ಧವೇ ವರ್ಗಾವಣೆ ದಂಧೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದವು. ಆದ್ರೆ ಇದೀಗ ಮಾಜಿ ಸಚಿವ ಹೆಚ್.​ಡಿ.ರೇವಣ್ಣ ಅವರೇ ಬಿಜೆಪಿ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡ್ತಿದ್ದಾರೆ.

Published On - 4:37 pm, Mon, 16 September 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!